ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ.
ನಾಗೇಂದ್ರ ( ಅವರ ಜಾಮೀನು ಆದೇಶದಲ್ಲಿದ್ದ ಪ್ರಮುಖ ಷರತ್ತೊಂದಕ್ಕೆ ನ್ಯಾಯಾಲಯವು ತಡೆ ನೀಡಿದ್ದು, ಪ್ರಯಾಣಕ್ಕೆ ಸಂಬಂಧಿಸಿದಂತೆ ಸಡಿಲಿಕೆ ನೀಡಿದೆ.
ವಿಶೇಷ ನ್ಯಾಯಾಲಯವು ಜಾಮೀನು ನೀಡುವಾಗ “ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳಬಾರದು” ಎಂದು ವಿಧಿಸಿದ್ದ ಷರತ್ತಿಗೆ ಹೈಕೋರ್ಟ್ ತಡೆ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2024ರ ಅಕ್ಟೋಬರ್ 14ರಂದು ನಾಗೇಂದ್ರ ಅವರಿಗೆ ಜಾಮೀನು ನೀಡುವಾಗ ಕರ್ನಾಟಕ ರಾಜ್ಯದಿಂದ ಹೊರಗೆ ಪ್ರಯಾಣಿಸಬೇಕಾದರೆ ನ್ಯಾಯಾಲಯದಿಂದ ಮುಂಚಿತವಾಗಿ ಲಿಖಿತ ಅನುಮತಿ ಪಡೆಯುವುದು ಕಡ್ಡಾಯ ಎಂಬ ಸ್ಪಷ್ಟ ಷರತ್ತು ವಿಧಿಸಿತ್ತು.

