LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲ್ಯಾಂಡಿಂಗ್‌ ವೇಳೆ ಯಡವಟ್ಟು – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಪಾರ್ಕಿಂಗ್‌ ಕಂಬಕ್ಕೆ ಇಂಡಿಗೋ ವಿಮಾನ ಡಿಕ್ಕಿ

Advertisement
Advertisement
Advertisement

ಶ್ರೀನಗರ: ಲ್ಯಾಂಡಿಂಗ್‌ ಮಾಡುವ ವೇಳೆ ಇಂಡಿಗೋ ವಿಮಾನವು  ಪಾರ್ಕಿಂಗ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾರುವ ಘಟನೆ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಪಘಾತಕ್ಕೀಡಾದ ವಿಮಾನ (ಸಂಖ್ಯೆ 6E 225 – T-NOG) ನವಿ ಮುಂಬೈನಿಂದ ಶ್ರೀನಗರಕ್ಕೆ ಬಂದಿತ್ತು.

ಅಧಿಕಾರಿಗಳು ಹೇಳಿದ್ದೇನು?
ನವಿ ಮುಂಬೈನಿಂದ ಬಂದಿದ್ದ ಇಂಡಿಗೋ ವಿಮಾನ ಬೆಳಗ್ಗೆ 9:02 ಗಂಟೆ ಸುಮಾರಿಗೆ ಶ್ರೀನಗರ ಏರ್‌ಪೋರ್ಟ್‌ನ ʻಬೇ.ಸಂಖ್ಯೆ 06ʼ ರಲ್ಲಿ ಲ್ಯಾಂಡಿಂಗ್‌ ಆಗುತ್ತಿತ್ತು, ಈ ವೇಳೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್‌ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ವಿಮಾನವು ವಿಷ್ಯುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್  ಕಂಬಕ್ಕೆ ಡಿಕ್ಕಿ ಹೊಡೆದ ನಂತರ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಬಳಿಕ ಘಟನೆಗೆ ಕಾರಣ ಏನು? ಎಂಬುದನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ. ವಿಚಾರಣೆ ಪೂರ್ಣಗೊಂಡ ಬಳಿಕವೇ ನಿಖರ ಕಾರಣ ತಿಳಿದುಬರಲಿದೆ. ಅಲ್ಲಿಯವರೆಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗದು ಎಂದು ಅಧಿಕಾರಿಗಳ ತಂಡ ಹೇಳಿದೆ.

ಇನ್ನೂ ಘಟನೆಯಿಂದ ಯಾವುದೇ ವಿಮಾನ ಸೇವೆ ಕಾರ್ಯಾಚರಣೆಯಲ್ಲಿ ವಿಳಂಬ ಅಥವಾ ರದ್ದಾಗಿರುವುದು ಕಂಡುಬಂದಿಲ್ಲ. ಪರಿಸ್ಥಿತಿಯನ್ನ ಶೀಘ್ರವೇ ನಿಯಂತ್ರಣಕ್ಕೆ ತರಲಾದ ಹಿನ್ನೆಲೆ ವಿಮಾನಗಳ ಆಗಮನ ಮತ್ತು ನಿರ್ಗಮನ ಸೇವೆಗಳು ನಿಗದಿತ ವೇಳಾಪಟ್ಟಿ ಪ್ರಕಾರವೇ ಮುಂದುವರಿಯುತ್ತಿವೆ.

24 ಗಂಟೆಗಳಲ್ಲಿ 2ನೇ ಘಟನೆ
ಕಳೆದ 24 ಗಂಟೆಗಳಲ್ಲಿ ಇಂಡಿಗೋ ಸಂಸ್ಥೆಯ ವಿಮಾನ ಎದುರಿಸಿದ 2ನೇ ದುರಂತ ಇದಾಗಿದೆ. ಗುರುವಾರ (ನಿನ್ನೆ), ದೋಹಾ-ಬೆಂಗಳೂರು ಇಂಡಿಗೋ ವಿಮಾನವನ್ನು ಪೈಲಟ್‌ಗಳಲ್ಲಿ ಒಬ್ಬರು ಅನಾರೋಗ್ಯಕ್ಕೆ ತುತ್ತಾದ ಹಿನ್ನೆಲೆ ಮಸ್ಕತ್‌ಗೆ ತಿರುಗಿಸಲಾಯಿತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ