LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಹೆಚ್ಚುವರಿ ಕಾವೇರಿ ನೀರನ್ನು ಮಾತ್ರ ಹರಿಸುತ್ತಿದೆ – ವಿಜಯ್‌ ಸರ್ಕಾರದ ಕ್ಯಾತೆ

Advertisement
Advertisement

ಚೆನ್ನೈ: ಸುಪ್ರೀಂಕೋರ್ಟ್ ಆದೇಶದ ಅನ್ವಯ ಪ್ರತಿ ವರ್ಷ ನಿಗಧಿತ ಪ್ರಮಾಣದಲ್ಲಿ ಕಾವೇರಿ ನೀರು ಹರಿಸಿದರೂ ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳುನಾಡಿನ ಹೊಸ ಸರ್ಕಾರ ತಗಾದೆ ತೆಗೆದಿದೆ. ಕರ್ನಾಟಕ, ತಮಿಳುನಾಡಿನ ನೀರಿನ ಪಾಲು ಹರಿಸುತ್ತಿಲ್ಲ. ಅದರ ಬದಲಿಗೆ ಕೇವಲ ಹೆಚ್ಚುವರಿ ನೀರನ್ನು ಮಾತ್ರ ಹರಿಸಲಾಗುತ್ತಿದೆ ಎಂದು ಆರೋಪಿಸಿದೆ. 

ತಮಿಳುನಾಡಿನಲ್ಲಿ ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿದರು. ರಾಜ್ಯಪಾಲರ ಭಾಷಣದಲ್ಲಿ ಕರ್ನಾಟಕದ ವಿರುದ್ಧ ತಮಿಳುನಾಡು ಸರ್ಕಾರದ ಈ ಆರೋಪ ಸೇರಿತ್ತು.

ತಮಿಳುನಾಡಿಗೆ ಅನಾದಿ ಕಾಲದಿಂದಲೂ ಕಾವೇರಿ ನೀರನ್ನು ಬಳಸುವ ಹಕ್ಕಿದೆ. ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ಹಕ್ಕು ಎತ್ತಿಹಿಡಿಯಲ್ಪಟ್ಟ ನಂತರವೂ ನೀರನ್ನು ಪಡೆಯಲು ಪ್ರತಿ ವರ್ಷವೂ ಹೋರಾಟ ನಡೆಸುತ್ತಿದ್ದೇವೆ. ಕರ್ನಾಟಕ ಸರ್ಕಾರವು ನಮಗೆ ಸಿಗಬೇಕಾದ ನೀರನ್ನು ನೀಡುವ ಬದಲು, ಹೆಚ್ಚುವರಿ ನೀರನ್ನು ಮಾತ್ರ ತಮಿಳುನಾಡಿಗೆ ಬಿಡುಗಡೆ ಮಾಡುತ್ತಿದೆ.

ಈ ಪರಿಸ್ಥಿತಿಯಲ್ಲಿ, ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದೆ. ಈ ಯೋಜನೆ ಜಾರಿಗೆ ಬಂದರೆ, ಕೃಷಿ ಉತ್ಪಾದನೆಯ ಜೊತೆಗೆ ರೈತರ ಜೀವನೋಪಾಯದ ಮೇಲೂ ತೀವ್ರ ಪರಿಣಾಮ ಬೀರುತ್ತದೆ. ಇದನ್ನು ನಿಲ್ಲಿಸಲು ಮತ್ತು ಸರಿಯಾದ ಸಮಯದಲ್ಲಿ ತಮಿಳುನಾಡಿಗೆ ನೀರು ಒದಗಿಸಲು ಸರ್ಕಾರ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನಾನಂದ ಶ್ರೀ ಜಾಮೀನು ರದ್ದತಿ ಅರ್ಜಿ ಅದೇಶ ಜೂನ್ 30ಕ್ಕೆ ಮುಂದೂಡಿಕೆಅನುಮಾನ ಏನಿಲ್ಲ, ನಮ್ಮಪ್ಪ ಜೆಡಿಎಸ್‌ಗೆ ಮತ ಹಾಕಿದ್ದಾರೆ – ಪುತ್ರ ಹರೀಶ್‌ ಗೌಡ ವಿಶ್ವಾಸಕರ್ನಾಟಕ ಹೆಚ್ಚುವರಿ ಕಾವೇರಿ ನೀರನ್ನು ಮಾತ್ರ ಹರಿಸುತ್ತಿದೆ – ವಿಜಯ್‌ ಸರ್ಕಾರದ ಕ್ಯಾತೆಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ10 ಲಕ್ಷ ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ – ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆನೀಟ್ ಮರುಪರೀಕ್ಷೆಗೂ ಮುನ್ನ ಡೆತ್‌ನೋಟ್‌ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆಮೇಕೆದಾಟು ಹಾರ್ಟ್‌ ಆಫ್‌ ಡಿ.ಕೆ.ಶಿವಕುಮಾರ್‌ ಅಲ್ಲ, ಹಾರ್ಟ್‌ ಆಫ್‌ ದಕ್ಷಿಣ ಭಾರತ: ಸಿಎಂ ಖೇತ ಬಚಾವೂ ಅಭಿಯಾನ ಮತ್ತು ಆತ್ಮ ಯೋಜನೆಯಡಿಯಲ್ಲಿ ರೈತರ ತರಬೇತಿ ಕಾರ್ಯಕ್ರಮಲಕ್ಷ್ಮಣ್ ಸವದಿ "ಘರವಾಪಸಿ" ಬಿಜೆಪಿ ನಾಯಕರ ಗಳಿಂದಲೇ ವಿರೋಧವಾರ್ಡ್ ಸಂಖ್ಯೆ 4ರಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ; ಅನಿಲ್ ಬೆನಕೆ ಅವರಿಂದ ಮಾರ್ಗದರ್ಶನ