LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

Advertisement
ಟೆಹ್ರಾನ್‌: ಅಮೆರಿಕ-ಇಸ್ರೇಲ್‌ ಹಾಗೂ ಗಲ್ಫ್‌ ರಾಷ್ಟ್ರಗಳ ವಿರುದ್ಧ ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪದ ಕೇಂದ್ರ ಬಿಂದು ಇರಾನ್‌ನ ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪವಾಗಿದೆ. ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪ ಉಂಟಾಗಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮಿಲಿಟರಿ ದಾಳಿಗಳನ್ನು ತೀವ್ರಗೊಳಿಸಿವೆ. ಈ ಪ್ರದೇಶದಲ್ಲಿ ತೀವ್ರ ಸಂಘರ್ಷದ ನಡುವೆ ಭೂಕಂಪ ಸಂಭವಿಸಿದೆ.

ಈಗಾಗಲೇ ಉದ್ವಿಗ್ನಗೊಂಡಿರುವ ಪ್ರಾದೇಶಿಕ ಯುದ್ಧಗಳಿಗೆ ಈ ಕಂಪನವು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಭೂಕಂಪದಿಂದ ಉಂಟಾದ ನಷ್ಟ, ಸಾವು-ನೋವುಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಯುಎಸ್‌-ಇಸ್ರೇಲ್‌ ಏರ್‌ಸ್ಟ್ರೈಕ್‌ಗೆ ಭಾನುವಾರ ಇರಾನಿನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯಾಯಿತು. ಇರಾನಿನ ಮಿಲಿಟರಿ ಮತ್ತು ಕಾರ್ಯತಂತ್ರದ ವ್ಯವಸ್ಥೆಗಳ ಮೇಲೆ ವಾಯು ಮತ್ತು ಕ್ಷಿಪಣಿ ದಾಳಿ ನಡೆಸಲಾಗಿದೆ. ಇದು ಮಧ್ಯಪ್ರಾಚ್ಯದಾದ್ಯಂತ ವ್ಯಾಪಕ ಪ್ರತೀಕಾರಕ್ಕೆ ಕಾರಣವಾಯಿತು.

ಮಧ್ಯಪ್ರಾಚ್ಯದಲ್ಲಿ ಹೋರಾಟ ಉಲ್ಬಣಗೊಳ್ಳುತ್ತಿದ್ದಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 4 ರಿಂದ 5 ವಾರಗಳಿಗೂ ಹೆಚ್ಚು ಅವಧಿವರೆಗೆ ಇರಾನ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುವ ಸಾಮರ್ಥ್ಯವನ್ನು ಅಮೆರಿಕ ಹೊಂದಿದೆ ಎಂದು ಮಾತನಾಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರ್ನಾಲ್ಕು ದಿನಗಳಿಂದ ಮಳೆ ಬರುತ್ತಿರುವುದರಿಂದ ಆಶಾಭಾವ ಮೂಡಿದೆ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೂಳಿಬೆಂಗಳೂರಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ದಾಳಿ – ಮಾರಕಾಸ್ತ್ರಗಳು ಪತ್ತೆಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ – ಹಾರಂಗಿ ಜಲಾಶಯಕ್ಕೆ 1,470 ಕ್ಯೂಸೆಕ್ ಒಳಹರಿವುರಾಜ್ಯದ ಹಲವೆಡೆ 2-3 ದಿನ ಮಳೆ ಮುನ್ಸೂಚನೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮಜೈಶ್‌ ಉಗ್ರರ ಜೊತೆ ನಂಟು; ಗುಜರಾತಲ್ಲಿ 8 ಮಂದಿ ಅರೆಸ್ಟ್‌ಪತಿಯ ಕೊಂದು ಬಾತ್ ರೂಂನಲ್ಲೇ ಹೂತಿದ್ದ ಪತ್ನಿಬಿಎಲ್‌ಒಗಳೇ ಒಂದು ಅರ್ಜಿಗೆ 50 ರೂಪಾಯಿ ಕೊಟ್ಟು ಕೆಲ ಕಾರ್ಯಕರ್ತರಿಂದ ಭರ್ತಿ ಮಾಡಿಸ್ತಿದ್ದಾರೆ: ಸಾ.ರಾ.ಮಹೇಶ್ ಆರೋಪಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲುSIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ – ವಿಎ ಸಾವು ಬದುಕಿನ ನಡುವೆ ಹೋರಾಟ