LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು – ಜೆಡಿಎಸ್ ಆಗ್ರಹ

Advertisement
Advertisement

ಬೆಂಗಳೂರು : ತಮಿಳುನಾಡಿಗೆ  ನೀರು ಬಿಡುವಂತೆ CWRC ಆದೇಶಕ್ಕೆ ಜೆಡಿಎಸ್ (JDS) ವಿರೋಧ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರ ನೀರು ಬಿಡದಂತೆ ಜೆಡಿಎಸ್ ಆಗ್ರಹ ಮಾಡಿದೆ. ನೀರು ಬಿಡದಂತೆ‌ ಸಿಎಂಗೆ ಒತ್ತಾಯ ಮಾಡಿರೋ ಜೆಡಿಎಸ್, ಮೇಲ್ಮನವಿ ಸಲ್ಲಿಸುವಂತೆ ಆಗ್ರಹಿಸಿದೆ.

ಜೆಡಿಎಸ್ X ನಲ್ಲಿ ಹೇಳಿದ್ದೇನು?
ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ(CWRC) ನೀಡಿರುವ ಶಿಫಾರಸು ಕರ್ನಾಟಕಕ್ಕೆ ಎಸಗಿರುವ ಘೋರ ಅನ್ಯಾಯ. ಜೂನ್‌ನಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸೂಕ್ತ ಮಳೆಯಾಗದೆ, KRS ನೀರಿನ ಮಟ್ಟ ಡೆಡ್‌ ಸ್ಟೋರೇಜ್‌ ತಲುಪಿದೆ.

ಇಂತಹ ತೀವ್ರ ಬರ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15 ದಿನಗಳಲ್ಲಿ 4 TMC ನೀರು ಹರಿಸುವುದು ಅಸಾಧ್ಯ. ಈಗಾಗಲೇ ಬೆಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ, ಈಗ ನೀರು ಹರಿಸಿದರೆ ಮುಂದಿನ ದಿನಗಳಲ್ಲಿ ಬೆಂಗಳೂರು ಹಾಗೂ ಮಂಡ್ಯ ಭಾಗ ಸೇರಿದಂತೆ ಹಲವೆಡೆ ಕುಡಿಯುವ ನೀರಿನ ಭೀಕರ ಅಭಾವ ಎದುರಾಗಲಿದೆ.

ಕುಡಿಯುವ ನೀರಿಗೂ ಕಂಟಕ ತರುವ CWRC ನಿರ್ಧಾರವನ್ನು ಕನ್ನಡಿಗರು ಒಪ್ಪುವುದಿಲ್ಲ. ಮುಖ್ಯಮಂತ್ರಿಗಳೇ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಒಂದು ಹನಿ ನೀರನ್ನೂ ಬಿಡಬೇಡಿ.ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ನಮ್ಮ ರೈತರನ್ನು ರಕ್ಷಿಸುವುದು ಸರ್ಕಾರದ ಮೊದಲ ಕರ್ತವ್ಯ ಆಗಬೇಕಿದೆ.

ಡಿ.ಕೆ. ಶಿವಕುಮಾರ್ ಅವರೇ, ಯಾವುದೇ ಒತ್ತಡಕ್ಕೆ ಮಣಿಯದೆ ಸಮಿತಿ ಶಿಫಾರಸಿನ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಬಲವಾಗಿ ಮೇಲ್ಮನವಿ ಸಲ್ಲಿಸಿ.ಜೊತೆಗೆ ತಮಿಳುನಾಡು ಸಿಎಂ ವಿಜಯ್ ಅವರಿಗೂ, ಕರುನಾಡಿನ ಬರ ಪರಿಸ್ಥಿತಿ ಮತ್ತು ಜಲಾಶಯಗಳ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಿ.

ನಾಡಿನ ರೈತರು ಮತ್ತು ಜನತೆಯ ಹಿತ ಕಾಯಲು ಕಾಂಗ್ರೆಸ್ ಸರ್ಕಾರ ತಕ್ಷಣವೇ ಗಟ್ಟಿಯಾದ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ನಾವು ಆಗ್ರಹಿಸುತ್ತೇವೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಲಾರ ಗಡಿಯಲ್ಲಿ ಪೆಟ್ರೋಲ್ ಮಾಫಿಯಾ – ಟ್ಯಾಂಕರ್‌ಗಳಿಂದ ಕದ್ದು, ಕಡಿಮೆ ಬೆಲೆಗೆ ಮಾರಾಟ2028ರಲ್ಲಿ ಕಾಂಗ್ರೆಸ್ ಸ್ಥಾನಗಳು 50-60ಕ್ಕೆ ಕುಸಿತ: ಬಿವೈವಿನಮಗೇ ಕುಡಿಯೋಕೆ ನೀರಿಲ್ಲ, ಅವರಿಗೆ ಕೊಡಿ ಅಂದ್ರೆ ಹೇಗೆ? – ಪರಮೇಶ್ವರ್ ಕಿಡಿನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತಪ್ರೀತಿಯ ಬಲೆಗೆ ಬಿದ್ದು ಗರ್ಭಿಣಿಯಾದ ಅಪ್ರಾಪ್ತೆ – ಗಂಡು ಮಗುವಿಗೆ ಜನ್ಮ, ಪ್ರಿಯಕರನ ವಿರುದ್ಧ ಪೋಕ್ಸೋ ಕೇಸ್‌ತಮಿಳುನಾಡಿಗೆ ಕಾವೇರಿ ನೀರು – ಜು.31ಕ್ಕೆ ಮಂಡ್ಯದಲ್ಲಿ ಬೃಹತ್‌ ಹೋರಾಟಕ್ಕೆ ಕರೆಕೊಟ್ಟ ವಿಜಯೇಂದ್ರಕಾವೇರಿ ಜಲ ವಿವಾದ ಚರ್ಚೆಗೆ ತಮಿಳುನಾಡು ಪಟ್ಟು – ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ಸಂಸದರಾಹುಲ್ ಗಾಂಧಿ ʻಮೂರ್ಖʼ ಹೇಳಿಕೆಗೆ ರಿಜಿಜು ತೀವ್ರ ಆಕ್ಷೇಪ – ಲೋಕಸಭೆಯಲ್ಲಿ ಭಾರೀ ಗದ್ದಲ, ಕೋಲಾಹಲಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು – ಜೆಡಿಎಸ್ ಆಗ್ರಹ