LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

10 ನಿಮಿಷದಲ್ಲಿ ಹೀಗೆ ಮೋದಕ ತಯಾರಿಸಿ!

Advertisement
ಗಣೇಶನಿಗೆ ಪ್ರಿಯವಾದ ತಿನಿಸುಗಳಲ್ಲಿ ಮೋದಕವು ಒಂದು. ಸುಲಭವಾಗಿ ಮೋದಕವನ್ನು ಮಾಡಬಹುದು ಎಂಬುದು ಬಹುತೇಕರಿಗೆ ತಿಳಿದಿಲ್ಲ. ಬರೀ 10 ನಿಮಿಷದಲ್ಲಿ ಮೋದಕವನ್ನು ತಯಾರಿಸುವ ಬಗೆ ಇಲ್ಲಿದೆ.

ಮೊದಲಿಗೆ ಒಂದು ಬೌಲ್​ ತೆಗೆದುಕೊಂಡು ಅದಕ್ಕೆ ಒಂದು ಕಪ್​ ಮೈದಾ ಹಿಟ್ಟು, ಒಂದು ಕಪ್​ ಗೋದಿ ಹಿಟ್ಟು, ರುಚಿಗೆ ತಕ್ಕ ಉಪ್ಪು, ಸಕ್ಕರೆ ಸೇರಿಸಿ. ಬಳಿಕ 2 ಚಮಚ ತುಪ್ಪವನ್ನು ಬಿಸಿ ಮಾಡಿ ಅದಕ್ಕೆ ಸೇರಿಸಿ. ಬಳಿಕ ಚೆನ್ನಾಗಿ ಮಿಶ್ರಣ ಮಾಡಿ. ದನದ ತುಪ್ಪದ ಬದಲು ಎಣ್ಣೆಯನ್ನು ಬಳಸಬಹುದಾಗಿದೆ.

2 ರಿಂದ ಮೂರು ನಿಮಿಷ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಕೊಂಚ ನೀರು ಸೇರಿಸುತ್ತಾ ಉಂಡೆ ಕಟ್ಟಲು ಆಗುವಂತೆ ಮಿಶ್ರಣ ಮಾಡಬೇಕು. ಬರಿ ಗೋಧಿ ಹಿಟ್ಟಿನಲ್ಲೂ ಮೋದಕ ತಯಾರಿಸಬಹುದಾಗಿದೆ. ಒಂದು ವೇಳೆ ಹಿಟ್ಟು ಕೈಯಲ್ಲಿ ಅಂಟಿಕೊಂಡರೆ ಕೈಗೆ ತೆಂಗಿನ ಎಣ್ಣೆ ಸವರಿ ಸರಿಯಾಗಿ ಮಿಶ್ರಣ ಮಾಡಿ. ಬಳಿಕ 14 ರಿಂದ 15 ನಿಮಿಷ ಹಾಗೆಯೇ ಬಿಡಿ.

ಮತ್ತೊಂದು ಬಾಣಲೆ ತೆಗೆದುಕೊಂಡು ಹೂರ್ಣ ತಯಾರಿಸಬೇಕು. ಅದಕ್ಕಾಗಿ ಹದ ಬಿಸಿಯಲ್ಲಿರುವ ಬಾಣಲೆಗೆ ಒಂದೂವರೆ ಕಪ್​ ತೆಂಗಿನ ತುರಿ, ಒಂದು ಕಪ್​ ಚೆನ್ನಾಗಿ ಹುಡಿ ಮಾಡಿದ ಬೆಲ್ಲ ಸೇರಿಸಿ ಮಿಶ್ರಣ ಮಾಡಿ. ಬೆಂಕಿಯ ಬಿಸಿಗೆ ಬೆಲ್ಲ ಕರಗಲು ಪ್ರಾರಂಭವಾಗುತ್ತದೆ. ಬೆಲ್ಲ ಕರಗಿದ ಬಳಿಕ  ಬಾಣಲೆಯನ್ನು ಬೆಂಕಿಯಿಂದ ಕೆಳಗಿಳಿಸಿ. ಬೇಕಿದ್ದರೆ ಕೊಂಚ ಏಲಕ್ಕಿ, ಡ್ರೈ ಫ್ರುಟ್ಸ್, ತುಪ್ಪ ಸೇರಿಸಬಹುದು. ​

ಇಷ್ಟಾದ ಬಳಿಕ ಮಿಶ್ರಣ ಮಾಡಿದ ಹಿಟ್ಟನ್ನು ಕೊಂಚ ಮೈದಕ್ಕೆ ಅದ್ದಿ ಚಪಾತಿಯಂತೆ ಲಟ್ಟಿಸಬೇಕು. ಬೇಕಾದ ಗಾತ್ರಕ್ಕೆ ಹಿಟ್ಟನ್ನು ಲಟ್ಟಿಸಬಹುದು. ಬಳಿಕ ತಯಾರಿಸಿಟ್ಟ ಹೂರ್ಣವನ್ನು ಅದರ ಮಧ್ಯಕ್ಕೆ ಇಟ್ಟು ಕೈಯಲ್ಲೇ ತಿರುಗಿಸುತ್ತಾ ಸರಿಯಾದ ಆಕಾರಕ್ಕೆ ತರಬೇಕು. ಬಳಿಕ ಕುದಿಯುವ ಎಣ್ಣೆಗೆ ಅದನ್ನು ಬಿಡಬೇಕು. ಸರಿಯಾಗಿ ಬೆಂದ ಬಳಿಕ ಎಣ್ಣೆಯಿಂದ ಮೇಲೆತ್ತಬೇಕು. ಈವಾಗ ಮೋದಕ ರೆಡಿ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರ್ನಾಲ್ಕು ದಿನಗಳಿಂದ ಮಳೆ ಬರುತ್ತಿರುವುದರಿಂದ ಆಶಾಭಾವ ಮೂಡಿದೆ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೂಳಿಬೆಂಗಳೂರಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ದಾಳಿ – ಮಾರಕಾಸ್ತ್ರಗಳು ಪತ್ತೆಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ – ಹಾರಂಗಿ ಜಲಾಶಯಕ್ಕೆ 1,470 ಕ್ಯೂಸೆಕ್ ಒಳಹರಿವುರಾಜ್ಯದ ಹಲವೆಡೆ 2-3 ದಿನ ಮಳೆ ಮುನ್ಸೂಚನೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮಜೈಶ್‌ ಉಗ್ರರ ಜೊತೆ ನಂಟು; ಗುಜರಾತಲ್ಲಿ 8 ಮಂದಿ ಅರೆಸ್ಟ್‌ಪತಿಯ ಕೊಂದು ಬಾತ್ ರೂಂನಲ್ಲೇ ಹೂತಿದ್ದ ಪತ್ನಿಬಿಎಲ್‌ಒಗಳೇ ಒಂದು ಅರ್ಜಿಗೆ 50 ರೂಪಾಯಿ ಕೊಟ್ಟು ಕೆಲ ಕಾರ್ಯಕರ್ತರಿಂದ ಭರ್ತಿ ಮಾಡಿಸ್ತಿದ್ದಾರೆ: ಸಾ.ರಾ.ಮಹೇಶ್ ಆರೋಪಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲುSIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ – ವಿಎ ಸಾವು ಬದುಕಿನ ನಡುವೆ ಹೋರಾಟ