LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶುಕ್ರವಾರ ದೇಶಾದ್ಯಂತ ಮುಷ್ಕರ; ಸತತ ನಾಲ್ಕು ದಿನ ಬ್ಯಾಂಕ್‌ ಸೇವೆ ಬಂದ್‌

Advertisement

ಬೆಂಗಳೂರು: ದೇಶದ್ಯಾಂತ (ಸೆ. 11) ಶುಕ್ರವಾರ ಬ್ಯಾಂಕ್ ಯೂನಿಯನ್‌ಗಳು  ಮುಷ್ಕರಕ್ಕೆ ಕರೆ ನೀಡಿದ್ದು, ಬೆಂಗಳೂರು ಸೇರಿದಂತೆ  ರಾಜ್ಯದಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಬಂದ್‌ ಆಗಲಿವೆ.

ಈ ತಿಂಗಳು ವಾರದ ಎರಡನೇ ಶನಿವಾರಕ್ಕೂ ಒಂದು ದಿನ ಮೊದಲೇ ಬ್ಯಾಂಕ್‌ ರಜೆ ಇರಲಿದೆ. ವಾರಕ್ಕೆ ಐದು ದಿನಗಳ ಕೆಲಸದ ವಿಧಾನ, ಪಿಂಚಣಿಯ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆ ಇಟ್ಟಿದ್ದು, ಪರಿಣಾಮ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್  ಶುಕ್ರವಾರ ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಆದ ಕಾರಣ ನಾಳೆಯಿಂದ ಸತತ ನಾಲ್ಕು ದಿನಗಳ ಕಾಲ ಜನರಿಗೆ ಬ್ಯಾಂಕ್‌ ಸೇವೆಗಳು ಲಭ್ಯವಿರುವುದಿಲ್ಲ.

ನಾಲ್ಕು ದಿನ ಬಂದ್‌ ಏಕೆ?
ದೇಶಾದ್ಯಂತ ಬ್ಯಾಂಕ್‌ ಸಿಬ್ಬಂದಿ, ವಾರಕ್ಕೆ ಐದು ದಿನಗಳ ಕೆಲಸ ವಿಧಾನವನ್ನು ಜಾರಿ ಮಾಡಬೇಕು. ಪಿಂಚಣಿ ಸಮಸ್ಯೆಗಳನ್ನು ತಕ್ಷಣದಿಂದಲೇ ಬಗೆಹರಿಸಬೇಕು. ಕೆಲಸ ಸಾಮರ್ಥ್ಯದ ಆಧಾರದ ಮೇಲೆ ಪ್ರೋತ್ಸಾಹ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. 

ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರಲು ಬ್ಯಾಂಕ್‌ ಯೂನಿಯನ್‌ಗಳು ಈ ನಿರ್ಧಾರ ತೆಗೆದುಕೊಂಡಿವೆ. ಇದರೊಂದಿಗೆ ನಾಳೆ ಅಂದರೆ ಸೆಪ್ಟೆಂಬರ್ 11 ರಿಂದ ಬ್ಯಾಂಕ್ ಸೇವೆಗಳಲ್ಲಿ ಸಮಸ್ಯೆಗಳು ಎದುರಾಗಲಿದೆ. ಆ ಬಳಿಕ ಎರಡನೇ ಶನಿವಾರ ಮತ್ತು ಭಾನುವಾರ ರಜೆ ಇದ್ದು, ಸೋಮವಾರ ಗಣೇಶ ಚತುರ್ಥಿಯ ಇರುವುದರಿಂದ ಸಾರ್ವತ್ರಿಕ ರಜೆ ಇದ್ದು, ಸತತವಾಗಿ ನಾಲ್ಕು ದಿನಗಳು ಬಂದ್ ಇರಲಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶುಕ್ರವಾರ ದೇಶಾದ್ಯಂತ ಮುಷ್ಕರ; ಸತತ ನಾಲ್ಕು ದಿನ ಬ್ಯಾಂಕ್‌ ಸೇವೆ ಬಂದ್‌ಕರ್ನಾಟಕದಲ್ಲಿ ಉರ್ದು ಮಾಧ್ಯಮ ಶಿಕ್ಷಣದ ಸ್ಥಿತಿಗತಿ ಅಧ್ಯಯನ ವರದಿ-2025 ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪಶಾಸ್ತ್ರದ ಮಾತು ನಂಬಿ ಊರನ್ನೇ ತೊರೆದ ಗೌಳಿ ಕುಟುಂಬಗಳು – ಸಾವಿನ ಭಯಕ್ಕೆ ಗ್ರಾಮವೇ ಖಾಲಿಆಂಧ್ರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣುಆಂಧ್ರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣುಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಅಂತ್ಯ – ಪುತ್ರಿ, ಗೋಕಾಕ್ ಮನೆಯಲ್ಲಿ 3 ಕೋಟಿ ರೂ. ಸೀಜ್ನಾವೆಲ್ಲ ಒಟ್ಟಾಗಿ ರಾಜ್ಯದಲ್ಲಿ ರೈತರು, ದಲಿತರು, ಹಿಂದೂಗಳ ಪರ ಸರ್ಕಾರ ತರಬೇಕು: ವಿಜಯೇಂದ್ರ ಕರೆಜಾನಪದ ವಿಶ್ವವಿದ್ಯಾಲಯದಲ್ಲಿ ಅನುಮತಿ ಇಲ್ಲದೆ ಹೊಸ ಪಠ್ಯಕ್ರಮ; 8 ಕೋರ್ಸ್‌ಗಳು ರದ್ದುನದಿ ನೀರನ್ನ ಕಲುಷಿತಗೊಳಿಸಿದ್ರೆ ಕಾರ್ಖಾನೆ ಮುಚ್ಚಿಸುತ್ತೇವೆ: ರಾಮಲಿಂಗಾರೆಡ್ಡಿ ಎಚ್ಚರಿಕೆತಂತ್ರಜ್ಞಾನ ಬಳಸಿ, ಖುದ್ದು ಹಾಜರಾತಿ ಸಮಸ್ಯೆಯಾಗುತ್ತೆ – ಸೆ.16ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್