LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇರಾನ್-ಇಸ್ರೇಲ್-ಅಮೆರಿಕ ಯುದ್ಧದ ಎಫೆಕ್ಟ್; ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ

Advertisement
Advertisement
Advertisement

ಕೆಲ ದೇಶಗಳ ನೌಕಾ ನೆಲೆಗಳು ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಇದರ ಎಫೆಕ್ಟ್ ಇದೀಗ ಬೆಂಗಳೂರಿನ ಡ್ರೈ ಫ್ರೂಟ್ಸ್ ಮಾರುಕಟ್ಟೆ ಮೇಲೂ ಬಿದ್ದಿದೆ. ಡ್ರೈ ಫ್ರೂಟ್ಸ್ ಸಪ್ಲೈ ಕಡಿಮೆಯಾಗಿದ್ದು, ಬೆಲೆಗಳು ಶೇ.30ರಿಂದ 40ರಷ್ಟು ಏರಿಕೆಯಾಗಿದೆ.

ಇರಾನ್ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಿಂದ ರಾಜ್ಯಕ್ಕೆ ಬರುತ್ತಿದ್ದ ಡ್ರೈ ಫ್ರೂಟ್ಸ್ ಸಪ್ಲೈ ಬಹುತೇಕ ಸ್ಥಗಿತವಾಗಿದೆ. ಕಳೆದ ಮೂರು ತಿಂಗಳಿನಿಂದ ಬೆಂಗಳೂರಿಗೆ ಬರುತ್ತಿದ್ದ ಡ್ರೈ ಫ್ರೂಟ್ಸ್‌ನಲ್ಲಿ ಕೊರತೆ ಎದುರಾಗಿದೆ.

ಇರಾನ್ ಸೇರಿದಂತೆ ಮಧ್ಯಪ್ರಾಚ್ಯದ ಹಲವು ದೇಶಗಳು ಡ್ರೈಫ್ರೂಟ್ಸ್‌ ಉತ್ಪಾದನೆಗೆ ಹೆಸರುವಾಸಿಯಾಗಿವೆ. ಆದರೆ, ಸುಮಾರು ಮೂರು ತಿಂಗಳ ಹಿಂದೆ ನಡೆದ ಇರಾನ್-ಇಸ್ರೇಲ್-ಅಮೆರಿಕ ಯುದ್ಧದ ಎಫೆಕ್ಟ್‌ನಿಂದ ಇರಾನ್‌ನ ಬಂದರ್ ಅಬ್ಬಾಸ್ ಸೇರಿದಂತೆ ಹಲವು ನೌಕಾ ನೆಲೆಗಳು ಹಾನಿಗೊಳಗಾಗಿವೆ. ಇವು ಇನ್ನೂ ಸಂಪೂರ್ಣವಾಗಿ ಸಹಜ ಸ್ಥಿತಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಹೀಗಾಗಿ ಇರಾನ್, ಸೌದಿ, ಟುನೀಷಿಯಾ ಸೇರಿದಂತೆ ಮಧ್ಯಪ್ರಾಚ್ಯದ ದೇಶಗಳಿಂದ ಬೆಂಗಳೂರಿಗೆ ಆಮದಾಗುತ್ತಿದ್ದ ಬಹುತೇಕ ಡ್ರೈ ಫ್ರೂಟ್ಸ್ ಸಪ್ಲೈ ಸ್ಥಗಿತವಾಗಿದೆ. ಇನ್ನು ಕೆಲ ಸ್ಥಳಗಳಿಂದ ಬರುತ್ತಿದ್ದ ಸಪ್ಲೈ ಪ್ರಮಾಣವೂ ಕಡಿಮೆಯಾಗಿದೆ. ಇದರ ಜೊತೆಗೆ ಡ್ರೈ ಫ್ರೂಟ್ಸ್‌ನ್ನು ಬೆಂಗಳೂರಿಗೆ ತರಲು ಸುತ್ತಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಶಿಪ್ಪಿಂಗ್ ಲೈನ್ ಚಾರ್ಜ್ ಕೂಡ ಡಬಲ್ ಆಗಿದೆ. ಒಂದು ಕಂಟೇನರ್‌ಗೆ ಈ ಹಿಂದೆ 1,500 ಡಾಲರ್ ಇದ್ದ ಚಾರ್ಜ್ ಇದೀಗ 4,000 ಡಾಲರ್‌ಗೆ ಏರಿಕೆಯಾಗಿದೆ. ಇದರ, ಪರಿಣಾಮ ಡ್ರೈ ಫ್ರೂಟ್ಸ್ ಬೆಲೆಯಲ್ಲಿ ಶೇ.30ರಿಂದ 40ರಷ್ಟು ಏರಿಕೆಯಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಸಾವು200ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸುವ ಹುನ್ನಾರ – ಬಿಜೆಪಿ ಏಜೆಂಟ್‌ ಬಂಧನಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ – ಮಹಿಳೆ ಸಾವು, ನಾಲ್ವರಿಗೆ ಗಾಯತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳುಇರಾನ್-ಇಸ್ರೇಲ್-ಅಮೆರಿಕ ಯುದ್ಧದ ಎಫೆಕ್ಟ್; ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆಬೆಂಗಳೂರಲ್ಲಿ ಅಹಿಂದ ಸಮಾವೇಶ ಮಾಡುತ್ತಿಲ್ಲ: ಯತೀಂದ್ರ ಸಿದ್ದರಾಮಯ್ಯವಿಟ್ಲಪಿಂಡಿ ಉತ್ಸವ ವೇಳೆ ರಥದಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮುಖ್ಯ ಶಿಕ್ಷಕ ಸಾವುಸಚಿವ ಬಾಲಕೃಷ್ಣರ ಕಾರು ತಡೆದು, ದೃಷ್ಟಿ ತೆಗೆದು ಊಟಕ್ಕೆ ಕರೆದ ವೃದ್ಧೆಸರ್ಕಾರಿ ಗೋಮಾಳ, ಕೆರೆ ಜಾಗ ಒತ್ತುವರಿ ಆರೋಪ – ನಾಲ್ಕು ಲಾರಿ, ಟ್ರ‍್ಯಾಕ್ಟರ್ ಸೀಜ್