LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿ ನೇತೃತ್ವದ ಸರ್ಕಾರ ಫಸ್ಟ್ ಬಾಲಿಗೆ ಸಿಕ್ಸ್ ಹೊಡೆದು ಹಿಟ್ ವಿಕೆಟ್ ಆಗಿದೆ: ಸಿ.ಟಿ ರವಿ ವ್ಯಂಗ್ಯ

ಚಿಕ್ಕಮಗಳೂರು: ಮೊದಲ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಸಿಕ್ಸರ್‌ ಹೊಡೆದ್ರು ಎಂದು ಬಿಂಬಿಸಲಾಗಿತ್ತು. ಈಗ ಹಿಟ್‌ ವಿಕೆಟ್‌ ಆಗಿದೆ ಎಂದು ಎಂಎಲ್‌ಸಿ ಸಿ.ಟಿ ರವಿ  ವ್ಯಂಗ್ಯವಾಡಿದ್ದಾರೆ.

ನಗರದ ಬಸವನಹಳ್ಳಿಯಲ್ಲಿರೋ ತಮ್ಮ ನಿವಾಸದಲ್ಲಿ ಅವರು ಮಾತನಾಡಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಸಂಪುಟದ ಮೊದಲ ವಿಕೆಟ್ ಪತನವಾಗಿದೆ.‌ ಸಂಪುಟ ದರ್ಜೆಯ ಸಚಿವ, ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಾರೆಡ್ಡಿ  ರಾಜೀನಾಮೆ ನೀಡಿರೋದು ಆಂತರಿಕವಾಗಿ ಎಲ್ಲವೂ ಸರಿ ಇಲ್ಲ ಅನ್ನೋದನ್ನ ಸ್ಪಷ್ಟಪಡಿಸಿದೆ. ಇದು ಭವಿಷ್ಯದ ಬೆಳವಣಿಗೆಗಳನ್ನ ಸೂಚಿಸುತ್ತೆ. ನಮ್ಮ ಆತಂಕ ಇದು ಆಡಳಿತದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅನ್ನೋದಾಗಿದೆ ಎಂದರು. 

‌ರಾಮಲಿಂಗಾರೆಡ್ಡಿ ಕೊಟ್ಟ ಮಾತು ತಪ್ಪಿದ್ದಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪ್ರಶ್ನೆಗೆ, ಯಾರು, ಯಾರಿಗೆ ಮಾತು ಕೊಟ್ಟಿದ್ದರು ಎಂಬುದು ನಮಗೆ ಗೊತ್ತಿಲ್ಲ.‌ ಜನರಿಗೆ ಗೊತ್ತಾಗ್ತಿರೋದು ರಾಜೀನಾಮೆ, ಆಂತರಿಕ ಬೇಗುದಿ ಮಾತ್ರ. ಜೊತೆಗೆ, ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಹಣಕಾಸಿನ ಪರಿಸ್ಥಿತಿಗೆ ಕನ್ನಡಿ ಹಿಡಿದಿರೋದು, ರಾಮಲಿಂಗಾರೆಡ್ಡಿ ರಾಜೀನಾಮೆ ಇವೆಲ್ಲಾ ಭವಿಷ್ಯದ ಮುನ್ಸೂಚನೆ ಕೊಡುತ್ತಿವೆ. ಇದರಿಂದ ರಾಜ್ಯಕ್ಕೆ ಒಳ್ಳೆಯದಾಗುತ್ತೆ ಎಂದು ಭಾವಿಸುವಂತಿಲ್ಲ. ಹೇಗೆ ಭಾವಿಸೋಕೆ ಸಾಧ್ಯ ಎಂದು ಪ್ರಶ್ನಿಸಿದರು.

ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ರಚನೆಯೇ ಆಗಿಲ್ಲ. ಈಗಲೇ, ಹಿರಿಯ ಸಚಿವರಲ್ಲೇ ಈ ರೀತಿಯ ಆಂತರಿಕ ಬೇಗುದಿ ಇರುವಾಗ ಪೂರ್ಣ ಪ್ರಮಾಣದಲ್ಲಿ ಸಂಪುಟ ರಚನೆಯಾದಾಗ ಸ್ಫೋಟವಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

ಬಣ ರಾಜಕೀಯ ಹಿಂದೆಯೂ ಇತ್ತು. ಈಗಲೂ ಇದೆ. ಮುಂದೆಯೂ ಇರುತ್ತೆ ಅದು ಬೇರೆ ಪ್ರಶ್ನೆ. ಆದರೆ, ಆ ಬಣ ರಾಜಕೀಯ ರಾಜ್ಯ ಹಾಗೂ ಪಕ್ಷದ ಹಿತವನ್ನ ಮೀರಬಾರದು. ಆ ಸ್ಪರ್ಧೆ ರಾಜಕೀಯ ಹಿತವನ್ನೂ ಮೀರಬಾರದು, ಮೀರಿದರೆ ರಾಜ್ಯ-ಆಡಳಿತದ ಮೇಲೆ ಪರಿಣಾಮ ಬೀರುತ್ತೆ ಎಂದು ಎಚ್ಚರಿಸಿದ್ದಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನಕಪುರದ ಕಂಚನಹಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ – ನಿಟ್ಟುಸಿರು ಬಿಟ್ಟ ಜನಬೆಂಗಳೂರು ನಗರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ಪರೋಕ್ಷವಾಗಿ ಖಾತೆ ಬಿಟ್ಟುಕೊಡಲ್ಲ ಎಂದ ಕೃಷ್ಣಬೈರೇಗೌಡಡಿಕೆಶಿ ನೇತೃತ್ವದ ಸರ್ಕಾರ ಫಸ್ಟ್ ಬಾಲಿಗೆ ಸಿಕ್ಸ್ ಹೊಡೆದು ಹಿಟ್ ವಿಕೆಟ್ ಆಗಿದೆ: ಸಿ.ಟಿ ರವಿ ವ್ಯಂಗ್ಯರಾಮಲಿಂಗಾರೆಡ್ಡಿ ನನ್ನ ಆಪ್ತ ಸ್ನೇಹಿತರು, ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ: ಡಿಕೆಶಿಅಸಮಾಧಾನಗೊಂಡಿದ್ದೇನೆ, ಕೊಟ್ಟ ಮಾತು ತಪ್ಪಿದ್ದಕ್ಕೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ – ಡಿಕೆಶಿಗೆ ರಾಮಲಿಂಗಾರೆಡ್ಡಿ ಶಾಕ್‌ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಖಾದರ್‌ ಸರ್ಪ್ರೈಸ್ ವಿಸಿಟ್ – ಆಸ್ಪತ್ರೆ ಸಿಬ್ಬಂದಿ ಮೇಲೆ ಗರಂವಿವಿ ಸಹಾಯಕ ಪ್ರಾಧ್ಯಾಪಕಿಯ ನಿಗೂಢ ಹತ್ಯೆಅಣ್ಣಾಮಲೈ ರಾಜೀನಾಮೆ ಅಂಗೀಕಾರ – 6 ವರ್ಷಗಳ ಬಿಜೆಪಿ ಸಂಬಂಧ ಕೊನೆಗೊಳಿಸಿದ ಮಾಜಿ ಐಪಿಎಸ್‌ಆಹಾರ ಸಾಕು, ಬೇರೆ ಖಾತೆ ಬೇಕು – ರಾಮಲಿಂಗಾರೆಡ್ಡಿ ಆಯ್ತು, ಈಗ ಮುನಿಯಪ್ಪ ಸರದಿಭಾರತಕ್ಕೆ Su-57 ಸ್ಟೆಲ್ತ್ ಫೈಟರ್ ಜೆಟ್ ಆಫರ್‌ ನೀಡಿದ ಪುಟಿನ್‌