LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ: ತನ್ವೀರ್ ಸೇಠ್ ಅಸಮಾಧಾನ

Advertisement
Advertisement

ಮೈಸೂರು: ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ತನ್ವೀರ್ ಸೇಠ್  ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ  ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸೆ ನಿರಾಸೆ ಆಗಿದೆ. ರಾಹುಲ್ ಗಾಂಧಿಗೆ ಎಂಬ ಪದ ಬಳಕೆ ಮಾಡಿದ್ದಕ್ಕೆ ಕೆ.ಎನ್ ರಾಜಣ್ಣರನ್ನು ತಕ್ಷಣ ವಜಾ ಮಾಡಿದರು. ಮೈಸೂರು ಪ್ರಾಂತ್ಯಕ್ಕೆ ಸಿಗಬೇಕಾದ ಶಕ್ತಿ ಸಿಕ್ಕಿಲ್ಲ. ಇದು ಆಶಾದಾಯಕ ಪಟ್ಟಿಯಲ್ಲ. ಸಚಿವ ಸಂಪುಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಈ ಭಾಗಕ್ಕೆ ದೊಡ್ಡ ಅನ್ಯಾಯವಾಗಿದೆ. ನನ್ನ ಅಭಿಮಾನಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ. ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ ಎಂದರು.

ಕಾರ್ಯಕರ್ತರು ಏನೂ ಹೇಳುತ್ತಾರೋ ಅದೇ ರೀತಿ ಮಾಡುತ್ತೇನೆ. ಯಾವ ಮಾನದಂಡದ ಮೇಲೆ ಸಚಿವ ಸಂಪುಟ ರಚನೆ ಆಗಿದೆ ಗೊತ್ತಿಲ್ಲ. ದಾವಣಗೆರೆ ಉಪ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದವರಿಗೂ ಸಚಿವ ಸ್ಥಾನ ಇಲ್ಲ. ಅಲ್ಲಿನ ಮಲ್ಲಿಕಾರ್ಜುನ ಖರ್ಗೆಗೂ ಇಲ್ಲ. ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನ ಸಿಗುತ್ತಿದೆ. ಪಕ್ಷಕ್ಕೆ ನಿಷ್ಠರಾಗಿದ್ದವರಿಗೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ಇದರ ಹಿಂದೆ ಅನೇಕರ ಕೈ ಚಳಕ ಇದೆ. ಪಕ್ಷದಿಂದ ಕೈ ತಪ್ಪಿಲ್ಲ, ನಮ್ಮ ನಾಯಕರಿಂದ ನನಗೆ ಕೈ ತಪ್ಪಿದೆ. ಹೈಕಮಾಂಡ್ ಮೇಲೆ ಯಾವ ರೀತಿ ಚಾಡಿ ಹೇಳಲು ಏನೂ ಇಲ್ಲ ಎಂದು ಹೇಳಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರುತಂದೆ ಮೊಬೈಲ್ ಕೊಡಿಸದಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆನಾಳೆ ರಾಜೀನಾಮೆ ಕೊಡ್ತೀನಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಳೂರು ಗೋಪಾಲಕೃಷ್ಣ ಆಕ್ರೋಶನಾನು ರಾಜೀನಾಮೆ ಬೆದರಿಕೆ ಹಾಕಿಲ್ಲ: ಎಸ್‌ಎಸ್‌ ಮಲ್ಲಿಕಾರ್ಜುನ್‌ಡಿವೋರ್ಸ್‌ ಬಳಿಕ ಖಿನ್ನತೆ; 5ನೇ ಮಹಡಿಯಿಂದ ಹಾರಿ ಮನೋವೈದ್ಯೆ ಆತ್ಮಹತ್ಯೆಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ: ತನ್ವೀರ್ ಸೇಠ್ ಅಸಮಾಧಾನಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ: ರುದ್ರಪ್ಪ ಲಮಾಣಿಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶಬ್ರೇಕಪ್ ವದಂತಿಗೆ ಪ್ರತಿಕ್ರಿಯೆ ಕೊಟ್ಟ ಅನುಪಮಾ ಪರಮೇಶ್ವರನ್