LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ.4ರಿಂದ 8ರವರೆಗೆ ದಾಖಲೆ ಪರಿಶೀಲನೆ: ಕೆಇಎ

Advertisement
Advertisement

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಇದುವರೆಗೂ ದಾಖಲೆ ಪರಿಶೀಲನೆ (Document Verification) ಮಾಡಿಕೊಳ್ಳದವರ ದಾಖಲೆ ಪರಿಶೀಲನೆ ಆಗಸ್ಟ್ 4ರಿಂದ 8ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಚೇರಿಯಲ್ಲಿ ನಡೆಯಲಿದೆ.

ಆಗಸ್ಟ್ 2ರಂದು ಬಿಡುಗಡೆ ಮಾಡುವ ಲಿಂಕ್ ಮೂಲಕ ಸ್ಲಾಟ್ ಬುಕ್ ಮಾಡಿಕೊಂಡೇ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಯಾರೆಲ್ಲ ದಾಖಲೆ ಪರಿಶೀಲನೆಗೆ ಬರಬೇಕು?
ಎನ್‌ಆರ್‌ಐ ವಾರ್ಡ್, ಎನ್‌ಆರ್‌ಐ ಮತ್ತು ಫಾರಿನ್ ನ್ಯಾಷನಲ್ಸ್  – ಈ ವರ್ಗಗಳನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಹಾಜರಾಗಬೇಕು. 

ಸಿಇಟಿ-2026ಕ್ಕೆ ನೋಂದಣಿ ಮಾಡಿ ಪರಿಶೀಲನಾ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳದಿರುವ ಅಭ್ಯರ್ಥಿಗಳು (ಕನ್ನಡ, ಗ್ರಾಮೀಣ, ಭಾಷಾ/ಧಾರ್ಮಿಕ ಅಲ್ಪಸಂಖ್ಯಾತ ಕ್ಲೇಮ್ ಮಾಡಿರುವ) ದಾಖಲೆ ಪರಿಶೀಲನೆಗೆ ಬರಬೇಕು. 

ಹೊಸದಾಗಿ ನೋಂದಣಿ ಮಾಡಿ ಕನ್ನಡ, ಗ್ರಾಮೀಣ, ಭಾಷಾ/ಧಾರ್ಮಿಕ ಅಲ್ಪಸಂಖ್ಯಾತ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಕೂಡ ಪರಿಶೀಲನೆಗೆ ಬರಬೇಕು. 

ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು (ಕ್ಯಾಟಗರಿ – 2ರಿಂದ ಕ್ಯಾಟಗರಿ-8ರವರೆಗೆ) ಕ್ಲೇಮ್ ಮಾಡಿರುವ ಎಲ್ಲ ಅಭ್ಯರ್ಥಿಗಳು, ಕೋರಮಂಗಲದ ಅದೇ ಕಾಲೇಜಿನಲ್ಲಿ ಆ.4ರಿಂದ 8ರವರೆಗೆ ನಡೆಯುವ ದಾಖಲೆ ಪರಿಶೀಲನೆಗೆ ಹಾಜರಾಗಬೇಕು. ಕ್ಯಾಟಗರಿ – RC-1 ಮತ್ತು ಕ್ಯಾಟಗರಿ- RC- 9 ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಬರುವ ಅಗತ್ಯ ಇಲ್ಲ ಎಂದು ಅವರು ವಿವರಿಸಿದ್ದಾರೆ. 

ಅಭ್ಯರ್ಥಿಗಳು ತಮ್ಮ ಕ್ಲೇಮ್ ಪ್ರಕಾರ ಮೂಲ ದಾಖಲೆಗಳ ಸಮೇತ ಪರಿಶೀಲನೆಗೆ ಹಾಜರಾಗಬೇಕು. ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಬೇಕು ಎಂದು ಅವರು ವಿವರಿಸಿದ್ದಾರೆ

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಜೆಪಿ ಪ್ರತಿಭಟನೆ – ಪ್ರಚೋದನಾಕಾರಿ ವಿಷಯ ಹಂಚಿದ ಯೂಟ್ಯೂಬರ್, ಇನ್‌ಫ್ಲುಯೆನ್ಸರ್‌ಗಳ ವಿರುದ್ಧ ಕ್ರಮಕ್ಕೆ ದೆಹಲಿ ಪೊಲೀಸ್ ಸಜ್ಜುಬೆಳಗಾವಿಯಲ್ಲಿ ಕಾರು ಹರಿದು 48 ಕುರಿಗಳು ಸಾವುಸ್ವರಾಜ್ಯದ ಹರಿಕಾರ ತಿಲಕರಿಗೆ ಗೌರವ ನಮನ: ತಿಲಕ ಚೌಕ್‌ನಲ್ಲಿ ಕಿರಣ ಜಾಧವ ನೇತೃತ್ವದಲ್ಲಿ ಅಭಿವಂದನಾ ಕಾರ್ಯಕ್ರಮಮುಂದಿನ 5 ವರ್ಷಗಳಿಗೆ ಪಿಎಂ-ಸಮ್ಮಾನ್ ನಿಧಿ ಯೋಜನೆ ವಿಸ್ತರಣೆ: ಈರಣ್ಣ ಕಡಾಡಿ ಹರ್ಷವಿಶ್ವದ ಡಿಜಿಟಲ್ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ಅಗ್ರಸ್ಥಾನ : ಪ್ರೊ. ದೆಬಬ್ರತ ದಾಸ್ಆ.4ರಿಂದ 8ರವರೆಗೆ ದಾಖಲೆ ಪರಿಶೀಲನೆ: ಕೆಇಎಬಿಡದಿ ಟೌನ್‌ಶಿಪ್‌ಗೆ ವಿರೋಧ – ಪಾದಯಾತ್ರೆಗೆ ಜೆಡಿಎಸ್‌ನಿಂದ ಹೊಸ ದಿನಾಂಕ ನಿಗದಿಪತ್ನಿಗೆ ಅನೈತಿಕ ಸಂಬಂಧ ಆರೋಪ – ವಿಡಿಯೋ ಮಾಡಿ ಹತ್ಯೆ, ಬಳಿಕ ನೇಣಿಗೆ ಶರಣಾದ ಪತಿಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ – ಸೋಮವಾರ ಸಂಜೆ ಪ್ರಮಾಣವಚನ ಫಿಕ್ಸ್ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನ ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳಿ; ಪೊಲೀಸರಿಗೆ ಸಿಎಂ ಸೂಚನೆ