LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾವಗಡದಲ್ಲಿ ನಕಲಿ ನಕ್ಸಲ್ ಕಾಟ; 5 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಕೆ

Advertisement

ತುಮಕೂರು: ಒಂದು ತಿಂಗಳ ಹಿಂದೆ ರೈತರ ಪಂಪ್‌ಸೆಟ್‌ಗೆ  ಬಾಂಬ್ ಇಟ್ಟು ಸ್ಫೋಟಿಸಿದ್ದಾನೆ ಎನ್ನಲಾದ ನಕಲಿ ನಕ್ಸಲ್  ಕನಕಲ ಬಂಡೆ ವೆಂಕಟೇಶ್ ಇದೀಗ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಆರು ಮಂದಿ ನಕ್ಸಲರು ಶರಣಾಗುವ ಮೂಲಕ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ. ಆದರೆ, ತುಮಕೂರು ಜಿಲ್ಲೆ ಪಾವಗಡದಲ್ಲಿ ನಕಲಿ ನಕ್ಸಲ್ ಕಾಟ ಮಾತ್ರ ನಿಂತಿಲ್ಲ.

ಪಾವಗಡ ತಾಲೂಕಿನ ಗಂಗಸಾಗರದ ಮುತ್ತವ್ವ ಭೂಷಪ್ಪ ಎಂಬುವವರ ತೋಟದ ಶೆಡ್ ಬಾಗಿಲಿಗೆ ಬೆದರಿಕೆ ಪತ್ರವೊಂದನ್ನು ಅಂಟಿಸಲಾಗಿದೆ. ಸಿಪಿಐ(ಎಂಎಲ್), ಸಿಪಿಎಂ ಪೀಪಲ್ ವಾರ್ ಜನಶಕ್ತಿ ಪಾರ್ಟಿ ಹೆಸರಿನಲ್ಲಿ ತೆಲುಗಿನಲ್ಲಿ ಪತ್ರ ಬರೆಯಲಾಗಿದೆ ಎನ್ನಲಾಗಿದೆ.

ಸೆಪ್ಟೆಂಬರ್ 16ರೊಳಗೆ 5 ಲಕ್ಷ ರೂಪಾಯಿ ಹಣವನ್ನು ವಕೀಲ ಸುಬ್ಬರಾಯಪ್ಪ ಅವರ ಬಳಿ ಕಳಿಸಿಕೊಡಬೇಕು. ಬಳಿಕ ಆ ಹಣವನ್ನು ಕ್ರಾಮೆಡ್ ದೇವಣ್ಣ ದಳಂ ಅವರಿಗೆ ನೀಡಬೇಕು ಎಂದು ಪತ್ರದಲ್ಲಿ ಬರೆಯಲಾಗಿದೆ.

ಕನಕಲ ಬಂಡೆ ವೆಂಕಟೇಶ್ ವಿರುದ್ಧ ಹಲವು ಕೇಸ್‌ಗಳಿದ್ದು, ಅವುಗಳನ್ನು ನಡೆಸಲು ಹೆಚ್ಚಿನ ಹಣದ ಅವಶ್ಯಕತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

ಬೆದರಿಕೆ ಪತ್ರ ಸಿಕ್ಕ ಹಿನ್ನೆಲೆಯಲ್ಲಿ ಮುತ್ತವ್ವ ಭೂಷಪ್ಪ ಅವರ ಕುಟುಂಬ ಪಾವಗಡ ಪೊಲೀಸರಿಗೆ ದೂರು ನೀಡಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಗೆ ಖಂಡನೆ – ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪಂಜಿನ ಮೆರವಣಿಗೆಉದ್ಘಾಟನೆಗೂ ಮುನ್ನವೇ ಕಿತ್ತುಬಂದ ಕಾಂಕ್ರೀಟ್; 3 ಕೋಟಿ ವಸತಿ ನಿಲಯದ ಕಳಪೆ ಕಾಮಗಾರಿ ಬಯಲುಪಾವಗಡದಲ್ಲಿ ನಕಲಿ ನಕ್ಸಲ್ ಕಾಟ; 5 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಕೆ8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿಬರಪೀಡಿತ ತಾಲ್ಲೂಕುಗಳಲ್ಲಿ ಇರುವ ಏತ ನೀರಾವರಿ ಯೋಜನೆಗಳ ಮೂಲಕ ಕೆರೆ ತುಂಬಿಸುವಿಕೆಗೆ ಆದ್ಯತೆ ನೀಡಿ: ಅಜಯ್ ಸಿಂಗ್ಇಡಿ ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಂತೋಷ್‌ ಲಾಡ್‌ರಾಜಕೀಯ ನಿವೃತ್ತಿ ಕುರಿತು ಬಹಿರಂಗ ಹೇಳಿಕೆ ಬೇಡ – ಸಿದ್ದರಾಮಯ್ಯಗೆ ರಾಹುಲ್ ಸಲಹೆಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಸಿಹಿಸುದ್ದಿ – KSRTC ಯಿಂದ ಹೆಚ್ಚುವರಿ 2,400 ಬಸ್‌ಗಳ ವ್ಯವಸ್ಥೆವೈದ್ಯಕೀಯದಲ್ಲಿ 384 ಸೀಟು ಉಳಿಕೆ, ದಂತ ವೈದ್ಯಕೀಯದ ಎಲ್ಲಾ ಸೀಟು ಹಂಚಿಕೆ: ಕೆಇಎಐದೇ ದಿನಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಫಲಿತಾಂಶ ಪ್ರಕಟ: ಕೆಇಎ