LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕೀಯ ನಿವೃತ್ತಿ ಕುರಿತು ಬಹಿರಂಗ ಹೇಳಿಕೆ ಬೇಡ – ಸಿದ್ದರಾಮಯ್ಯಗೆ ರಾಹುಲ್ ಸಲಹೆ

Advertisement

ನವದೆಹಲಿ: ರಾಜಕೀಯ ನಿವೃತ್ತಿ ಕುರಿತು ಸಾರ್ವಜನಿಕವಾಗಿ ಪದೇಪದೇ ಹೇಳಿಕೆ ನೀಡದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಹತ್ವದ ಸಲಹೆ ನೀಡಿದ್ದಾರೆ.

ದೆಹಲಿ ಭೇಟಿ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ರಾಜಕೀಯ ನಿವೃತ್ತಿ ಬಗ್ಗೆ ಸಾರ್ವಜನಿಕವಾಗಿ ಪದೇಪದೇ ಮಾತನಾಡುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡುವುದರ ಜೊತೆಗೆ ಸಾರ್ವಜನಿಕ ವಲಯಕ್ಕೂ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಇಂತಹ ಬಹಿರಂಗ ಹೇಳಿಕೆಗಳನ್ನು ನೀಡದಿರುವುದು ಸೂಕ್ತ ಎಂದು ರಾಹುಲ್ ಗಾಂಧಿ ಸಲಹೆ ನೀಡಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. 

ರಾಹುಲ್ ಗಾಂಧಿ ಅವರ ಸಲಹೆಗೆ ಸಕಾರಾತ್ಮಕವಾಗಿ ಉತ್ತರಿಸಿದ ಸಿದ್ದರಾಮಯ್ಯ, ತಮ್ಮ ಹೇಳಿಕೆಯ ಹಿಂದಿನ ಸ್ಪಷ್ಟ ಉದ್ದೇಶವನ್ನು ವಿವರಿಸಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ಕುರಿತಷ್ಟೇ ಮಾತನಾಡಿದ್ದೇನೆ. ವಯಸ್ಸಿನ ಕಾರಣದಿಂದಾಗಿ ಮುಂದಿನ ದಿನಗಳಲ್ಲಿ ಚುನಾವಣಾ ಕಣಕ್ಕಿಳಿದು ಸ್ಪರ್ಧಿಸುವುದು ಕಷ್ಟವಾಗಬಹುದು ಎಂದಿದ್ದೇನೆಯೇ ಹೊರತು, ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸಾರ್ವಜನಿಕ ಜೀವನ, ಪಕ್ಷ ಸಂಘಟನೆ ಹಾಗೂ ಕಾಂಗ್ರೆಸ್‌ನ ಎಲ್ಲ ಚಟುವಟಿಕೆಗಳಲ್ಲಿ ಎಂದಿನಂತೆ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. 

ಇದೇ ವೇಳೆ ರಾಜ್ಯ ರಾಜಕೀಯದ ಹಲವು ಪ್ರಮುಖ ವಿಚಾರಗಳ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಮುಂಬರುವ ಸಚಿವ ಸಂಪುಟ ಪುನಾರಚನೆ/ವಿಸ್ತರಣೆಯ ಸಂದರ್ಭದಲ್ಲಿ ತಮ್ಮ ಆಪ್ತರಿಗೆ ಸೂಕ್ತ ಸಚಿವ ಸ್ಥಾನ ಕಲ್ಪಿಸುವುದು. ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ, ರಾಜ್ಯದಲ್ಲಿ ಬಹುಚರ್ಚಿತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿಯ ಜಾರಿ ಹಾಗೂ ಅದರ ರಾಜಕೀಯ ಪರಿಣಾಮಗಳ ಕುರಿತು ಉಭಯ ನಾಯಕರು ಗಂಭೀರ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಗೆ ಖಂಡನೆ – ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪಂಜಿನ ಮೆರವಣಿಗೆಉದ್ಘಾಟನೆಗೂ ಮುನ್ನವೇ ಕಿತ್ತುಬಂದ ಕಾಂಕ್ರೀಟ್; 3 ಕೋಟಿ ವಸತಿ ನಿಲಯದ ಕಳಪೆ ಕಾಮಗಾರಿ ಬಯಲುಪಾವಗಡದಲ್ಲಿ ನಕಲಿ ನಕ್ಸಲ್ ಕಾಟ; 5 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಕೆ8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿಬರಪೀಡಿತ ತಾಲ್ಲೂಕುಗಳಲ್ಲಿ ಇರುವ ಏತ ನೀರಾವರಿ ಯೋಜನೆಗಳ ಮೂಲಕ ಕೆರೆ ತುಂಬಿಸುವಿಕೆಗೆ ಆದ್ಯತೆ ನೀಡಿ: ಅಜಯ್ ಸಿಂಗ್ಇಡಿ ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಂತೋಷ್‌ ಲಾಡ್‌ರಾಜಕೀಯ ನಿವೃತ್ತಿ ಕುರಿತು ಬಹಿರಂಗ ಹೇಳಿಕೆ ಬೇಡ – ಸಿದ್ದರಾಮಯ್ಯಗೆ ರಾಹುಲ್ ಸಲಹೆಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಸಿಹಿಸುದ್ದಿ – KSRTC ಯಿಂದ ಹೆಚ್ಚುವರಿ 2,400 ಬಸ್‌ಗಳ ವ್ಯವಸ್ಥೆವೈದ್ಯಕೀಯದಲ್ಲಿ 384 ಸೀಟು ಉಳಿಕೆ, ದಂತ ವೈದ್ಯಕೀಯದ ಎಲ್ಲಾ ಸೀಟು ಹಂಚಿಕೆ: ಕೆಇಎಐದೇ ದಿನಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಫಲಿತಾಂಶ ಪ್ರಕಟ: ಕೆಇಎ