LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಡವಾಗಿ ಬಂದ ಕಾರಣ ನೀಟ್ ಪರೀಕ್ಷೆಗೆ ನೋ ಎಂಟ್ರಿ; ಕಣ್ಣೀರಿಟ್ಟ ವಿದ್ಯಾರ್ಥಿನಿಯರು

Advertisement

ಕೊಪ್ಪಳ: ನೀಟ್‌ ಮರುಪರೀಕ್ಷೆ ಬರೆಯಲು ತಡವಾಗಿ ಬಂದ ಕಾರಣ ಪರೀಕ್ಷೆಗೆ(Exam Center) ಅವಕಾಶ ಸಿಗದೆ ವಿದ್ಯಾರ್ಥಿನಿಯರು ನಿರಾಸೆಯಿಂದ ಕಣ್ಣೀರಿಟ್ಟು ಮನೆಗೆ ಮರಳಿದ ಘಟನೆ ಬೆಂಗಳೂರು ಮತ್ತು ಕೊಪ್ಪಳದಲ್ಲಿ(Koppal) ನಡೆದಿದೆ.

ಬೆಂಗಳೂರಿನ ಆರ್‌ಸಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ. ನಿಗದಿತ ಸಮಯದ ಬಳಿಕ ಕೇಂದ್ರಕ್ಕೆ ಬಂದ ಕಾರಣ ಅಧಿಕಾರಿಗಳು ಪ್ರವೇಶ ನಿರಾಕರಿಸಿದರು.

ಬಸ್ ಸಮಸ್ಯೆ ಹಾಗೂ ಟ್ರಾಫಿಕ್ ದಟ್ಟಣೆ ಕಾರಣದಿಂದ ತಡವಾಗಿದೆ ಎಂದು ವಿದ್ಯಾರ್ಥಿನಿಯರು ಮತ್ತು ಅವರ ಕುಟುಂಬಸ್ಥರು ಗೇಟ್ ಬಳಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಂಡ ವಿದ್ಯಾರ್ಥಿನಿಯರು ನಿರಾಸೆಯಿಂದ ಹಿಂದಿರುಗಿದ್ದಾರೆ. ಇದೇ ರೀತಿ ಮತ್ತೊಂದು ಘಟನೆ ಕೊಪ್ಪಳದಲ್ಲೂ ನಡೆದಿದೆ. ಗಂಗಾವತಿ ಮೂಲದ ಪಾತಿಮಾ ಎಂಬ ವಿದ್ಯಾರ್ಥಿನಿ ನೀಟ್ ಮರುಪರೀಕ್ಷೆ ಬರೆಯಲು ಕೊಪ್ಪಳದ ಪ್ರಥಮ ದರ್ಜೆ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಳು.

ಮಧ್ಯಾಹ್ನ 1.53ಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದ ಪಾತಿಮಾಗೆ ಪ್ರವೇಶ ನಿರಾಕರಿಸಲಾಯಿತು. ವಿದ್ಯಾರ್ಥಿನಿ ಪರೀಕ್ಷೆ ಆರಂಭವಾದ 23 ನಿಮಿಷಗಳ ನಂತರ ಕೇಂದ್ರಕ್ಕೆ ಬಂದಿರುವ ಕಾರಣ ಅಧಿಕಾರಿಗಳು ಅವಕಾಶ ನೀಡಲಿಲ್ಲ.

ಗೇಟ್ ಎದುರು ನಿಂತು ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪಾತಿಮಾ ಮನವಿ ಮಾಡಿದಳು. ಪರೀಕ್ಷಾ ನಿರೀಕ್ಷಕರನ್ನು ಬೇಡಿಕೊಂಡರೂ ಯಾವುದೇ ಅವಕಾಶ ಸಿಗಲಿಲ್ಲ. ಪರೀಕ್ಷೆಗಾಗಿ ಹಲವು ತಿಂಗಳುಗಳ ಕಾಲ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿನಿ, ಕೊನೆ ಕ್ಷಣದಲ್ಲಿ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ತೆರಳಿದರು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರಿ ನೌಕರರಿಗೆ ಇಲ್ವಾ ಗ್ಯಾರಂಟಿ?ಜೈಲಿನಲ್ಲಿ ಪ್ರಾಣಾಯಾಮ, ಶವಾಸನ ಮಾಡಿದ ದರ್ಶನ್‌ಮೈಸೂರು ರೈಲು ನಿಲ್ದಾಣದಲ್ಲಿ 40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರು ಪತ್ತೆ – ತೀವ್ರ ವಿಚಾರಣೆಅಡ್ಡ ಮತದಾನ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಚಂದ್ರು ಲಮಾಣಿ51 ವರ್ಷಗಳಿಂದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ದೇವಸ್ಥಾನ ಮತ್ತೆ ಗೋಚರ!ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟುಹೆಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಬಿಗ್ ಶಾಕ್: ಕ್ಲಿನಿಕಲ್ ಟ್ರಯಲ್ ನಡೆಸದಂತೆ ಕೇಂದ್ರ ಸರ್ಕಾರದಿಂದ 2 ವರ್ಷ ನಿಷೇಧಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ – BMTC 44%, KSRTC 33% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪಧೈರ್ಯವಿದ್ದರೆ ನನ್ನ ಜೊತೆ ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ – ಡಿಕೆಶಿಗೆ ಹೆಚ್‌ಡಿಕೆ ಸವಾಲು