LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ತೊರೆದ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ

Advertisement
Advertisement

ನವದೆಹಲಿ: ಭಾರತೀಯ ಜನತಾ ಪಾರ್ಟಿಯ  ರಾಷ್ಟ್ರೀಯ ವಕ್ತಾರಾಗಿದ್ದ ಶೆಹಜಾದ್ ಪೂನಾವಾಲಾ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.

ತಮ್ಮ ‘X’ ಖಾತೆಯ ಬಯೋ  ಬದಲಾಯಿಸಿಕೊಂಡಿದ್ದು, ‘ಬಿಜೆಪಿ ರಾಷ್ಟ್ರೀಯ ವಕ್ತಾರ’ ಎಂಬ ಹುದ್ದೆಯ ಹೆಸರನ್ನು ತೆರವುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಸಕ್ರಿಯ ರಾಜಕೀಯದಿಂದ ಹೊರನಡೆಯುತ್ತಾರೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆ ಆರಂಭವಾಗಿದೆ.

 

ಬಯೋದಲ್ಲಿ ಏನಿದೆ?
ಗುರುವಾರ ತಮ್ಮ ಪರಿಷ್ಕೃತ X ಪ್ರೊಫೈಲ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ 38 ವರ್ಷದ ಪೂನಾವಾಲಾ, “ನನ್ನ ನವೀಕರಿಸಿದ ಬಯೋ” ಎಂದು ಬರೆದುಕೊಂಡಿದ್ದರು. ಆ ನವೀಕೃತ ವಿವರಣೆಯಲ್ಲಿ “ಧರ್ಮ: ಇಸ್ಲಾಂ, ಸಂಸ್ಕೃತಿ: ಹಿಂದೂ, ಸಿದ್ಧಾಂತ: ಭಾರತೀಯ. ಲೇಖಕ: ಜಿಎಸ್‌ಟಿ ಕಿ ಯಾತ್ರಾ; ಪ್ರಧಾನಿ ನರೇಂದ್ರ ಮೋದಿ ಅವರ ಅನುಯಾಯಿ” ಎಂದು ಅಪ್‌ಡೇಟ್‌ ಮಾಡಿದ್ದರು.

ಬಯೋ ಬದಲಾಯಿಸಿದ ಬೆನ್ನಲ್ಲೇ ಪೂನಾವಾಲಾ ತಮ್ಮ ಹಳೆಯ ಎರಡು ವಿಡಿಯೊ ಸಂದರ್ಶನಗಳ ತುಣುಕುಗಳನ್ನು ಮರುಹಂಚಿಕೊಂಡಿದ್ದಾರೆ. ಆ ವಿಡಿಯೊಗಳಲ್ಲಿ ಅವರು, ರಾಜಕೀಯ ಮತ್ತು ಚುನಾವಣಾ ಹುದ್ದೆಗಳನ್ನು ಹೊರತುಪಡಿಸಿಯೂ ಸಮಾಜ ಸೇವೆ ಮಾಡಬಹುದು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅಥವಾ ಜನಪ್ರತಿನಿಧಿಯಾಗುವುದು ಮಾತ್ರವೇ ಸಮಾಜ ಸೇವೆಯಲ್ಲ ಎಂದು ಹೇಳಿದ್ದರು.

ಮತ್ತೊಂದು ವಿಡಿಯೊದಲ್ಲಿ, “2024ರ ಲೋಕಸಭೆ ಚುನಾವಣೆ ಮುಗಿದ ತಕ್ಷಣವೇ ಸಕ್ರಿಯ ರಾಜಕೀಯದಿಂದ ಹೊರನಡೆಯಲು ನಿರ್ಧರಿಸಿದ್ದೆ. ಆದರೆ ಪ್ರಧಾನಿ ಮೋದಿಯವರ ಭಾವುಕ ಕ್ಷಣಗಳು ಹಾಗೂ ದೆಹಲಿ, ಹರಿಯಾಣ, ಮಹಾರಾಷ್ಟ್ರ, ಬಂಗಾಳ ಮುಂತಾದ ಪ್ರಮುಖ ರಾಜ್ಯಗಳ ಚುನಾವಣೆಗಳು ಎದುರಿಗಿದ್ದ ಕಾರಣ ಪಕ್ಷಕ್ಕಾಗಿ ಶ್ರಮಿಸಲು ಮುಂದುವರಿದೆ. ಈಗ ಸಕ್ರಿಯ ರಾಜಕೀಯದಿಂದ ದೂರ ಸರಿಯುವ ಸಮಯ ಬಂದಿದೆ ಎಂದು ಪೂನಾವಾಲಾ ವಿವರಿಸಿದ್ದರು. ಈ ವಿಡಿಯೊ ಹಂಚಿಕೊಳ್ಳುವಾಗ ಈಗಾಗಲೇ 2 ವರ್ಷ ತಡವಾಗಿದೆ ಎಂಬ ಅಡಿಬರಹವನ್ನೂ ಬರೆದುಕೊಂಡಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಳವಣಿಗೆ ಸಂಚಲನ ಮೂಡಿಸಿದ್ದರೂ, ಶೆಹಜಾದ್ ಪೂನಾವಾಲಾ ಅಥವಾ ಬಿಜೆಪಿ ಹೈಕಮಾಂಡ್‌ನಿಂದ ಯಾವುದೇ ಅಧಿಕೃತ ಪ್ರಕಟಣೆ ಅಥವಾ ರಾಜೀನಾಮೆಯ ಸ್ಪಷ್ಟನೆ ಹೊರಬಿದ್ದಿಲ್ಲ. ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಇಂದಿಗೂ ‘ಬಿಜೆಪಿ ರಾಷ್ಟ್ರೀಯ ವಕ್ತಾರ’ ಎಂದೇ ನಮೂದಾಗಿದೆ.

ವೃತ್ತಿಯಲ್ಲಿ ವಕೀಲ ಮತ್ತು ಕಾರ್ಯಕರ್ತರಾಗಿರುವ ಶೆಹಜಾದ್ ಪೂನಾವಾಲಾ, ಆರಂಭದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದರು. 2017 ರಲ್ಲಿ ಕಾಂಗ್ರೇಸ್ ಪಕ್ಷದ ಅಧ್ಯಕ್ಷೀಯ ಚುನಾವಣೆ ಹಾಗೂ ವಂಶಪಾರಂಪರ್ಯ ರಾಜಕೀಯದ ವಿರುದ್ಧ ಬಹಿರಂಗವಾಗಿ ಬಂಡಾಯವೆದ್ದು ಸುದ್ದಿಯಾದರು. ಆ ನಂತರ ಬಿಜೆಪಿಗೆ ಸೇರ್ಪಡೆಯಾದ ಅವರಿಗೆ ಪಕ್ಷವು ರಾಷ್ಟ್ರೀಯ ವಕ್ತಾರ ಹೊಣೆಗಾರಿಕೆಯನ್ನು ನೀಡಿತ್ತು. ಮಾಧ್ಯಮ ಚರ್ಚೆಗಳಲ್ಲಿ ಬಿಜೆಪಿಯ ಪ್ರಬಲ ಧ್ವನಿಯಾಗಿ ಗುರುತಿಸಿಕೊಂಡಿದ್ದ ಪೂನಾವಾಲಾ ಅವರ ಈ ದಿಢೀರ್ ನಡೆ ಇದೀಗ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದ್ದೇನೆ   ಲಕ್ಷ್ಮಿ ರಾಥೋಡ್ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಆಗೋವರೆಗೆ ತಮಿಳುನಾಡಿಗೆ ನೀರು ಬಿಡಲ್ಲ: ರಾಮಲಿಂಗಾರೆಡ್ಡಿಕೂಲಿ ಹಣ ಕೇಳಿದ್ದಕ್ಕೆ ಕಾಂಗ್ರೆಸ್‌ ಮುಖಂಡನಿಂದ ಬೆದರಿಕೆ ಆರೋಪ – ವ್ಯಕ್ತಿ ಆತ್ಮಹತ್ಯೆಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭೇಟಿಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭಯೋಗೇಶ್ ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಜಾಮೀನು ಮಂಜೂರುಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆಕೊಡಗಿನಲ್ಲಿ ಮಳೆಯ ಅಬ್ಬರ – ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗು ಕೊಂದ ಪಾಪಿ ಪತಿʻಕಾವೇರಿ ಕಿಚ್ಚುʼ – ತಮಿಳುನಾಡು ಸಿಎಂ ವಿಜಯ್‌ ಭೇಟಿ ಮುಂದೂಡಿಕೆಗೆ ಸಿಎಂ ಡಿಕೆಶಿ ಮನವಿ