LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಿಕೆಟ್ ಆಡುವಾಗಲೇ ಹೃದಯಾಘಾತ – ಮಾಜಿ ರಣಜಿ ಆಟಗಾರ ಎಸ್‌.ಎಲ್ ಅಕ್ಷಯ್ ನಿಧನ

ಬೆಂಗಳೂರು: ಕ್ರಿಕೆಟ್  ಪಂದ್ಯವಾಡುತ್ತಿದ್ದ ವೇಳೆ ಹೃದಯಾಘಾತದಿಂದ  ಕರ್ನಾಟಕದ ಮಾಜಿ ರಣಜಿ ಆಟಗಾರ  ಎಸ್‌. ಎಲ್‌ ಅಕ್ಷಯ್‌ ಸಾವನ್ನಪ್ಪಿದ್ದಾರೆ. ಶಿವಮೊಗ್ಗ  ಮೂಲದ ಅಕ್ಷಯ್ (39),  ಬೆಂಗಳೂರಿನ ಎಸ್‌ಎಲ್‌ಎಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯದ ವೇಳೆ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕ ರಣಜಿ ತಂಡದ ಪರ ಆಡಿದ್ದ ಅಕ್ಷಯ್, ತಮ್ಮ ಕರಾರುವಕ್ಕಾದ ಬೌಲಿಂಗ್ ಮೂಲಕ ಗಮನ ಸೆಳೆದಿದ್ದರು. ರಣಜಿ ಮಾತ್ರವಲ್ಲದೇ ಕೆಪಿಎಲ್ ಟೂರ್ನಿಗಳಲ್ಲೂ ಉತ್ತಮ ಪ್ರದರ್ಶನ ನೀಡಿ ಹೆಸರು ಮಾಡಿದ್ದರು. ಕರ್ನಾಟಕ ಪರ ಅವರು 6 ಫಸ್ಟ್ ಕ್ಲಾಸ್, 3 ಲಿಸ್ಟ್ ‘ಎ’ ಹಾಗೂ 9 ಟಿ20 ಪಂದ್ಯಗಳನ್ನು ಆಡಿದ್ದರು.

ಭಾನುವಾರ (ಮೇ 24) ಬೆಂಗಳೂರಿನ  ಎಸ್‌ಎಲ್‌ಎಸ್ ಮೈದಾನದಲ್ಲಿ ಸಫೀಯರ್ ಕ್ರಿಕೆಟ್ ಕ್ಲಬ್ ಹಾಗೂ ಭಾರತ್ ಕ್ರಿಕೆಟ್ ಕ್ಲಬ್ ನಡುವಿನ ಥರ್ಡ್ ಡಿವಿಷನ್ ಪಂದ್ಯ ನಡೆಯುತ್ತಿತ್ತು. ಸಫೀಯರ್ ತಂಡದ ಪರ ಆಡುತ್ತಿದ್ದ ಅಕ್ಷಯ್, ನಾಲ್ಕು ಓವರ್ ಬೌಲಿಂಗ್ ಮಾಡಿದ್ದರು. ಬಳಿಕ ಸ್ಲಿಪ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ಮೈದಾನದಿಂದ ಹೊರಬಂದು ವಿಶ್ರಾಂತಿ ಪಡೆದಿದ್ದರು.

ಬಾಳೆಹಣ್ಣು ಸೇವಿಸಿ ವಿಶ್ರಾಂತಿ ಕೊಠಡಿಗೆ ತೆರಳಿದ್ದ ಅಕ್ಷಯ್, ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಎಸ್‌ಎಲ್ ಅಕ್ಷಯ್ ನಿಧನ ಸುದ್ದಿ ತಿಳಿದು ಕ್ರೀಡಾ ವಲಯದಲ್ಲಿ ದುಃಖ ಆವರಿಸಿದೆ. ಸದಾ ಸ್ನೇಹಪರ ಹಾಗೂ ಜಾಲಿ ಸ್ವಭಾವದಿಂದ ಎಲ್ಲರೊಂದಿಗೂ ಬೆರೆತು ಹೋಗುತ್ತಿದ್ದ ಅಕ್ಷಯ್ ಅಗಲಿಕೆ ಸಹ ಆಟಗಾರರು ಹಾಗೂ ಸ್ನೇಹಿತರಿಗೆ ಆಘಾತ ಉಂಟುಮಾಡಿದೆ

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಜಿಲ್ಲೆಯ ಹಳ್ಳಿಗಳಲ್ಲಿ ಬೀಜೋಪಚಾರ ಆಂದೋಲನಯಲ್ಲಮ್ಮನಗುಡ್ಡ ಕ್ಷೇತ್ರ; ಸಸಿ ನೆಟ್ಟು, ಪೋಷಿಸಲು ಶಾಸಕ ವಿಶ್ವಾಸ್ ವೈದ್ಯ ಕರೆನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಕೇಶ್ವರ ಬಂದ್‌ಗೆ ಉತ್ತಮ ಸ್ಪಂದನೆಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ: 12 ಕಾಂಗ್ರೆಸ್‌ ಸದಸ್ಯರು ರಾಜೀನಾಮೆಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿಸುವರ್ಣಸೌಧದಲ್ಲೇ ಈ ಬಾರಿ ಮುಂಗಾರು ಅಧಿವೇಶನ?; ಜಿಲ್ಲಾಡಳಿತದಿಂದ ಭರ್ಜರಿ ಸಿದ್ಧತೆ!ಇಂದಿನಿಂದಲೇ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದೇವೆ: ಬಾಲಚಂದ್ರ ಜಾರಕಿಹೊಳಿಸಂತೆಯಲ್ಲಿ ನುಗ್ಗಿ ಕಳ್ಳತನ: ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರುಬೆಳಗಾವಿಯಲ್ಲಿ ಯುವಕನ ಭೀಕರ ಕೊಲೆ: ಆರೋಪಿಗಳು ಅರೆಸ್ಟ್ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಾಷ್ಟ್ರೀಯ ಅಧ್ಯಕ್ಷರಿಂದ ಸಲಹೆ: ಸಿ.ಟಿ ರವಿ