LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ

Advertisement
Advertisement

ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ  ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ  ಸೋಲಾಪುರ  ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನಲ್ಲಿ ನಡೆದಿದೆ. ಈ ಅಪಘಾತದಲ್ಲಿ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಢರಪುರ ಮೂಲದ 15 ಜನರು ಮಾಸ್ವಾಡ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆ ತಂಡುಲ್ವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಪಿಕಪ್‌ನಲ್ಲಿ ಇದ್ದವರು ಹೆಚ್ಚಿನವರು ಸಂಬಂಧಿಕರು ಮತ್ತು ನೆರೆಹೊರೆಯವರು ಎಂದು ತಿಳಿದುಬಂದಿದೆ. 

 

ಪ್ರಾಥಮಿಕ ಮಾಹಿತಿಯ ಪ್ರಕಾರ, 15 ಜನರನ್ನು ಹೊತ್ತೊಯ್ಯುತ್ತಿದ್ದ ಪಿಕ್-ಅಪ್ ವಾಹನವು ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಬದಿಯ ಜಮೀನಿಗೆ ನುಗ್ಗಿ ಬಾವಿಗೆ ಬಿದ್ದಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೋಲಾಪುರದ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ.

 

ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೊಷಿಸಿದ್ದಾರೆ.

ಸೋಲಾಪುರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆಶಿ ಸ್ಪಷ್ಟನೆಯಾವ ಆಣೆ ಪ್ರಮಾಣ, ಎಲ್ಲಿಗೆ ಕರೆದುಕೊಂಡು ಹೋಗ್ತಾರೆ – ಬಾಲಕೃಷ್ಣ ವಿರುದ್ಧ ಹರಿಹಾಯ್ದ ಹೆಚ್‌ಡಿಕೆಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ ಸೀತಾರಾಮನ್‌ಬೆಂಗಳೂರಲ್ಲಿ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ – ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರಬೆಂಗಳೂರಿನ ಮೂವರು ಯುವಕರು ಹೇಮಾವತಿ ನದಿಯಲ್ಲಿ ಮುಳುಗಿ ಸಾವುಸಂಪ್‌ಗೆ ಬಿದ್ದು ಮಗು ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್ತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿದ ಸಂಸದ ಶೆಟ್ಟರ್