LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಘಟ್ಟದಲ್ಲಿ ವರುಣನ ಅಬ್ಬರ – ಹಾಲ್ನೊರೆಯಂತೆ ಧುಮ್ಮುಕ್ಕುತ್ತಿದೆ ಗೋಕಾಕ್ ಫಾಲ್ಸ್

Advertisement
Advertisement

ಬೆಳಗಾವಿ: ಕಳೆದ ಕೆಲವು ದಿನಗಳ ವಿರಾಮದ ಬಳಿಕ ಇದೀಗ ಪಶ್ಚಿಮ ಘಟ್ಟದಲ್ಲಿ  ವರುಣನ ಅಬ್ಬರ ಜೋರಾಗಿದೆ. ಘಟಪ್ರಭಾ ನದಿಗೆ  ಜೀವಕಳೆ ಬಂದಿದ್ದು, ಗೋಕಾಕ್ ಫಾಲ್ಸ್, ಬಟವಾಡೆ ಜಲಪಾತದಲ್ಲಿ ನೀರು ಹಾಲ್ನೊರೆಯಂತೆ ಧುಮ್ಮುಕ್ಕುತ್ತಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗೋಕಾಕ್ ಜಲಪಾತವು  ಮೈದುಂಬಿ ಹರಿಯುತ್ತಿದೆ. ಮಳೆ ಹೆಚ್ಚಾದ ಹಿನ್ನೆಲೆ ದೃಶ್ಯ ವೈಭವವೇ ಸೃಷ್ಟಿಯಾಗಿದ್ದು, 171 ಅಡಿ ಮೇಲಿನಿಂದ ನೀರು ಹಾಲ್ನೊರೆಯಂತೆ ಧುಮ್ಮುಕ್ಕುತ್ತಿದೆ. 

ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಜಲಪಾತಗಳಿಗೆ ಜೀವಕಳೆ ಬಂದಿದೆ. ಖಾನಾಪುರ ತಾಲೂಕಿನ ಬಟವಾಡೆ ಜಲಪಾತ 50 ಅಡಿ ಮೇಲಿಂದ ಧುಮ್ಮಿಕ್ಕುತ್ತಿದೆ. ಜಲಪಾತಗಳಿಗೆ ಜೀವ ಕಳೆ ಬಂದರೂ ಪ್ರವಾಸಿಗರಿಗೆ ತೀವ್ರ ನಿರಾಸೆಯಾಗಿದ್ದು, ಜಲಪಾತಗಳ ಪ್ರವೇಶಕ್ಕೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಈ ಹಿನ್ನೆಲೆ ಪ್ರವಾಸಿಗರಿಲ್ಲದೇ ಜಲಪಾತಗಳು ಬಣಗುಟ್ಟುತ್ತಿವೆ.

ಇನ್ನೂ ಶಿಂಗಳಾಪುರ ಮಾರ್ಕಂಡೇಯ ಹಾಗೂ ಘಟಪ್ರಭಾ ನದಿ ಸ್ಥಾನದಲ್ಲಿ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಗೋಕಾಕ್ ನಗರ ಹಾಗೂ ಶಿಂಗಳಾಪುರ ಗ್ರಾಮದ ಮಧ್ಯೆಯಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆ ಆಗಿದೆ. ಮುಳುಗಡೆಯಾದ ಹಿನ್ನೆಲೆ ಸವಾರರು ಪರ್ಯಾಯ ಮಾರ್ಗ ಬಳಸುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ – ಕಿಡಿಗೇಡಿಗಳು ಕೊನೆಗೂ ಲಾಕ್‌!ಶಾಲೆಗೆ ತೆರಳುವಾಗ ಥಾರ್‌ ಡಿಕ್ಕಿ – 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವುಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ರಿಂದ ಪ್ರಧಾನಿಗೆ ಸಿದ್ಧವಾಗಿದೆ ವಿಶೇಷ ಉಡುಗೊರೆಕೊಡಗಿನಲ್ಲಿ ಗಾಳಿ ಮಳೆ ಆರ್ಭಟ ಜೋರು – ಹಾರಂಗಿ ಜಲಾಶಯದಿಂದ 5,365 ಕ್ಯೂಸೆಕ್ ನೀರು ಕಾವೇರಿ ನದಿಗೆಪಶ್ಚಿಮ ಘಟ್ಟದಲ್ಲಿ ವರುಣನ ಅಬ್ಬರ – ಹಾಲ್ನೊರೆಯಂತೆ ಧುಮ್ಮುಕ್ಕುತ್ತಿದೆ ಗೋಕಾಕ್ ಫಾಲ್ಸ್ಎಸ್‌ಐಆರ್‌ ಸಮೀಕ್ಷೆ| ಅಧಿಕಾರಿಯ ಮೇಲೆ ಹಲ್ಲೆ – ರಕ್ತ ಬರುವಂತೆ ಹೊಡೆದಿದ್ದ ಡಿಜೆಹಳ್ಳಿಯ ಇಬ್ಬರು ಅರೆಸ್ಟ್‌ಸತ್ಯದ ಅನ್ವೇಷಣೆಯ ಮೂಲಕ ಜ್ಞಾನ ಸಂಪಾದಿಸಿ ಜೀವನದಲ್ಲಿ ಅಳವಡಿಸಿಕೊಳ್ಳುವವರೇ ನಿಜವಾದ ಶಿಷ್ಯರು: ಡಾ. ಎಂ.ಪಿ. ಚಂದ್ರಿಕಾಜ್ಞಾನಯಾನಕ್ಕೆ ದೀಪ ಹಚ್ಚಿ, ಬದುಕಿನ ಪಯಣದಲ್ಲಿ ಜೊತೆ ನಿಲ್ಲುವವರೇ ಗುರುಗಳು: ಶ್ರೀಮತಿ ಮಂಗಳಗೌರಿ ಹೆಗ್ಡೆಎಸ್‌ಐಆರ್‌ ಸಮೀಕ್ಷೆ| ಅಧಿಕಾರಿಯ ಮೇಲೆ ಹಲ್ಲೆ – ರಕ್ತ ಬರುವಂತೆ ಹೊಡೆದಿದ್ದ ಡಿಜೆಹಳ್ಳಿಯ ಇಬ್ಬರು ಅರೆಸ್ಟ್‌ಸುಪ್ರೀಂನಿಂದ ಜಾಮೀನು ರದ್ದು – ಮೇಘಾಲಯ ಕೋರ್ಟ್‌ಗೆ ಶರಣಾದ ಹನಿಮೂನ್ ಹಂತಕಿ