LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ

Advertisement
Advertisement
Advertisement

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಳೇಬೈಲ್ ಹಾಗೂ ಇನಾಂ ಬಡಸ್ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರ ಕುಟುಂಬಗಳಲ್ಲಿ ಇತ್ತೀಚೆಗೆ ಸಂಭವಿಸಿದ ದುಃಖದ ಘಟನೆಗಳ ಹಿನ್ನೆಲೆಯಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಎಳೇಬೈಲ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ಧಾನಾಜಿ ರಾಮು ಮೊರೆ ಅವರ ಪತ್ನಿ ಮಂಗಲ ಮೊರೆ ಅವರು ಇತ್ತೀಚೆಗೆ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ದುಃಖದ ಸಂದರ್ಭದಲ್ಲಿ ಕುಟುಂಬದೊಂದಿಗೆ ತಾವು ಇರುವುದಾಗಿ ತಿಳಿಸಿ, ಸಾಂತ್ವನ ಹೇಳಿದರು.ಇದೇ ವೇಳೆ ಇನಾಂ ಬಡಸ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ನಾರಾಯಣ ಪಾಟೀಲ ಅವರ ತಾಯಿ ಯುಲ್ಲುಬಾಯಿ ಪಾಟೀಲ ಅವರು ಇತ್ತೀಚೆಗೆ ನಿಧನರಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಅವರ ನಿವಾಸಕ್ಕೂ ಭೇಟಿ ನೀಡಿದರು. ಕುಟುಂಬಸ್ಥರನ್ನು ಭೇಟಿಯಾಗಿ, ಮೃತರ ನಿಧನಕ್ಕೆ ಸಂತಾಪ ಸೂಚಿಸಿ, ಅವರ ದುಃಖದಲ್ಲಿ ಭಾಗಿಯಾದರು.ಎರಡೂ ಕುಟುಂಬಗಳೊಂದಿಗೆ ಕೆಲಕಾಲ ಆತ್ಮೀಯವಾಗಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.

 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್ಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನಮೈಸೂರು ದಸರೆಗೆ ದುಬಾರೆಯ 5 ಆನೆಗಳ ಪಯಣಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- UP ವಿದ್ಯಾರ್ಥಿನಿಯ ಅರ್ಜಿ ವಜಾಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 19 ದಿನದಲ್ಲಿ 2.81 ಕೋಟಿ ಕಾಣಿಕೆ ಸಂಗ್ರಹಹನೂರು ಎನ್‌ಕೌಂಟರ್‌ ಪ್ರಕರಣ ಸಿಐಡಿಗೆ ಹಸ್ತಾಂತರಅಕ್ಕಿಯನ್ನು ಎಥೆನಾಲ್‌ ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದೇಕೆ?- ಪ್ರಿಯಾಂಕ್ ಖರ್ಗೆಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ“ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೊಂಡಿರು”- ಪತ್ನಿಗೆ ಪತಿ ಆದೇಶಿಸುವಂತಿಲ್ಲಭ್ರಷ್ಟಾಚಾರ ಆರೋಪಿಗೆ ರಾಜಾತಿಥ್ಯ – ನ್ಯಾಯಾಧೀಶರ ದಿಢೀರ್ ರೇಡ್‌ನಲ್ಲಿ ಅಕ್ರಮ ಬಯಲು