LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ವಿವಿಧ ಜಿಲ್ಲಾ ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆ

Advertisement

ಬೀದರ್/ಚಾಮರಾಜನಗರ/ಬಾಗಲಕೋಟೆ: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ  ಮೇಲ್ ಬಂದಿದೆ.

ಇಂದು (ಜೂ.27) ಹಾವೇರಿ, ಧಾರವಾಡ, ಕೊಡಗು, ಬೀದರ್, ಬಾಗಲಕೋಟೆ ಹಾಗೂ ಚಾಮರಾಜನಗರದ ಜಿಲ್ಲಾ ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿದೆ.

ಬೀದರ್  ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ಹಾಗೂ ತಹಶೀಲ್ದಾರ್ ಕಚೇರಿಯ ಇ-ಮೇಲ್‌ಗೆ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಈ ಹಿನ್ನೆಲೆ ಬೀದರ್ ಪೊಲೀಸರು ಹೈ ಅಲರ್ಟ್ ಆಗಿದ್ದು, ಮಾರ್ಕೆಟ್ ಪೊಲೀಸರಿಂದ ನ್ಯಾಯಾಲಯದಲ್ಲಿ ತಪಾಸಣೆ ಮಾಡಲಾಗುತ್ತಿದೆ. ಜೊತೆಗೆ ಸ್ಥಳಕ್ಕೆ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರೀಯ ದಳದಿಂದ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಸದ್ಯ ಪೊಲೀಸರು ಹುಸಿ ಬಾಂಬ್ ಕರೆಯಾ? ಅಥವಾ ನಿಜವೊ? ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

ಶುಕ್ರವಾರ (ಜೂ.26) ಸಂಜೆ 7 ಗಂಟೆಗೆ ಇಮೇಲ್ ಸಂದೇಶ ಬಂದಿದೆ. ಇಂದು 11 ಗಂಟೆಗೆ ರೆಕಾರ್ಡ್ ರೂಂನಲ್ಲಿರುವ ಕಂಪ್ಯೂಟರ್‌ನಲ್ಲಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಚೆಕ್ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಆತಂಕದಲ್ಲಿ ಕೋರ್ಟ್‌ನಿಂದ ವಕೀಲರು ಹಾಗೂ ಸಾರ್ವಜನಿಕರು ಹೊರಬಂದಿದ್ದಾರೆ.

ಬಾಗಲಕೋಟೆ  ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಸಿಲಿಕಾನ್ ಡೈನಾಮೈಟ್ ಬಾಂಬ್‌ಗಳನ್ನು ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. [email protected] ಎಂಬ ಅನುಮಾನಾಸ್ಪದ ಐಡಿಯಿಂದ ಮೇಲ್ ಬಂದಿದೆ. ರೆಕಾರ್ಡ್ ರೂಮ್‌ನಲ್ಲಿ ಮೂರು ಬಾಂಬ್ ಹಾಗೂ ಮೊದಲ ಮಹಡಿಯ ಇ-ಸೇವಾಕೇಂದ್ರದಲ್ಲಿ ಎರಡು ಬಾಂಬ್ ಇಡಲಾಗಿದ್ದು, ಟೈಮ್ ಬಾಂಬ್ ಮಧ್ಯಾಹ್ನ 2:10ಕ್ಕೆ ಬ್ಲಾಸ್ಟ್ ಆಗಲಿದೆ ಎಂದು ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ. ನಕಲಿ ಡೊಮೇನ್ ಆದರೂ ಕೂಡ ಜಿಲ್ಲಾ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ಕೋರ್ಟ್ ಆವರಣ, ಜಡ್ಜ್ ಹಾಲ್ ಹಾಗೂ ವಿವಿಧ ಕೊಠಡಿ ಸೇರಿ ಇಡೀ ಕೋರ್ಟ್ ತಪಾಸಣೆ ನಡೆಸಿದ್ದಾರೆ.

ಇನ್ನೂ ಚಾಮರಾಜನಗರ  ಜಿಲ್ಲಾ ಕೋರ್ಟ್‌ಗೆ ಮತ್ತೇ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್‌ಗೆ ಬೆದರಿಕೆ ಬಂದಿದ್ದು, ಪೊಲೀಸರು ತಪಾಸಣೆ ನಡೆಸಿದ್ದಾರೆ. ಇನ್ನೂ ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಬೀಡುಬಿಟ್ಟಿದ್ದು, ಕೋರ್ಟ್ ಆವರಣ ತಪಾಸಣೆ ಮಾಡಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ – ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ ವಚನಾನಂದ ಸ್ವಾಮೀಜಿಮೊಹರಂ ವೇಳೆ ದುಷ್ಕೃತ್ಯಕ್ಕೆ ಸಂಚು – ವಿಷ ತುಂಬಿದ 14,900 ಕ್ಯಾಪ್ಸೂಲ್ ಜೊತೆ ಪುಣೆಯಲ್ಲಿ ಓರ್ವನ ಬಂಧನRSS ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಸಮನ್ಸ್‌ರಾಜ್ಯದ ವಿವಿಧ ಜಿಲ್ಲಾ ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ – ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ ಸ್ಫೋಟರಾಮಮಂದಿರಕ್ಕೆ ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೆ ಲೆಕ್ಕ ಎಲ್ಲಿ – ಬಿ.ಕೆ ಹರಿಪ್ರಸಾದ್‌ ಪ್ರಶ್ನೆಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ – ಹೃದಯಾಘಾತದಿಂದ ಸಾವುಕಾರಲ್ಲೇ ಪ್ರೇಮಿಗಳ ಗಲಾಟೆ – ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆಮೃತ ಪರುತಗೌಡ ಪಾಟೀಲ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ಸತೀಶ್ ಜಾರಕಿಹೊಳಿನಿಸರ್ಗ ಕಾಲೋನಿ ಹಾಗೂ ಫಾರ್ಚುನ ಕಾಲೋನಿ ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸಿಫ್ ( ರಾಜು) ಸೆಟ್