LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ

Advertisement
Advertisement

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿ ಸರ್ಕಾರಿ ಜಮೀನಿನಲ್ಲಿ ಫಲವೃಕ್ಷೋದ್ಯಾನ ಅಭಿವೃದ್ಧಿಪಡಿಸಿ, ಅದನ್ನು ವಾರ್ಷಿಕ ಆಧಾರದ ಮೇಲೆ ಪಾರದರ್ಶಕ ಹರಾಜು ಮೂಲಕ ಅದೇ ಗ್ರಾಮದ ಯುವಕರಿಗೆ ಗುತ್ತಿಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ  ಸೂಚನೆ ನೀಡಿದ್ದಾರೆ.

ಈ ಕುರಿತು ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಪ್ರತಿ ಗ್ರಾಮದಲ್ಲೂ ಫಲವೃಕ್ಷೋದ್ಯಾನ ನಿರ್ಮಿಸಿದರೆ ಹಸಿರು ಹೊದಿಕೆ ಹೆಚ್ಚುವುದರ ಜೊತೆಗೆ ನಿರುದ್ಯೋಗಿ ಮತ್ತು ಭೂರಹಿತ ಯುವಕರಿಗೆ ಉದ್ಯೋಗ ಸಿಗಲಿದೆ. ಇದರಿಂದ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆಗೆ ಹೆಚ್ಚುವರಿ ಆದಾಯವೂ ಬರಲಿದೆ ಎಂದು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಇಲಾಖೆಗೆ ಸೇರಿದ ಸರ್ಕಾರಿ ಜಮೀನಿನಲ್ಲಿ ಮಾವು, ಸಪೋಟ, ಬೆಟ್ಟನೆಲ್ಲಿಕಾಯಿ, ತೆಂಗು, ಹೈಬ್ರೀಡ್ ನೇರಳೆ, ಹುಣಸೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯುವಂತೆ ಸಲಹೆ ನೀಡಿದ್ದಾರೆ.

ಇದರಿಂದ ಸರ್ಕಾರಿ ಜಮೀನುಗಳ ಒತ್ತುವರಿ ತಡೆಯಲು ಸಾಧ್ಯವಾಗುತ್ತದೆ. ಅಗತ್ಯ ಬಂದರೆ ಈ ಮರಗಳನ್ನು ತೆರವುಗೊಳಿಸಿ ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಭೂಮಿಯನ್ನು ಬಳಸಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದರ ಜೊತೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಮತ್ತು ಸಂಪರ್ಕ ರಸ್ತೆಗಳ ಎರಡೂ ಬದಿಯಲ್ಲಿ ಮಾವು, ಹುಣಸೆ ಸೇರಿದಂತೆ ಫಲ ನೀಡುವ ಮರಗಳನ್ನು ನೆಡುವಂತೆ ಸೂಚಿಸಿದ್ದಾರೆ.

ಈ ಮರಗಳ ಫಲವನ್ನು ವಾರ್ಷಿಕ ಹರಾಜು ಮೂಲಕ ಸ್ಥಳೀಯರಿಗೆ ಗುತ್ತಿಗೆ ನೀಡಿದರೆ ಪಂಚಾಯಿತಿಗಳಿಗೆ ಆದಾಯ ಹೆಚ್ಚುವುದರ ಜೊತೆಗೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೂ ನೆರವಾಗಲಿದೆ. ಸ್ಥಳೀಯರಿಗೆ ಹೆಚ್ಚುವರಿ ಆದಾಯವೂ ಸಿಗಲಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ಜಾರಿಗೆ ತರಲು ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ವಿಬಿಜಿ ರಾಮ್‌ಜಿ ಸಹಯೋಗದಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ ನೀರಿಗಾಗಿ ಹಾಹಾಕಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭಬರ ಸಂಕಷ್ಟದಲ್ಲಿ ರೈತರಿಗೆ ಸಾಲಮನ್ನಾ ಸೇರಿ ತುರ್ತು ಪರಿಹಾರ ಘೋಷಿಸಲಿ: ಡಾ. ವೀರಣ್ಣ ಚರಂತಿಮಠಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIRಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್‌ ಸ್ಪಾಟ್‌ಗಳ ಸ್ವಚ್ಛತಾ ಅಭಿಯಾನ ಪೂರ್ಣಹಾರಂಗಿ ಡ್ಯಾಮ್‌ನಿಂದ 5,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ – ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ