LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

Advertisement
Advertisement

ಕಲಬುರಗಿ: ಪೊಲೀಸ್ ಸಬ್ ಇನ್ಸಪೆಕ್ಟರ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ  ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ.

ಕಲಬುರಗಿಯ ಡಿ.ಸಿ.ಆರ್.ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಹೆರೂರ್ ಸಾವನ್ನಪ್ಪಿದ ದುರ್ದೈವಿ. 

2014ರ ಬ್ಯಾಚ್‌ನ ಪಿಎಸ್‌ಐ ಆಗಿದ್ದ ಮೃತ ಬಸವರಾಜ್ ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಡಿ.ಸಿ.ಆರ್.ಬಿ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ (ಜೂ.16) ತಡರಾತ್ರಿ ಅವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಪಿಎಸ್‌ಐ ಬಸವರಾಜ್ ಅವರಿಂದ ಕರೆ ಬರುತ್ತಿದ್ದಂತೆ ಆತಂಕಗೊಂಡ ಸ್ನೇಹಿತರು ತಕ್ಷಣವೇ ಅವರ ತಂದೆಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಗಾಬರಿಗೊಂಡ ತಂದೆ ತಕ್ಷಣವೇ ಮಗನ ರೂಮಿನ ಬಳಿ ಧಾವಿಸಿ, ಒಳಗಿನಿಂದ ಲಾಕ್ ಆಗಿದ್ದ ಬಾಗಿಲನ್ನು ಒಡೆದು ತೆರೆದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸವರಾಜ್ ಸೀರೆಯಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಭೀಕರ ಘಟನೆಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಕುರಿತು ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನಾನಂದ ಶ್ರೀ ಜಾಮೀನು ರದ್ದತಿ ಅರ್ಜಿ ಅದೇಶ ಜೂನ್ 30ಕ್ಕೆ ಮುಂದೂಡಿಕೆಅನುಮಾನ ಏನಿಲ್ಲ, ನಮ್ಮಪ್ಪ ಜೆಡಿಎಸ್‌ಗೆ ಮತ ಹಾಕಿದ್ದಾರೆ – ಪುತ್ರ ಹರೀಶ್‌ ಗೌಡ ವಿಶ್ವಾಸಕರ್ನಾಟಕ ಹೆಚ್ಚುವರಿ ಕಾವೇರಿ ನೀರನ್ನು ಮಾತ್ರ ಹರಿಸುತ್ತಿದೆ – ವಿಜಯ್‌ ಸರ್ಕಾರದ ಕ್ಯಾತೆಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ10 ಲಕ್ಷ ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ – ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆನೀಟ್ ಮರುಪರೀಕ್ಷೆಗೂ ಮುನ್ನ ಡೆತ್‌ನೋಟ್‌ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆಮೇಕೆದಾಟು ಹಾರ್ಟ್‌ ಆಫ್‌ ಡಿ.ಕೆ.ಶಿವಕುಮಾರ್‌ ಅಲ್ಲ, ಹಾರ್ಟ್‌ ಆಫ್‌ ದಕ್ಷಿಣ ಭಾರತ: ಸಿಎಂ ಖೇತ ಬಚಾವೂ ಅಭಿಯಾನ ಮತ್ತು ಆತ್ಮ ಯೋಜನೆಯಡಿಯಲ್ಲಿ ರೈತರ ತರಬೇತಿ ಕಾರ್ಯಕ್ರಮಲಕ್ಷ್ಮಣ್ ಸವದಿ "ಘರವಾಪಸಿ" ಬಿಜೆಪಿ ನಾಯಕರ ಗಳಿಂದಲೇ ವಿರೋಧವಾರ್ಡ್ ಸಂಖ್ಯೆ 4ರಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ; ಅನಿಲ್ ಬೆನಕೆ ಅವರಿಂದ ಮಾರ್ಗದರ್ಶನ