LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಪಂನಲ್ಲಿ ಇ-ಸ್ವತ್ತು ಪಡೆಯಲು ಆನ್‌ಲೈನ್ ಅರ್ಜಿ

Advertisement
Advertisement
Advertisement
ಬೆಳಗಾವಿ:ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಗೆ ಆನ್‌ಲೈನ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಜಿಪಂ ಸಿಇಒ ರಾಹುಲ ಶಿಂಧೆ ತಿಳಿಸಿದ್ದಾರೆ.
 ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಸಾರ್ವಜನಿಕರಿಂದ ಈವರೆಗೆ ಒಟ್ಟು 3,403 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 2,862 ಅರ್ಜಿಗಳಿಗೆ ಇ-ಸ್ವತ್ತು ವಿತರಿಸಲಾಗಿದೆ. ಉಳಿದ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಳ್ಳಲಾಗುತ್ತಿದೆ.
ಇ-ಸ್ವತ್ತು ಪಡೆಯಲು ಸಾರ್ವಜನಿಕರು ಗ್ರಾಮ ಪಂಚಾಯಿತಿ ಕಚೇರಿಗೆ ಪ್ರತಿಬಾರಿ ಭೇಟಿ ನೀಡುವ ಅಗತ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ವಿವಿಧ ಸೇವಾ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ತಮ್ಮ ಸಮೀಪದ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಸ್ವತ್ತು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಇದರೊಂದಿಗೆ, ಸಾರ್ವಜನಿಕರು ತಮ್ಮ ವ್ಯಾಪ್ತಿಯ ಗ್ರಾಪಂ ಕಾರ್ಯಾಲಯಕ್ಕೆ ನೇರವಾಗಿ ಭೇಟಿ ನೀಡಿ ಅಲ್ಲಿಯೇ ಆನ್‌ಲೈನ್ ಅರ್ಜಿ ಸಲ್ಲಿಸುವ ಸೌಲಭ್ಯವನ್ನೂ ಬಳಸಿಕೊಳ್ಳಬಹುದಾಗಿದೆ. ಇ-ಸ್ವತ್ತು ಪಡೆಯಬೇಕಿರುವ ಗ್ರಾಪಂ ವ್ಯಾಪ್ತಿಯ ಆಸ್ತಿ ಮಾಲೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೈ ಬೈ ಪಪ್ಪಾ ಎಂದು ಚೆನಾಬ್ ನದಿಗೆ ಜಿಗಿದ ಯುವತಿ – ವಿಡಿಯೋ ವೈರಲ್‌ವೈದ್ಯನಿಂದ ಯುವತಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ; FIR ದಾಖಲುರೀಲ್ಸ್‌ಗಾಗಿ 30 ಅಡಿ ಎತ್ತರದಿಂದ ಡ್ಯಾಂಗೆ ಜಿಗಿದ ವ್ಯಕ್ತಿ – ಎರಡೂ ಕಾಲುಗಳ ಮೂಳೆ ಮುರಿತಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ – 5 ಲಕ್ಷದವರೆಗೆ ಆರೋಗ್ಯ ಸೇವೆ; ಸಿಎಂ ಯೋಗಿ ಬಂಪರ್‌ ಗಿಫ್ಟ್‌!ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ – 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!ಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದ ಎಫ್‌ಡಿಎ – ಚಿಕಿತ್ಸೆ ಫಲಿಸದೇ ಸಾವುಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆಕಚೇರಿ ಅಲೆದಾಟಕ್ಕೆ ಇನ್ಮುಂದೆ ಬ್ರೇಕ್!