LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ–ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ

ಬೆಳಗಾವಿ: ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಬೆಳಗಾವಿ ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 17074 ಬೆಳಗಾವಿ–ಸಿಕಂದರಾಬಾದ್ ವಾರಾಂತ್ಯ ಎಕ್ಸ್‌ಪ್ರೆಸ್ ರೈಲಿಗೆ ಸೇವೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ ಅವರು, ಈ ಹೊಸ ರೈಲು ಸೇವೆಯಿಂದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಪಡಲಿದ್ದು, ಪರಸ್ಪರ ಆರ್ಥಿಕ ಬಲವರ್ಧನೆಗೂ ಸಹಕಾರಿಯಾಗುವುದರೊಂದಿಗೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಉದ್ಘಾಟನೆಗೊಂಡ ಸಂಖ್ಯೆ 17074 ಬೆಳಗಾವಿ–ಸಿಕಂದರಾಬಾದ್ ವಾರಾಂತ್ಯ ಎಕ್ಸ್‌ಪ್ರೆಸ್ ರೈಲು ಇಂದಿನಿಂದ ನಿಯಮಿತ ಸಂಚಾರ ಆರಂಭಿಸಲಿದೆ. ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 01:00 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 07:15 ಗಂಟೆಗೆ ಸಿಕಂದರಾಬಾದ್ ತಲುಪಲಿದೆ. ಮರಳಿ ರೈಲು ಸಂಖ್ಯೆ 17073 ಸಿಕಂದರಾಬಾದ್–ಬೆಳಗಾವಿ ವಾರಾಂತ್ಯ ಎಕ್ಸ್‌ಪ್ರೆಸ್ ಪ್ರತಿ ಸೋಮವಾರ ಸಿಕಂದರಾಬಾದ್‌ನಿಂದ 04:30 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 10:30 ಗಂಟೆಗೆ ಬೆಳಗಾವಿಗೆ ತಲುಪಲಿದೆ.

ಈ ಚಾಲನಾ ಸಮಾರಂಭದಲ್ಲಿ ಗೌರವಾನ್ವಿತ ಶಾಸಕರಾದ ಅಭಯ ಪಾಟೀಲ ಹಾಗೂ ಮಾಜಿ ಶಾಸಕ ಅನೀಲ ಬೆನಕೆ, ವಿಭಾಗೀಯ ರೈಲ್ವೆ ಹೆಚ್ಚುವರಿ ವ್ಯವಸ್ಥಾಪಕರಾದ ಪ್ರೇಮಚಂದ್ರ ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಅಭಿವೃದ್ದಿ ನಿಗಮ ನೇಮಕಾತಿಗೆ ಅರ್ಜಿ ಆಹ್ವಾನ – ಕೆಇಎಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ ಮರುಪರಿಶೀಲಿಸಿ – ಶಿಕ್ಷಣ ಇಲಾಖೆಗೆ ಹೈಕೋರ್ಟ್‌ ಆದೇಶ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ, ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ!ಆಲಮಟ್ಟಿ ಜಲಾಶಯದಲ್ಲಿದೆ ಕೇವಲ 9 ಟಿಎಂಸಿಯಷ್ಟು ನೀರು – ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರಗೋವನ್ನು ರಾಷ್ಟ್ರೀಯ ಪ್ರಾಣಿ ಅಂತ ಘೋಷಿಸಿ – ಕೇಂದ್ರಕ್ಕೆ ಬಾಬರಿ ಪ್ರಕರಣದ ವಾದಿ ಇಕ್ಬಾಲ್ ಅನ್ಸಾರಿ ಮನವಿಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಆರೆಂಜ್‌ ಅಲರ್ಟ್‌ ಘೋಷಣೆವಾಹನ ಪ್ರಿಯರಿಗೆ ಶಾಕ್| ಜೂನ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ 30 ಸಾವಿರ ರೂ.ವರೆಗೆ ಏರಿಕೆ!ವಾಹನ ಪ್ರಿಯರಿಗೆ ಶಾಕ್| ಜೂನ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ 30 ಸಾವಿರ ರೂ.ವರೆಗೆ ಏರಿಕೆ!ಬೆಳಗಾವಿ–ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ