ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳ ನೇಮಕಾತಿ ಪತ್ರವನ್ನು ವಿತರಿಸಲಾಯಿತು ಬೆಳಗಾವಿ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಅಶ್ವಿನಿ ಬೆಳವಡಿ ಜಿಲ್ಲೆಯಾದ್ಯಂತ 34 ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಕಾರ್ಯದರ್ಶಿಗಳ ನೇಮಕಾತಿಯನ್ನ ಮಾಡಿದ್ದಾರೆ ಖಾನಾಪುರ್, ಕಿತ್ತೂರು, ಅರಭಾವಿ ಹಾಗೂ ಬೆಳಗಾವಿ ಗ್ರಾಮೀಣ ,ಸೌದತ್ತಿ ತಾಲೂಕುಗಳಿಗೆ ಮಹಿಳಾ ಘಟಕ ನೇಮಕ ಮಾಡಿ ಆದೇಶ ಪತ್ರವನ ವಿತರಣೆ ಕಾರ್ಯಕ್ರಮ ನಡೆಯಿತು ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ವಿನಯ್ ನವಲಗಟ್ಟಿ ಅವರ ಸಮ್ಮುಖದಲ್ಲಿ ನೇಮಕಾತಿ ಪತ್ರವನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶ್ವಿನಿ ಬೆಳವಾಡಿ ಅವರು ಮಾತನಾಡಿ ಅಧಿಕಾರ ವಹಿಸಿಕೊಂಡಿರುವ ಎಲ್ಲಾ ಮಹಿಳಾ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳಿಗೆ ತಮ್ಮ ನಗರ ,ಗ್ರಾಮ ಹಾಗೂ ತಾಲೂಕು ಪ್ರದೇಶಗಳಲ್ಲಿ 9 ಸದಸ್ಯರ ಕಮಿಟಿ ಮಾಡಬೇಕು ಪಕ್ಷ ಸಂಘಟನೆಯಲ್ಲಿ ನಿರಂತರ ಕಾರ್ಯನಿರ್ವಹಿಸಬೇಕೆಂದು ಇದೇ ಸಂದರ್ಭದಲ್ಲಿ ಅಧಿಕಾರ ವಹಿಸಿಕೊಂಡಿರುವ ಪದಾಧಿಕಾರಿಗಳಿಗೆ ಕರೆ ನೀಡಿದರು.
ರಾಜ್ಯ ಎಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಹಾಗೂ ಮಹಿಳಾ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಹಾಗೂ ಸಚಿವರುಗಳಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ಮಾರ್ಗದರ್ಶನದಲ್ಲಿ ಎಲ್ಲರೂ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು,
ಇದೇ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತನಾಡಿ ನೀವೆಲ್ಲ ಪಕ್ಷದ ಆದರ ಸ್ತಂಭ ನೀವು ಸರಿಯಾಗಿ ಕೆಲಸ ಮಾಡಿದರೆ ಪಕ್ಷ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತ ಅದೇ ರೀತಿ ಜಿಲ್ಲಾ ತಾಲೂಕ್ ಹಾಗೂ ಗ್ರಾಮ ಪಂಚಾಯತಿ ಚುನಾವಣೆಗಳು ಕೂಡ ಮುಂದುವರೆ ದಿನಗಳಲ್ಲಿ ನಡೆಯಲಿದ್ದು ಹೆಚ್ಚಿನ ಗಮನ ಪಕ್ಷ ಸಂಘಟನೆ ಹಾಗೂ ಪಕ್ಷದ ಯೋಜನೆಗಳನ್ನು ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಹಾಗೂ ಪಂಚ್ ಗ್ಯಾರಂಟಿ ಅನುಷ್ಠಾನ ಕಮಿಟಿ ಅಧ್ಯಕ್ಷರಾದ ವಿನಯ್ ನವಲಗಟ್ಟಿ ಮಾತನಾಡಿ ಪಕ್ಷ ಸಂಘಟನೆಗೆ ಪಕ್ಷ ಯಾವತ್ತೂ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಜೊತೆ ಸದಾ ನಿಲ್ಲಲಿದೆ ಮುಂಬರುವ ಚುನಾವಣೆಗಳಲ್ಲಿ ಕಾರ್ಯಕರ್ತರು ಪಕ್ಷದ ಸಿದ್ಧಾಂತ ಮತ್ತು ಪಕ್ಷದ ಯೋಜನೆಗಳು ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ವಿನಯ ನವಲಗಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಶ್ವಿನಿ ಬೆಳವಡಿ, , ಸೇವಾದಳಅಧ್ಯಕ್ಷ ಅನ್ನಪೂರ್ಣ
ಖಾನಾಪುರ ಬ್ಲಾಕ್ ಅಧ್ಯಕ್ಷ ದೀಪಾ ಪಾಟೀಲ್, ವೈಶಾಲಿಯಾಗಿ , ಮಂಜುಳಾ ಇಸಗುರಬೆಳೆ, ಸಮೀನಾ ,ಸುನಿತಾ ಕಣ್ಣೋರ,
ಮುಂತಾದ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು



