LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್

Advertisement

ಬೆಂಗಳೂರು: ಕೆಂಪೇಗೌಡ ಜಯಂತಿ ಆಚರಣೆ ವೇಳೆ ನಡೆದ ಅಹಿತಕರ ಘಟನೆಯ ಬೆನ್ನಲ್ಲೇ, ಚಿಕ್ಕಬಳ್ಳಾಪುರ  ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗಾದ ಅವಮಾನವನ್ನು ವಿವರಿಸಿ ಕಣ್ಣೀರು ಹಾಕಿದ್ದಾರೆ.

 

ನಡೆದ ಗಲಾಟೆಯನ್ನು ಸಿದ್ದರಾಮಯ್ಯ ಅವರಿಗೆ ವಿವರಿಸಿದ ಶಾಸಕ ಪ್ರದೀಪ್ ಈಶ್ವರ್  ತೀವ್ರ ಭಾವುಕರಾದರು. ವಿರೋಧ ಪಕ್ಷಗಳಾದ ಜೆಡಿಎಸ್  ಮತ್ತು ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಚಪ್ಪಲಿ ಎಸೆದಿದ್ದಲ್ಲದೆ, ನನ್ನ ಹಾಗೂ ನನ್ನ ಕುಟುಂಬದವರನ್ನು ಅತ್ಯಂತ ನಿಂದನೀಯ ಪದಗಳಿಂದ ನಿಂದಿಸಿದ್ದಾರೆ ಎಂದು ಹೇಳುತ್ತಾ ಸಿದ್ದರಾಮಯ್ಯ ಅವರ ಎದುರೇ ಕಣ್ಣೀರು ಸುರಿಸಿದರು.

ಶಾಸಕರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ. ಇವೆಲ್ಲವನ್ನೂ ಧೈರ್ಯದಿಂದ ಎದುರಿಸಬೇಕು. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ, ಇಡೀ ಪಕ್ಷ ಮತ್ತು ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂದು ಸಾಂತ್ವನ ಹೇಳಿದರು. 

ಪೊಲೀಸರ ಸಮ್ಮುಖದಲ್ಲೇ, ಅದೂ ಆಡಳಿತ ಪಕ್ಷದ ಶಾಸಕರೊಬ್ಬರ ಮೇಲೆ ಈ ರೀತಿಯ ಹಲ್ಲೆ ಮತ್ತು ನಿಂದನೆ ನಡೆದಿರುವುದರ ಬಗ್ಗೆ ಸಿದ್ದರಾಮಯ್ಯ ಅವರು ತೀವ್ರ ಬೇಸರ ವ್ಯಕ್ತಪಡಿಸಿದರು. ತಕ್ಷಣವೇ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ, ಘಟನೆಯ ಬಗ್ಗೆ ಸೂಕ್ತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚಿಸಿದರು. ಅಲ್ಲದೆ, ಸ್ಥಳದಲ್ಲಿದ್ದುಕೊಂಡು ಕರ್ತವ್ಯ ಲೋಪ ಎಸಗಿದ ಸಂಬಂಧಪಟ್ಟ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು ಎಂದು ಗೃಹ ಸಚಿವರಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಹಾಗೂ ಘಟನೆಯ ಕುರಿತು ಸುದೀರ್ಘ ಮಾತುಕತೆ ನಡೆಸಿದರು.

ಇವರೊಂದಿಗೆ ಮಾಜಿ ಸಚಿವರಾದ ಚಲುವರಾಯಸ್ವಾಮಿ, ಮಧು ಬಂಗಾರಪ್ಪ, ಸಂತೋಷ್ ಲಾಡ್, ಶಾಸಕರುಗಳಾದ ಶಿವಲಿಂಗೇಗೌಡ, ಯಾಸೀರ್ ಖಾನ್ ಪಠಾಣ್, ಶ್ರೀನಿವಾಸ ಮಾನೆ ಹಾಗೂ ಪಾವಗಡ ವೆಂಕಟೇಶ್ ಅವರೂ ಸಹ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಎಲ್ಲಾ ಮಹತ್ವದ ಭೇಟಿಗಳ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಚಿತ ಕಣ್ಣಿನ ತಪಾಸಣೆ ಮತ್ತು ಯಲಬು ಕೀಳು, BP, ಶುಗರ ತಪಾಸಣೆ,  ಶಿಬಿರಹೋಂಸ್ಟೇನಲ್ಲಿ ಯುವತಿ ಸಾವು; ಸಂಜೀತ್ ಅಲಿ ಸಹವಾಸ ಮಾಡಿ ತಪ್ಪು ಮಾಡಿಬಿಟ್ಟೆ ಹೊಸ ಬದುಕು ಕಟ್ಟಿಕೊಳ್ತೀನಿ ಎಂದಿದ್ದ ಸುರಭಿಹಾವೇರಿಯ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬೊಮ್ಮಾಯಿರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್ಮುಂದಿನ ಮೂರು ವರ್ಷಗಳಲ್ಲಿ 100% ಎಬಿಸಿ ಗುರಿ ಸಾಧಿಸಲು ಕಾರ್ಯಸೂಚಿ ಸಿದ್ಧಪಡಿಸಿ: ಕೃಷ್ಣ ಬೈರೇಗೌಡಎತ್ತಿನಹೊಳೆಗೆ ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿಬೀದರ್, ಕಲಬುರ್ಗಿ ಕುಡಿಯುವ ನೀರು ಯೋಜನೆ: ಜಲಶಕ್ತಿ ಸಚಿವರಿಗೆ ಖಂಡ್ರೆ ಮನವಿಕೇತನ್ ಹತ್ಯೆ ಬಳಿಕ ಲೋಹಗಡ ಕೋಟೆಗೆ ಮುಗಿಬಿದ್ದ ಜನ – ಕೊಲೆ ನಡೆದ ಸ್ಥಳಕ್ಕೆ ‘ಸಿಯಾ ಪಾಯಿಂಟ್’ ಹೆಸರು