LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

NDA ಸೇರ್ಪಡೆಯಾಗದೇ ಮಹಿಳಾ ಮೀಸಲಾತಿ, ಡಿಲಿಮಿಟೇಷನ್‌ ಮಸೂದೆಗೆ ಪವಾರ್ ಬಣ ಬೆಂಬಲ!

Advertisement
Advertisement

ಮುಂಬೈ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ  ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ  ಶರದ್ ಪವಾರ್ ಅವರ ಎನ್‌ಸಿಪಿ ಬಣ ಬೆಂಬಲ ನೀಡುವ ಸಾಧ್ಯತೆಯಿದೆ.

ಆಡಳಿತರೂಢ ಎನ್‌ಡಿಎ  ಒಕ್ಕೂಟವನ್ನು ಅಧಿಕೃತವಾಗಿ ಸೇರದೆ ವಿಷಯ ಆಧಾರಿತವಾಗಿ ಈ ಪ್ರಮುಖ ಮಸೂದೆಗಳ ಪರವಾಗಿ ಮತ ಚಲಾಯಿಸಲು ಪವಾರ್ ಕ್ಯಾಂಪ್ ನಿರ್ಧರಿಸಿದೆ ಎಂದು ಎಂದು ಮೂಲಗಳು ತಿಳಿಸಿವೆ.

ಕೇವಲ ಮಸೂದೆಗೆ ಬೆಂಬಲ
ಸದ್ಯ 9 ಸಂಸದರು(8 ಲೋಕಸಭೆ ಮತ್ತು ಮತ್ತು 1 ರಾಜ್ಯಸಭೆ ಸದಸ್ಯ) ಹೊಂದಿರುವ ಶರದ್ ಪವಾರ್ ಬಣವು ಎನ್‌ಡಿಎ ಮೈತ್ರಿಕೂಟದ ಭಾಗವಾಗುವ ಯಾವುದೇ ಯೋಜನೆ ಹೊಂದಿಲ್ಲ. 2023 ರಲ್ಲಿ ಅಜಿತ್ ಪವಾರ್ ಬಂಡಾಯ ಎದ್ದು ಮಹಾಯುತಿ ಸರ್ಕಾರ ಸೇರಿದ ಬಳಿಕ ಎನ್‌ಸಿಪಿ ಎರಡು ಭಾಗವಾಗಿ ಒಡೆದಿತ್ತು. ಈಗ ಮತ್ತೆ ಪಕ್ಷದಲ್ಲಿ ಸದ್ಯ ಆಡಳಿತ ಪಕ್ಷದೊಂದಿಗೆ ನಿಕಟ ಸಹಕಾರ ಹೊಂದಬೇಕು ಎಂಬ ಚರ್ಚೆಗಳ ನಡೆಯುತ್ತಿದೆ.

ಈ ಸಂದರ್ಭದಲ್ಲೇ ಪಕ್ಷ ಮತ್ತೊಂದು ಹೋಳಾಗುವುದನ್ನು ತಡೆಯಲು ಮತ್ತು ಆಂತರಿಕ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಲು ಶರದ್ ಪವಾರ್ ಅವರು ಕೇವಲ ಈ ನಿರ್ದಿಷ್ಟ ಮಸೂದೆಗಳಿಗೆ ಮಾತ್ರ ಬೆಂಬಲ ನೀಡುವ ಸೀಮಿತ ಕಾರ್ಯತಂತ್ರಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ತಡರಾತ್ರಿ ರಹಸ್ಯ ಸಭೆ
ಮಂಗಳವಾರ ತಡರಾತ್ರಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್(Devendra Fadnavis) ಅವರ ಅಧಿಕೃತ ನಿವಾಸದಲ್ಲಿ ನಡೆದ ಸರಣಿ ಸಭೆಗಳು ಮಹಾರಾಷ್ಟ್ರ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿವೆ. 

ಮೊದಲು ಅಜಿತ್ ಪವಾರ್ ಬಣದ ಹಿರಿಯ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನಿಲ್ ತಟ್ಕರೆ ಅವರು ಸಿಎಂ ಫಡ್ನವೀಸ್ ಅವರನ್ನು ಭೇಟಿಯಾದರು. ಅವರ ಬೆನ್ನಲ್ಲೇ ಶರದ್ ಪವಾರ್ ಬಣದ ಅತ್ಯಂತ ಹಿರಿಯ ನಾಯಕರಾದ ಜಯಂತ್ ಪಾಟೀಲ್ ಕೂಡ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಬೆನ್ನುಬೆನ್ನಿಗೆ ನಡೆದ ಈ ರಹಸ್ಯ ಸಭೆಗಳ ಅಧಿಕೃತ ಕಾರ್ಯಸೂಚಿಯ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಾಗಲಿ ಅಥವಾ ಸಭೆಯಲ್ಲಿ ಭಾಗವಹಿಸಿದ ನಾಯಕರಾಗಲಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಇದು ಎನ್‌ಸಿಪಿಯ ಎರಡೂ ಬಣಗಳನ್ನು ಮತ್ತೆ ಒಂದು ಮಾಡುವ ಪ್ರಯತ್ನವೇ ಅಥವಾ ಮಹಾರಾಷ್ಟ್ರದಲ್ಲಿ ಹೊಸ ರಾಜಕೀಯ ಮರುಜೋಡಣೆಯ ಮುನ್ನುಡಿಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.

ಸುಪ್ರಿಯಾ ಸುಳೆ ಹೇಳಿದ್ದೇನು?
ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯಿಂದಾಗಿ ಮಹಾರಾಷ್ಟ್ರ ಮತ್ತು ದಕ್ಷಿಣ ಭಾರತದ ರಾಜ್ಯಗಳಿಗೆ ಸಂಸತ್ತಿನಲ್ಲಿ ಪ್ರಾತಿನಿಧ್ಯ ಕಡಿಮೆ ಆಗಬಹುದು ಎಂಬ ಆತಂಕವಿದೆ. ಹೀಗಾಗಿ, ತಮ್ಮ ಪಕ್ಷವು ಮಹಾರಾಷ್ಟ್ರದ ಹಿತಾಸಕ್ತಿಗೆ ಧಕ್ಕೆಯಾಗದಂತಹ ನಿರ್ಧಾರವನ್ನು ಮಾತ್ರ ತೆಗೆದುಕೊಳ್ಳಲಿದೆ ಎಂದು ಸುಪ್ರಿಯಾ ಸುಳೆ ಸ್ಪಷ್ಟಪಡಿಸಿದ್ದಾರೆ.

ಜುಲೈ 20 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಲೋಕಸಭೆಯ ಸೀಟುಗಳ ಸಂಖ್ಯೆಯನ್ನು 850 ಕ್ಕೆ ಹೆಚ್ಚಿಸುವ ಪ್ರಸ್ತಾವನೆ ಹೊಂದಿರುವ ಸಂವಿಧಾನದ (131 ನೇ ತಿದ್ದುಪಡಿ) ಮಸೂದೆಯನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಲಮಟ್ಟಿ ಡ್ಯಾಂನಿಂದ ಕೆರೆಗಳಿಗೆ ನೀರು ಹರಿಸಿ – ಸಿಎಂ ಡಿಕೆಶಿಗೆ ಮಾಜಿ ಸಚಿವ ಶಿವಾನಂದ ಪಾಟೀಲ್ ಮನವಿಬಿಡದಿ ಟೌನ್‌ಶಿಪ್‌ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ – ಸಮಿತಿ ರಚಿಸುತ್ತೇನೆ ಎಂದ ಸಿಎಂಬೆಳಗಾವಿಯಲ್ಲಿ 165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿತ್ರಿವಳಿ ಕೊಲೆ ಕೇಸ್ – ಬ್ರೈನ್ ಮ್ಯಾಪಿಂಗ್ ಮುನ್ನವೇ ಮೂವರನ್ನು ಕೊಂದಿದ್ದು ನಾನೇ: ತಪ್ಪೊಪ್ಪಿಕೊಂಡ ಆರೋಪಿಕಿಟಕಿ ರಾಡ್ ಮುರಿದು, ಬಟ್ಟೆಯನ್ನೇ ಹಗ್ಗ ಮಾಡಿ ಗೋಡೆ ಹಾರಿದ್ರು – ಕಲಬುರಗಿ ಜೈಲಿನಿಂದ ಸಿನಿಮಾ ಶೈಲಿ ಕೈದಿಗಳು ಎಸ್ಕೇಪ್ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಂದ ಇಂದು ಉಪದೇಶ- ಎಸ್‌ಪಿ ವಿರುದ್ಧ ಯೋಗಿ ಕಿಡಿNDA ಸೇರ್ಪಡೆಯಾಗದೇ ಮಹಿಳಾ ಮೀಸಲಾತಿ, ಡಿಲಿಮಿಟೇಷನ್‌ ಮಸೂದೆಗೆ ಪವಾರ್ ಬಣ ಬೆಂಬಲ!ಫಿಫಾ ವಿಶ್ವಕಪ್‌ 3ನೇ ಟ್ರೋಫಿ ಕನಸು ಭಗ್ನ – ಅಭಿಮಾನಿಗಳ ಆಕ್ರೋಶಕ್ಕೆ ಹೊತ್ತಿ ಉರಿದ ಫ್ರಾನ್ಸ್‌5 ನಿವೇಶನ, 4 ಫ್ಲಾಟ್‌, ಕಂತೆ ಕಂತೆ ನೋಟು, ಚಿನ್ನಾಭರಣ; 100 ಕೋಟಿ ಆಸ್ತಿ ಪತ್ತೆ – ಎಂಜಿನಿಯರ್‌ ಅರೆಸ್ಟ್‌