LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಕೆ ಕಂಗ್ರಾಳಿ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಸಿದ್ಧತೆ

ಬೆಳಗಾವಿ ತಾಲ್ಲೂಕಿನ ಬಿಕೆ ಕಂಗ್ರಾಳಿ ಗ್ರಾಮದ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಸಿದ್ದತೆ ನಡೆಯುತ್ತಿದ್ದುವಗ್ರಾಮ ಪಂಚಾಯತಿ ವತಿಯಿಂದ ಮೂಲಭೂತ ಸೌಕರ್ಯಗಳ ಕುರಿತಾದ ಕಾಮಗಾರಿಗಳ ಪರಿಶೀಲನೆ ಕೈಗೊಳ್ಳಲಾಯಿತು. ನೇತಾಜಿ ಗಲ್ಲಿಯಲ್ಲಿ ರಸ್ತೆ ಅತಿಕ್ರಮನ ತೆರವುಗೊಳಿಸಿ ಸಾರ್ವಜನಿಕರಿಗೆ ಸಂಚಾರಿಸಲು ಸುಗಮ ಮಾಡಿಕೊಡಲಾಗಿದ್ದು ಜಾತ್ರೆಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ಗ್ರಾಮದ ಪ್ರತಿ ಗಲ್ಲಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕೈಗೊಳ್ಳಲಾಗಿದ್ದು ಗ್ರಾಮದ ಪ್ರತಿ ಗಲ್ಲಿಗಳಲ್ಲಿ ವಿದ್ಯುತ್ ಹಾಗೂ ವಿದ್ಯುತ್ ದೀಪಗಳ ಕುರಿತು ಪರಿಶೀಲನೆ ನಡೆಸಲಾಗಿದೆ.

ಜಾತ್ರಾ ನಿಮಿತ್ತವಾಗಿ ವಾಹನ ನಿಲುಗಡೆ ವ್ಯವಸ್ಥೆ ಪೂದ್ದಾರ ಲೇಔಟ್ ಸಾಯಿ ಮಂದಿರ ಪರಿಸರ ಹಾಗೂ ಶಾಹೂನಗರ ಪರಿಸರದಲ್ಲಿ ಬಸ್ ನಿಲ್ದಾಣ ಹಾಗೂ ವಿಶೇಷ ವಾಹನಗಳ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಮುಂಜಾಗ್ರತಾ ಕ್ರಮವಾಗಿ ಹಳೆ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಉಪ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ‌ ಶಾಂತಿ ಸುವ್ಯವಸ್ಥೆಗೆ ಗ್ರಹ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.



 

ಇನ್ನು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಪ್ರತಿ ಮನೆಗೆ ಕಸದ ಚೀಲಗಳನ್ನು ವಿತರಿಸಲಾಗುತ್ತಿದ್ದು ಅದರಲ್ಲಿ ಕಸ ಸಂಗ್ರಹಿಸಲು ತಿಳಿಸಲಾಗಿದೆ. ಕಸವಿಲೆವಾರಿಗೆ ಪ್ರತಿದಿನ ಪಂಚಾಯತಿಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ.
ಕಸ ವಿಲೇವಾರಿಗೆ ಐದು ವಾಹನಗಳನ್ನು ನಿಯೋಜಿಸಲಾಗಿದೆ. ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ‌. ಒಂದು ಗ್ರಾಮ ಪಂಚಾಯತ್ ಕಚೇರಿ ಎದುರುಗಡೆ ಇನ್ನೊಂದು ಮರಾಠಿ ಪ್ರಾಥಮಿಕ ಶಾಲೆ ಎದುರುಗಡೆ
ಗ್ರಾಮದ ಮುಖ್ಯ ಕೆರೆಯನ್ನು ಸೌಂದರ್ಯೀಕರಣ ಗೋಸ್ಕರ ಬಣ್ಣ ಸುಣ್ಣ ವ್ಯವಸ್ಥೆ ಮಾಡಲಾಗುತ್ತಿದೆ.



ಸರಕಾರಿ ಇಲಾಖೆಗಳ ಯೋಜನೆಗಳು ಹಾಗೂ ಗ್ರಾಮ ಪಂಚಾಯತ್ ಯೋಜನೆಗಳ ಕುರಿತು ಭಿತ್ತಿ ಪತ್ರ ಗಳನ್ನು ಅಳವಡಿಸಲಾಗುತ್ತಿದೆ‌ ಜಾತ್ರಾ ಕಮಿಟಿ ಅವಶ್ಯಕತೆಗೆ ಅನುಗುಣವಾಗಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗುತ್ತಿದೆ. ನೀರಿನ ಟ್ಯಾಂಕರ್ ಗಾಗಿ ಕಾಕತಿ,ಕೆಎಚ ಕಂಗ್ರಾಳಿ, ಹೂನಗಾ, ಬೀಗರಣಿ ಸೇರಿದಂತೆ 5 ಗ್ರಾಮ್ ಪಂಚಾಯ್ತಿಗಳಿಂದ ಸಹಾಯ ಕೇಳಲಾಗಿದೆ.



ಸಚಿವೆ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಚ್ಚುವರಿಯ ಅನುದಾನದ ಅಡಿಯಲ್ಲಿ ರಸ್ತೆಗಳನ್ನು ನಿರ್ಮಿಸಲಾಗಿದೆ.
ಇದು ಗ್ರಾಮ ಪಂಚಾಯತ್ ಕೈಗೊಂಡಿರುವ ಕ್ರಮಗಳಾದರೆ ಜಾತ್ರಾ ಮಹೋತ್ಸವ ಕಮಿಟಿ ಕೂಡ ಅನೇಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜಯರಾಮ್ ಪಾಟೀಲ್ ಅಧ್ಯಕ್ಷತೆಯಲ್ಲಿ ಜಾತ್ರಾ ಮಹೋತ್ಸವ ಕಮಿಟಿ ಗ್ರಾಮದೇವಿಯ ಜಾತ್ರೆಯ ಪೂಜಾ ವಿಧಿ ವಿಧಾನಗಳು ಹಾಗೂ ಜಾತ್ರೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳತ್ತಿದೆ. ಏಪ್ರಿಲ್ 28ರಿಂದ ಮೇ 6 ಆರರವರೆಗೆ ಜಾತ್ರೆ ನಡೆಯಲಿದ್ದು ಅದಕ್ಕಾಗಿ ಪೊಲೀಸ್ ಇಲಾಖೆ ಆರೋಗ್ಯ ಇಲಾಖೆ ಹಾಗೂ ಸ್ವಯಂಸೇವಕರ ತಂಡಗಳನ್ನು ಶಾಂತಿ ಹಾಗೂ ಸುರಕ್ಷತೆಯ ಸಲುವಾಗಿ ನಿಯೋಜಿಸಲಾಗಿದೆ.
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಲಿಕೆ ಬಿಜೆಪಿ ಸದಸ್ಯರ ವಿರುದ್ಧ ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ದೂರುಪಾಲಿಕೆ ವಿರುದ್ಧ ಹೋರಾಟ ಮುಂದುವರಿಸಲು ವಿವಿಧ ಕನ್ನಡ ಸಂಘಟನೆಗಳ ನಿರ್ಧಾರಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವುಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ!ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ!ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರುಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆಡಿಕೆಶಿ ಮುಂದಿನ ಸಿಎಂ ಬ್ಯಾನರ್, ಕಾರ್ಯಕರ್ತರ ಅಭಿಮಾನ ತಡಿಯೋಕೆ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್