LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಲಿಹಾಳ್‌ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲು

Advertisement
Advertisement
Advertisement

ಶಿವಮೊಗ್ಗ: ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಕಲ್ಲಿಹಾಳ್‌ ನಾಡಕಚೇರಿ ಉಪ ತಹಶೀಲ್ದಾರ್‌ ಪುಷ್ಪಲತಾಗೆ ಶಿವಮೊಗ್ಗ  ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ 40,000 ರೂ. ದಂಡ ಹಾಗೂ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹುಟ್ಟು ಮೂಕನಾಗಿರುವ ತಂದೆಗೆ ಅಂಗವಿಕಲರ ಪಿಂಚಣಿ ಕೊಡಿಸಲು ಮುಂದಾಗಿದ್ದ ಡಿ.ಬಿ. ಹಳ್ಳಿಯ ನಿವಾಸಿ ಗಿರೀಶ್‌ ಅವರ ಬಳಿ ಅಪರಾಧಿ ಪುಷ್ಪಲತಾ 10,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಳು. ಅದರಂತೆ ಮುಂಗಡವಾಗಿ 2017ರ ಸೆಪ್ಟೆಂಬರ್ 21 ರಂದು 5,000 ರೂ. ಲಂಚ ಪಡೆಯುವಾಗ ಕಚೇರಿಯಲ್ಲಿ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. 

ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಚ್.ಎಸ್.ತಿಪ್ಪೇಸ್ವಾಮಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡವನ್ನ ವಿಧಿಸಿ ತೀರ್ಪು ಪ್ರಕಟಿಸಿದೆ.

ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಸುಂದರ್‌ ರಾಜ್‌ ಅವರು ವಾದ ಮಂಡಿಸಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮನ್ನು ನೀವೇ ದೇವರೆಂದುಕೊಂಡಿದ್ದೀರಾ? – FDA ಅಧಿಕಾರಿ ತುಕಾರಾಮ್‌ಗೆ ಬಾಂಬೆ ಹೈಕೋರ್ಟ್‌ ತರಾಟೆಐಸ್‌ಕ್ರೀಮ್‌ ಮಾರುಕಟ್ಟೆಗೆ ರಿಲಯನ್ಸ್‌ ಎಂಟ್ರಿ – 10 ರೂ.ಗೆ ಬಾಂಬೆ ಕ್ರೀಮರಿಅಗತ್ಯ ಇದ್ದರಷ್ಟೇ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ ಬೇಡ: ಮೋದಿ ಮಿತವ್ಯಯ ಕರೆಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಶವವಾಗಿ ಪತ್ತೆದರ್ಶನ್‌ಗೆ ಮತ್ತೆ ಢವ ಢವ – ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ?ಕಲ್ಲಿಹಾಳ್‌ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲುಪರಪ್ಪನ ಅಗ್ರಹಾರ ಜೈಲಿಗೆ ವಿಜಯಲಕ್ಷ್ಮಿ ಭೇಟಿ – ಶಾಸಕ ದರ್ಶನ್ ಪುಟ್ಟಣ್ಣಯ್ಯ, ನಟ ಝೈದ್ ಖಾನ್ ಸಾಥ್ಸೆ.3, 4 ರಂದು ಚಿಕನ್‌ ಶಾಪ್‌ ಬಂದ್‌ಡಿಸಿಪಿ ಮೇಲೆಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ- ಎಫ್‌ಐಆರ್ ದಾಖಲಿಸಲು ಪೊಲೀಸರ ಹಿಂದೇಟುಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ವಿಜಯೇಂದ್ರ