LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಜಿಲ್ಲೆಯ ಹಲವೆಡೆ ಮರಳು ಮತ್ತು ಕ್ವಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು  , ಮರಳು ಗಣಿಗಾರಿಕೆ ಹಾಗೂ ಸಂಗ್ರಹವನ್ನ ಪರಿಶೀಲಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಸಂಬಂಧ ಸಾಲು ಸಾಲು ದೂರುಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ, ನಿಂಬೆಗೊಂದಿ, ಮಂಗೋಟೆ, ಸನ್ಯಾಸಿ ಕೊಡಮಗ್ಗಿ, ಹಾಡೋನಹಳ್ಳಿ, ಕೂಡಲಿ, ಮಂಡುವಳ್ಳಿ, ತೂದೂರು, ದಬ್ಬಣಗದ್ದೆ, ಹೊಸನಗರ ತಾಲೂಕಿನ ಹರಿದ್ರಾವತಿ, ಸಂಪಕಟ್ಟೆ ಮತ್ತು ಸಾಗರದ ಆವಿನಹಳ್ಳಿಯ ಕ್ವಾರಿಗಳ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. 

ಮರಳು ಕ್ವಾರಿಗಳೊಂದಿಗೆ ಶಿವಮೊಗ್ಗದ ಕುವೆಂಪುನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಶಿವಮೊಗ್ಗ ಮತ್ತು ಚಿತ್ರದುರ್ಗದ ಲೋಕಾಯುಕ್ತ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಇತ್ತೀಚಿಗೆ ನಡೆದ ಕೆಡಿಪಿ ಸಭೆಯಲ್ಲೂ ಅಕ್ರಮ ಮರಳು ಸಾಗಾಟದ ವಿಚಾರ ಚರ್ಚೆಗೆ ಬಂದಿತ್ತು. ಈ ಬಗ್ಗೆ ವ್ಯಾಪಕವಾಗಿ ದೂರು ಕೇಳಿಬಂದ ಬೆನ್ನಲ್ಲೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೇಸ್​ಬುಕ್ ಪ್ರೀತಿ 7.05 ಲಕ್ಷ ರೂ. ವಂಚನೆಕಂಟ್ರಿ ಬಂದೂಕು ತಯಾರಿಕೆ ಮತ್ತು ಮಾರಾಟ ಜಾಲ ಭೇಧಿಸಿದ ಖಾನಾಪುರ ಪೊಲೀಸರುಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನಡಿಸಿಎಂಗಳ ಹುದ್ದೆ ಬೇಡವೇ ಬೇಡ – ಕಾಂಗ್ರೆಸ್ ಹೈಕಮಾಂಡ್ ಮುಂದೆ ಡಿಕೆಶಿ, ಸತೀಶ್ ಜಾರಕಿಹೊಳಿ ಪ್ರಸ್ತಾಪಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿಡಿಕೆಶಿ ಅವಧಿಯಲ್ಲಾದರೂ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್