LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ಮೆರವಣಿಗೆಯಲ್ಲಿ ಗಲಾಟೆ, ಕಲ್ಲುತೂರಾಟ – 19 ಜನರ ವಿರುದ್ಧ ಎಫ್‌ಐಆರ್

Advertisement

ಯಾದಗಿರಿ: ಗಣೇಶನ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ, ಬಳಿಕ ಮಾರಾಮಾರಿಯಾಗಿರುವ ಘಟನೆ ಯಾದಗಿರಿ  ನಗರದ ದುರ್ಗಾದೇವಿ ಮಂದಿರದ ಬಳಿ ನಡೆದಿದೆ. ಈ ಸಂಬಂಧ ಇದೀಗ 19 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಗಣೇಶೋತ್ಸವ ಮೆರವಣಿಗೆ ವೇಳೆ ಒಂದು ಗುಂಪಿನ ಯುವಕನ ಮೇಲೆ ಬೈಕ್ ಹಾದುಹೋಗಿದೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿದೆ. ಬಳಿಕ `ನಮ್ಮ ಏರಿಯಾದಲ್ಲಿ ಗಣೇಶ ಮೂರ್ತಿಯನ್ನು ಹೇಗೆ ಪ್ರತಿಷ್ಠಾಪನೆ ಮಾಡ್ತೀರಾ ನೋಡ್ತೀವಿ, ನಾವು ಹೇಳಿದಂತೆಯೇ ನಡೆಯಬೇಕು’ ಎಂದು ಮತ್ತೊಂದು ಗುಂಪು ಬೆದರಿಕೆ ಹಾಕಿ, ಕಿರಿಕ್ ಮಾಡಿದೆ. 

ಮಾತು ತಾರಕಕ್ಕೇರಿ ಕಲ್ಲುತೂರಾಟ ಹಾಗೂ ದೊಣ್ಣೆಯಿಂದ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ 19 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸದ್ಯ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಯಾವುದೇ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆಗಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2,000 ರೂ. ಮೇಲ್ಪಟ್ಟ ಯುಪಿಐ ಪಾವತಿಗೆ 0.4% ಶುಲ್ಕ – ಅ.15 ರಿಂದ ಹೊಸ ನಿಯಮಬೆಟ್ಟದಲ್ಲಿ ಅಡಗಿದ್ದ `ಸುಡೋ ನಕ್ಸಲ್’ ಕನಕಲಬಂಡೆ ವೆಂಕಟೇಶ್ ಬಂಧನರೇಣುಕಾಸ್ವಾಮಿ ಕೇಸ್‌ – ಮಾಫಿ ಸಾಕ್ಷಿ ಪ್ರದೋಷ್‌ ವಿರುದ್ಧ ದೂರುವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PILಶಾಲಾ ಬ್ಯಾಗ್‌ಗಳಿಂದ 38 ಕೆಜಿ ಗಾಂಜಾ ಸೀಜ್‌; ಮೂವರು ಅಪ್ರಾಪ್ತರು ಸೇರಿ ಐವರು ವಶಕ್ಕೆಮೋದಿ ದೇಶದ ರಾಜಕೀಯ ಸಂಸ್ಕೃತಿ ಬದಲಿಸಿದ್ದಾರೆ, ಆದ್ರೆ ಕಾಂಗ್ರೆಸ್‌ ಒಡೆದಾಳುವ ನೀತಿ ಪಾಲಿಸುತ್ತಿದೆ: ನಡ್ಡಾ ನಿಗಿನಿಗಿಮಂಡ್ಯದಲ್ಲಿ ʻಮಾಯದಂಥ ಮಳೆʼ – ರಸ್ತೆಗಳು ಜಲಾವೃತವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗಿದ್ದು, ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್ ಆಗ್ತಿದೆ: ಪರಮೇಶ್ವರ್ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ಹೋಬಳಿಗೊಂದು ವಸತಿ ಶಾಲೆ ನಿರ್ಮಾಣಕ್ಕೆ 650 ಕೋಟಿ ಮೀಸಲು: ಮುನಿಯಪ್ಪ