LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಮೂರು ಬಾರಿ ಕರೆದು ಮಂತ್ರಿ ಮಾಡ್ತೀನಿ ಅಂದ್ರು, ಮಾಡಿಲ್ಲ: ಬಿ.ಆರ್.ಪಾಟೀಲ್ ಬೇಸರ

Advertisement
Advertisement

ಕಲಬುರಗಿ: ನನ್ನ ಸಚಿವ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ನಾಯಕರೇ ಅಡ್ಡಿಯಾಗಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ ಅಂತಾ ಆಳಂದ ಶಾಸಕ ಬಿ.ಆರ್.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ  ಮಾತನಾಡಿದ ಶಾಸಕ ಬಿ.ಆರ್.ಪಾಟೀಲ್, ಅದು ಯಾವ ಲೀಡರ್ ಅಂತಾ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಜಾರಿಕೊಳ್ಳಲು ನೆಪ ಮಾತ್ರಕ್ಕೆ ಈ ರೀತಿ ಹೇಳಿದ್ರಾ? ಸತ್ಯ ಹೇಳಿದ್ರಾ ಅದು ಸಹ ಗೊತ್ತಿಲ್ಲ ಎಂದು ತಿಳಿಸಿದರು. 

ನಾನು ಸುಮೋಟೊ ಮಂತ್ರಿ ಮಾಡಿ ಅಂತಾ ಎಲ್ಲೂ ಹೋಗಿಲ್ಲ. ಸಿದ್ದರಾಮಯ್ಯ ಅವರು ಚುನಾವಣೆ ಸಂದರ್ಭದಲ್ಲಿ, ‘ನನ್ನ ಗೆಳೆಯನನ್ನು ಆಯ್ಕೆ ಮಾಡಿ ಕಳುಹಿಸಿ.. ನಾನು ಸಚಿವನನ್ನಾಗಿ ಮಾಡಿ ಕಳುಹಿಸುತ್ತೇನೆ’ ಅಂತಾ ಜನತೆಗೆ ಹೇಳಿದ್ದರು. ನನಗೆ ಬೇಜಾರ್ ಆಗಿದ್ದು ಏನಂದ್ರೆ, ಮಾತು ಕೊಟ್ಟು ಮಾತು ತಪ್ಪಿದ್ರು ಸಿದ್ದರಾಮಯ್ಯ. ಮೂರು ಬಾರಿ ಕರೆದು ಮಂತ್ರಿ ಮಾಡುತ್ತೇನೆ ಅಂತಾ ಹೇಳಿದ್ರು. ಆದರೆ, ಮಾಡಿಲ್ಲ ಎಂದು ಪಾಟೀಲ್ ಅಸಮಾಧಾನ ಹೊರಹಾಕಿದರು.

ಸದ್ಯ 140 ಜನ ಶಾಸಕರು ಇದ್ದಾರೆ. ಅವರು ಕರೆದು ಮಾತಾನಾಡುವ ಸಂದರ್ಭವೇ ಇಲ್ಲ ಎಂದರು. ಇನ್ನು 2028 ರ ಚುನಾವಣೆ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿದ ಬಿ.ಆರ್.ಪಾಟೀಲ್, ಕಾದು ನೋಡಿ ಎಂದಷ್ಟೇ ಪ್ರತಿಕ್ರಿಯಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲಮಂಗಲ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ – ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನತಿಮ್ಮಾಪುರ್-ನಂಜಯ್ಯಮಠ ಆಡಿಯೋ ಬಗ್ಗೆ ಛಲವಾದಿ ದೂರು ಕೊಡಲಿ: ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಯುವಕರ ರಕ್ತ ಹೀರಿ ಬದುಕುತ್ತಿದೆ: ಛಲವಾದಿ ನಾರಾಯಣಸ್ವಾಮಿʻಕೆಲಸ ಮಾಡದಿದ್ರೆ, ಸಂಬಳ ಇಲ್ಲʼ – ಮುಷ್ಕರ ಹಿಂಪಡೆಯುವಂತೆ ವೈದ್ಯರಿಗೆ ಬಾಂಬೆ ಹೈಕೋರ್ಟ್‌ ಖಡಕ್ ಸೂಚನೆಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆಮುಳ್ಳಯ್ಯನಗಿರಿ ಬಳಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ – ಕೂದಲೆಳೆ ಅಂತರದಲ್ಲಿ ಪ್ರವಾಸಿಗ ಬಚಾವ್‌ನಾನು ಡಿಕೆಶಿ ಮನೆಮಗ, ನಾನೇ ಸಿಎಂ ಇದ್ದಂತೆ: ಶಿವಗಂಗಾ ಬಸವರಾಜ್ಕಾಂಗ್ರೆಸ್‌ನಿಂದ ಸಾಂವಿಧಾನಿಕ ಹುದ್ದೆ ಹೈಜಾಕ್‌- ಆ.14ಕ್ಕೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ: ಬಸವರಾಜ ಹೊರಟ್ಟಿಉಪಮುಖ್ಯಮಂತ್ರಿಗಳಾದಡಾ. ಜಿ. ಪರಮೇಶ್ವರ್ ಅವರ ಜನ್ಮದಿನದ ಅಂಗವಾಗಿ   ಸರ್ಕಾರಿ ವಸತಿ ಶಾಲೆಗಳಿಗೆ ಗೌತಮ ಬುದ್ಧ ಪ್ರತಿಮೆಗಳ ವಿತರಣೆಆರೋಪಿ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ; ಪ್ರಕರಣದ ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ