LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಮೋದಿ

Advertisement
Advertisement

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ (PM Modi) ಮೋದಿ ಅವರು ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ನೂತನ (Mysuru) ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು.

ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಮಂಡಕಹಳ್ಳಿ ಹೆಲಿಪ್ಯಾಡ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೂಗುಚ್ಛ ನೀಡಿ ಸ್ವಾಗತಿಸಿದರು.

ರಸ್ತೆ ಬದಿಯಲ್ಲಿ ನಿಂತಿದ್ದ ಅಭಿಮಾನಿಗಳು ಪ್ರಧಾನಿ ಪರ ಘೋಷಣೆಗಳನ್ನು ಕೂಗಿ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಪ್ರಧಾನಿ ಮೋದಿ ಅವರು ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ತೆರಳಿ, ಅಲ್ಲಿ ನಿರ್ಮಾಣಗೊಂಡಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಆಶ್ರಮ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ನಮಿಸಿ ಪೂಜೆ ಸಲ್ಲಿಸಿದರು.

ಸ್ಮಾರಕ ಆವರಣದಲ್ಲಿ ಬಿಲ್ವಪತ್ರೆ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು. ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್ ನೀಡಿದರು. ಆಶ್ರಮದೊಳಗೆ ಕೆಲಕಾಲ ಧ್ಯಾನ ಮಾಡಿದ ಪ್ರಧಾನಿ ಮೋದಿ, ಬಳಿಕ ಅಲ್ಲಿನ ಸ್ವಾಮೀಜಿಗಳು ಮತ್ತು ಆಶ್ರಮದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಜೆಪಿ ಪ್ರತಿಭಟನೆ – ಪ್ರಚೋದನಾಕಾರಿ ವಿಷಯ ಹಂಚಿದ ಯೂಟ್ಯೂಬರ್, ಇನ್‌ಫ್ಲುಯೆನ್ಸರ್‌ಗಳ ವಿರುದ್ಧ ಕ್ರಮಕ್ಕೆ ದೆಹಲಿ ಪೊಲೀಸ್ ಸಜ್ಜುಬೆಳಗಾವಿಯಲ್ಲಿ ಕಾರು ಹರಿದು 48 ಕುರಿಗಳು ಸಾವುಸ್ವರಾಜ್ಯದ ಹರಿಕಾರ ತಿಲಕರಿಗೆ ಗೌರವ ನಮನ: ತಿಲಕ ಚೌಕ್‌ನಲ್ಲಿ ಕಿರಣ ಜಾಧವ ನೇತೃತ್ವದಲ್ಲಿ ಅಭಿವಂದನಾ ಕಾರ್ಯಕ್ರಮಮುಂದಿನ 5 ವರ್ಷಗಳಿಗೆ ಪಿಎಂ-ಸಮ್ಮಾನ್ ನಿಧಿ ಯೋಜನೆ ವಿಸ್ತರಣೆ: ಈರಣ್ಣ ಕಡಾಡಿ ಹರ್ಷವಿಶ್ವದ ಡಿಜಿಟಲ್ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ಅಗ್ರಸ್ಥಾನ : ಪ್ರೊ. ದೆಬಬ್ರತ ದಾಸ್ಆ.4ರಿಂದ 8ರವರೆಗೆ ದಾಖಲೆ ಪರಿಶೀಲನೆ: ಕೆಇಎಬಿಡದಿ ಟೌನ್‌ಶಿಪ್‌ಗೆ ವಿರೋಧ – ಪಾದಯಾತ್ರೆಗೆ ಜೆಡಿಎಸ್‌ನಿಂದ ಹೊಸ ದಿನಾಂಕ ನಿಗದಿಪತ್ನಿಗೆ ಅನೈತಿಕ ಸಂಬಂಧ ಆರೋಪ – ವಿಡಿಯೋ ಮಾಡಿ ಹತ್ಯೆ, ಬಳಿಕ ನೇಣಿಗೆ ಶರಣಾದ ಪತಿಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ – ಸೋಮವಾರ ಸಂಜೆ ಪ್ರಮಾಣವಚನ ಫಿಕ್ಸ್ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನ ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳಿ; ಪೊಲೀಸರಿಗೆ ಸಿಎಂ ಸೂಚನೆ