LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಲು ಕ್ವಾರಿ ದುರಂತಕ್ಕೆ NHRC ಸ್ವಯಂಪ್ರೇರಿತ ದೂರು – ರಾಜ್ಯ ಸರ್ಕಾರಕ್ಕೆ ನೋಟಿಸ್

Advertisement

ನವದೆಹಲಿ: ಬೆಂಗಳೂರಿನ ಕಲ್ಲು ಕ್ವಾರಿಯಲ್ಲಿ ಭಾರೀ ಗ್ರಾನೈಟ್ ಬಂಡೆ ಕುಸಿದು ಏಳು ವಲಸೆ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ದುರಂತ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ  ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಈ ಸಂಬಂಧ ಆಯೋಗವು, ಕರ್ನಾಟಕ ಸರ್ಕಾರದ  ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ, ಘಟನೆಯ ಕುರಿತು ಸಮಗ್ರ ವರದಿಯನ್ನು ಎರಡು ವಾರದೊಳಗೆ ಸಲ್ಲಿಸುವಂತೆ ನಿರ್ದೇಶಿಸಿದೆ. 

ಜು.2ರಂದು ಬೆಂಗಳೂರಿನ  ಕಲ್ಲುಕ್ವಾರಿಯಲ್ಲಿ ಈ ದುರಂತ ಸಂಭವಿಸಿತ್ತು. ಭಾರೀ ಗ್ರಾನೈಟ್ ಬಂಡೆ ಏಕಾಏಕಿ ಕಾರ್ಮಿಕರ ಮೇಲೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟರೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆ ಸಂಭವಿಸಿದ ವೇಳೆ ಸುಮಾರು 16 ಮಂದಿ ಕಾರ್ಮಿಕರು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಾಧ್ಯಮಗಳ ವರದಿಗಳ ಪ್ರಕಾರ, ಕಲ್ಲು ಕ್ವಾರಿ ಮಾಲೀಕರ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎನ್‌ಹೆಚ್‌ಆರ್‌ಸಿ, ವರದಿಗಳಲ್ಲಿನ ಮಾಹಿತಿ ನಿಜವಾಗಿದ್ದರೆ, ಇದು ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಪ್ರಕರಣವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಆಯೋಗವು ತನ್ನ ನೋಟಿಸ್‌ನಲ್ಲಿ ಘಟನೆಯ ಹಿನ್ನೆಲೆ, ಸುರಕ್ಷತಾ ಕ್ರಮಗಳ ಅನುಸರಣೆ, ಅಪಘಾತಕ್ಕೆ ಕಾರಣವಾದ ಅಂಶಗಳು, ಮೃತರು ಹಾಗೂ ಗಾಯಾಳುಗಳಿಗೆ ನೀಡಿರುವ ಪರಿಹಾರ ಮತ್ತು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ವಿವರವಾದ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾದಿ ಬೀದಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನೀಡಿದ್ದು ಯಾರು – ಸುರೇಶ್‌ಕುಮಾರ್‌ ಪ್ರಶ್ನೆನಿರ್ಭಯ ಕೇಸ್‌ನಲ್ಲಿದ್ದಂತವರಲ್ಲ ಇವರು, ಪೋಕ್ಸೋ ಆರೋಪಿಗಳನ್ನು ಬಿಡಿ – ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆರೈತರ ಜಮೀನುಗಳಲ್ಲಿ ಕೇಬಲ್ ಕಳ್ಳತನ – ಇಬ್ಬರು ಕಳ್ಳರನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರುರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರುSIR ದುರ್ಬಳಕೆ ಮಾಡಿಕೊಂಡಿಲ್ಲ – ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದ ಯತೀಂದ್ರSIR ಪ್ರಕ್ರಿಯೆಯಲ್ಲಿ ನಾವ್ಯಾರು ಕೈ ಹಾಕಿಲ್ಲ, ಆದ್ರೆ ಆಯೋಗ ಮಾಡ್ತಿರೋ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: ಡಿಕೆಶಿಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪತಿ ಎಸ್ಕೇಪ್ ಮೊಬೈಲ್ ಟಾರ್ಚ್‌ ಹಿಡಿದು KKRTC ಬಸ್‌ ಚಾಲನೆ – ಮೂವರು ಅಮಾನತುರಾಮ ಮಂದಿರ ದೇಣಿಗೆ ಹಗರಣ| ಚಂಪತ್ ರಾಯ್ ರಾಜೀನಾಮೆ ಅಂಗೀಕಾರ; ಬಜರಂಗ್ ಬಾಗ್ರ ಹೊಸ ಪ್ರಧಾನ ಕಾರ್ಯದರ್ಶಿಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್ ವಾರ್ – ಭೀಕರ ಘರ್ಷಣೆಗೆ 25 ಕೈದಿಗಳು ಬಲಿ, 100ಕ್ಕೂ ಹೆಚ್ಚು ಜನರಿಗೆ ಗಾಯ