LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

10 ನಿಮಿಷದಲ್ಲಿ ಹೀಗೆ ಮೋದಕ ತಯಾರಿಸಿ!

ಗಣೇಶನಿಗೆ ಪ್ರಿಯವಾದ ತಿನಿಸುಗಳಲ್ಲಿ ಮೋದಕವು ಒಂದು. ಸುಲಭವಾಗಿ ಮೋದಕವನ್ನು ಮಾಡಬಹುದು ಎಂಬುದು ಬಹುತೇಕರಿಗೆ ತಿಳಿದಿಲ್ಲ. ಬರೀ 10 ನಿಮಿಷದಲ್ಲಿ ಮೋದಕವನ್ನು ತಯಾರಿಸುವ ಬಗೆ ಇಲ್ಲಿದೆ.

ಮೊದಲಿಗೆ ಒಂದು ಬೌಲ್​ ತೆಗೆದುಕೊಂಡು ಅದಕ್ಕೆ ಒಂದು ಕಪ್​ ಮೈದಾ ಹಿಟ್ಟು, ಒಂದು ಕಪ್​ ಗೋದಿ ಹಿಟ್ಟು, ರುಚಿಗೆ ತಕ್ಕ ಉಪ್ಪು, ಸಕ್ಕರೆ ಸೇರಿಸಿ. ಬಳಿಕ 2 ಚಮಚ ತುಪ್ಪವನ್ನು ಬಿಸಿ ಮಾಡಿ ಅದಕ್ಕೆ ಸೇರಿಸಿ. ಬಳಿಕ ಚೆನ್ನಾಗಿ ಮಿಶ್ರಣ ಮಾಡಿ. ದನದ ತುಪ್ಪದ ಬದಲು ಎಣ್ಣೆಯನ್ನು ಬಳಸಬಹುದಾಗಿದೆ.

2 ರಿಂದ ಮೂರು ನಿಮಿಷ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಕೊಂಚ ನೀರು ಸೇರಿಸುತ್ತಾ ಉಂಡೆ ಕಟ್ಟಲು ಆಗುವಂತೆ ಮಿಶ್ರಣ ಮಾಡಬೇಕು. ಬರಿ ಗೋಧಿ ಹಿಟ್ಟಿನಲ್ಲೂ ಮೋದಕ ತಯಾರಿಸಬಹುದಾಗಿದೆ. ಒಂದು ವೇಳೆ ಹಿಟ್ಟು ಕೈಯಲ್ಲಿ ಅಂಟಿಕೊಂಡರೆ ಕೈಗೆ ತೆಂಗಿನ ಎಣ್ಣೆ ಸವರಿ ಸರಿಯಾಗಿ ಮಿಶ್ರಣ ಮಾಡಿ. ಬಳಿಕ 14 ರಿಂದ 15 ನಿಮಿಷ ಹಾಗೆಯೇ ಬಿಡಿ.

ಮತ್ತೊಂದು ಬಾಣಲೆ ತೆಗೆದುಕೊಂಡು ಹೂರ್ಣ ತಯಾರಿಸಬೇಕು. ಅದಕ್ಕಾಗಿ ಹದ ಬಿಸಿಯಲ್ಲಿರುವ ಬಾಣಲೆಗೆ ಒಂದೂವರೆ ಕಪ್​ ತೆಂಗಿನ ತುರಿ, ಒಂದು ಕಪ್​ ಚೆನ್ನಾಗಿ ಹುಡಿ ಮಾಡಿದ ಬೆಲ್ಲ ಸೇರಿಸಿ ಮಿಶ್ರಣ ಮಾಡಿ. ಬೆಂಕಿಯ ಬಿಸಿಗೆ ಬೆಲ್ಲ ಕರಗಲು ಪ್ರಾರಂಭವಾಗುತ್ತದೆ. ಬೆಲ್ಲ ಕರಗಿದ ಬಳಿಕ  ಬಾಣಲೆಯನ್ನು ಬೆಂಕಿಯಿಂದ ಕೆಳಗಿಳಿಸಿ. ಬೇಕಿದ್ದರೆ ಕೊಂಚ ಏಲಕ್ಕಿ, ಡ್ರೈ ಫ್ರುಟ್ಸ್, ತುಪ್ಪ ಸೇರಿಸಬಹುದು. ​

ಇಷ್ಟಾದ ಬಳಿಕ ಮಿಶ್ರಣ ಮಾಡಿದ ಹಿಟ್ಟನ್ನು ಕೊಂಚ ಮೈದಕ್ಕೆ ಅದ್ದಿ ಚಪಾತಿಯಂತೆ ಲಟ್ಟಿಸಬೇಕು. ಬೇಕಾದ ಗಾತ್ರಕ್ಕೆ ಹಿಟ್ಟನ್ನು ಲಟ್ಟಿಸಬಹುದು. ಬಳಿಕ ತಯಾರಿಸಿಟ್ಟ ಹೂರ್ಣವನ್ನು ಅದರ ಮಧ್ಯಕ್ಕೆ ಇಟ್ಟು ಕೈಯಲ್ಲೇ ತಿರುಗಿಸುತ್ತಾ ಸರಿಯಾದ ಆಕಾರಕ್ಕೆ ತರಬೇಕು. ಬಳಿಕ ಕುದಿಯುವ ಎಣ್ಣೆಗೆ ಅದನ್ನು ಬಿಡಬೇಕು. ಸರಿಯಾಗಿ ಬೆಂದ ಬಳಿಕ ಎಣ್ಣೆಯಿಂದ ಮೇಲೆತ್ತಬೇಕು. ಈವಾಗ ಮೋದಕ ರೆಡಿ.
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಲಿಕೆ ಬಿಜೆಪಿ ಸದಸ್ಯರ ವಿರುದ್ಧ ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ದೂರುಪಾಲಿಕೆ ವಿರುದ್ಧ ಹೋರಾಟ ಮುಂದುವರಿಸಲು ವಿವಿಧ ಕನ್ನಡ ಸಂಘಟನೆಗಳ ನಿರ್ಧಾರಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವುಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ!ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ!ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರುಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆಡಿಕೆಶಿ ಮುಂದಿನ ಸಿಎಂ ಬ್ಯಾನರ್, ಕಾರ್ಯಕರ್ತರ ಅಭಿಮಾನ ತಡಿಯೋಕೆ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್