LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ನರಗುಂದ ಬಂದ್

Advertisement

ಗದಗ: ಬರ ಘೋಷಣೆ, ಬರ ಪರಿಹಾರ, ಬೆಳೆ ವಿಮೆ ಪರಿಹಾರ, ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಘೋಷಿಸುವಂತೆ ಆಗ್ರಹಿಸಿ ಜಿಲ್ಲೆಯ ನರಗುಂದ  ಪಟ್ಟಣ ಬಂದ್‌ಗೆ ಇಂದು (ಸೆ.12) ಕರೆ ನೀಡಲಾಗಿದೆ.

ಗದಗ  ಜಿಲ್ಲೆಯ ವಿವಿಧ ರೈತ ಸಂಘಟನೆಗಳು, ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವೇದಿಕೆ ಸೇರಿದಂತೆ ಅನೇಕ ಸಂಘಟನೆಗಳು ಒಟ್ಟಾಗಿ ನರಗುಂದ ಬಂದ್‌ಗೆ ಕರೆ ನೀಡಿವೆ. ಸದ್ಯ ಬಸ್ ಸಂಚಾರ, ವ್ಯಾಪಾರ, ವಹಿವಾಟು, ಅಂಗಡಿ ಬಂದ್ ಮಾಡಲಾಗಿದೆ. ಹುಬ್ಬಳ್ಳಿ-ನರಗುಂದ-ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಳಿಗ್ಗೆಯಿಂದ ಬಸ್ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಇದರಿಂದ ಬೇರೆ ಊರುಗಳಿಗೆ ಹೋಗುವ ಪ್ರಯಾಣಿಕರರು ಪರದಾಡುವಂತಾಗಿದೆ. ಹೈವೆ ಬಂದ್ ಮಾಡಿದ್ದಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಎಂದಿನಂತೆ ಇತರೆ ಖಾಸಗಿ ವಾಹನಗಳ ಸಂಚಾರ, ಶಾಲಾ, ಕಾಲೇಜುಗಳು, ಸರ್ಕಾರಿ ಕಚೇರಿಗಳು ಆರಂಭವಾಗಿವೆ.

ನರಗುಂದ ಮುಖ್ಯ ರಸ್ತೆಯಲ್ಲಿ ವಾಹನ ತಡೆದು ರೈತರು ಹೋರಾಟ ಮಾಡಿದ್ದು, ಗದಗ ಜಿಲ್ಲೆಯ 7 ತಾಲೂಕು ಬರ ಘೋಷಣೆಗೆ ಒತ್ತಾಯಿಸಿದ್ದಾರೆ. ಜೊತೆಗೆ ಸರ್ಕಾರ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಈ ವೇಳೆ ಅನೇಕ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಭಾಗವಹಿಸಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ನರಗುಂದ ಬಂದ್ಗೌರಿಯ ಪೂಜೆಗೆ ಬೇಕೇ ಬೇಕು ಈ ವಿಶೇಷ ಪುಷ್ಪ – ಅದ್ಯಾವುದು ಗೊತ್ತಾ?ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನವಯುಗ ಟೋಲ್ ಬಳಿ ಟ್ರಾಫಿಕ್‌ ಜಾಮ್‌ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!ಪರಪುರುಷನೊಂದಿಗೆ ಲವ್ವಿಡವ್ವಿ – ಹಾಸಿಗೆ ಹಿಡಿದ ಪತಿ ಕೊಂದು ಹೃದಯಾಘಾತ ಅಂತ ನಾಟಕವಾಡಿದ್ದ ಹೈನಾತಿಬೇರೆ ಯಾವುದೇ ದೇಶದಲ್ಲಿ ಹೀಗೆ ನಡೆಯೋದಿಲ್ಲ – ಸತೀಶ್‌ ಜಾರಕಿಹೊಳಿ ಪರ ವಿಜಯ್‌ ಮಲ್ಯ ಬ್ಯಾಟಿಂಗ್‌ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ: ಇನ್ಸ್‌ಪೆಕ್ಟರ್‌ ಧಮ್ಕಿಸೆ.14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ನಿಷೇಧಕ್ಸ್ ಸಭೆಗೂ ಮುನ್ನ ಮಹತ್ವದ ನಿರ್ಧಾರ ಘೋಷಿಸಿದ ಚೀನಾ – 6 ವರ್ಷಗಳ ನಂತರ ಭಾರತಕ್ಕೆ ಏರ್ಲೈನ್ಸ್ ಸೇವೆ ಪುನಾರಂಭಒಂದೇ ವೇಲ್‌ನಲ್ಲಿ ನೇಣಿಗೆ ಕೊರಳೊಡ್ಡಿದ ಆಂಟಿ & ಯುವಕ – ಲವ್‌ಗೆ ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಶಂಕೆ