LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲಾದಗಿಗೆ ಮೋಹನ್ ಭಾಗವತ್ ಭೇಟಿ- ಯುವ ಕಾರ್ಯಕರ್ತನ ಮನೆಯಲ್ಲಿ ಚಹಾ ಸೇವನೆ

Advertisement
Advertisement

ಬಾಗಲಕೋಟೆ:ರಾಷ್ಟ್ರೀಯ ಸ್ವಯಂಸೇವಕ ಸಂಘದ  ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮಕ್ಕೆ ಭೇಟಿ ನೀಡಿದ್ದರು.

ಗಡಿಭಾಗದ ಬೆಳಗಾವಿಯಿಂದ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದ ಮಾರ್ಗಮಧ್ಯೆ ಅವರು ಕಲಾದಗಿಯ ಸಂಘದ ಯುವ ಕಾರ್ಯಕರ್ತ ಡಾ. ಪ್ರವೀಣ್ ಭಜಂತ್ರಿ ಅವರ ಮನೆಗೆ ಭೇಟಿ ನೀಡಿ ಗಮನ ಸೆಳೆದರು.

ದೇಶದ ಅತ್ಯುನ್ನತ ಝೆಡ್ ಪ್ಲಸ್ (Z+) ಭದ್ರತಾ ಚೌಕಟ್ಟನ್ನು ಹೊಂದಿರುವ ಮೋಹನ್ ಭಾಗವತ್ ಅವರು ಕಲಾದಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಗ್ರಾಮಕ್ಕೆ ಭೇಟಿ ನೀಡಿದ ಅವರು, ನೇರವಾಗಿ ಯುವ ಕಾರ್ಯಕರ್ತ ಡಾ. ಪ್ರವೀಣ್ ಭಜಂತ್ರಿ ಅವರ ನಿವಾಸಕ್ಕೆ ತೆರಳಿದರು. 

ಡಾ. ಪ್ರವೀಣ್ ಭಜಂತ್ರಿ ಅವರ ಮನೆಯಲ್ಲಿ ಸುಮಾರು 10 ನಿಮಿಷಗಳ ಕಾಲ ಕಳೆದ ಮೋಹನ್‌ ಭಾಗವತ್‌ ಪ್ರವೀಣ್ ಅವರ ಕುಟುಂಬ ಸದಸ್ಯರೊಂದಿಗೆ ಅತ್ಯಂತ ಆತ್ಮೀಯವಾಗಿ ಮಾತನಾಡಿಸಿ ಕುಶಲೋಪರಿ ವಿಚಾರಿಸಿದರು. ಈ ವೇಳೆ ಅವರ ಮನೆಯಲ್ಲಿ ಚಹಾ ಸೇವಿಸಿದ ಮೋಹನ್ ಭಾಗವತ್, ಇಡೀ ಕುಟುಂಬಕ್ಕೆ ಹರಸಿದರು. ಸಂಘದ ಪರಮೋಚ್ಛ ನಾಯಕರೇ ತಮ್ಮ ಮನೆಗೆ ಭೇಟಿ ನೀಡಿದ್ದರಿಂದ ಭಜಂತ್ರಿ ಕುಟುಂಬದಲ್ಲಿ ಹರ್ಷ ವ್ಯಕ್ತವಾಗಿದೆ.

ಕಲಾದಗಿಯಲ್ಲಿ ಕೆಲಕಾಲ ಕಳೆದ ಬಳಿಕ ಮೋಹನ್ ಭಾಗವತ್ ಅವರು ನೇರವಾಗಿ ವಿಜಯಪುರ ಜಿಲ್ಲೆಗೆ ಪ್ರಯಾಣ ಬೆಳೆಸಿದರು. ವಿಜಯಪುರ ನಗರದಲ್ಲಿ ಇಂದು ಆಯೋಜಿಸಲಾಗಿರುವ ಸಂಘದ ಪ್ರಮುಖ ಸಾಂಸ್ಥಿಕ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ರಾಜಕೀಯ ಬೇರೆ, ಕೆಲಸ ಬೇರೆ – ಕೃಷ್ಣ ಬೈರೇಗೌಡ ಕಾರ್ಯವೈಖರಿಗೆ ಹೆಚ್‌ಡಿಡಿ ಶ್ಲಾಘನೆಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆಬಿಡದಿ ಟೌನ್‌ಶಿಪ್ ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು: ನಿಖಿಲ್ ಆಗ್ರಹಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿಸುಪ್ರೀಂನಲ್ಲಿ ಲಾಲೂಗೆ ಬಿಗ್‌ ರಿಲೀಫ್‌ – ಸಿಬಿಐ ಅರ್ಜಿ ವಜಾ50 ಲಕ್ಷಕ್ಕಾಗಿ ಪತ್ನಿ, ಮಾವನ ಮೇಲೆ ಹಲ್ಲೆಗೆ ಯತ್ನ – PSIಗೆ ಪರಸ್ತ್ರೀ ವ್ಯಾಮೋಹ, ಕಾಮಪುರಾಣ ಬಯಲುಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆಯಂತೆ ಟೌನ್‌ಶಿಪ್‌ – ಡಿಕೆಶಿ ವಿರುದ್ಧ ಹೆಚ್‌ಡಿಡಿ ಸ್ಫೋಟಕ ಆರೋಪಕಲಾದಗಿಗೆ ಮೋಹನ್ ಭಾಗವತ್ ಭೇಟಿ- ಯುವ ಕಾರ್ಯಕರ್ತನ ಮನೆಯಲ್ಲಿ ಚಹಾ ಸೇವನೆCWMA ಸಭೆ ಬಳಿಕ ನಾಲೆಗಳಿಗೆ ನೀರು; ಈ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ