ಬೆಂಗಳೂರು: ಪುತ್ರ ಡಾ. ಯತೀಂದ್ರ ಅವರ ಸಂಪುಟ ಸೇರ್ಪಡೆಗೆ ಕೊನೆಗೂ ಸಿದ್ದರಾಮಯ್ಯ ಅವರು ಒಪ್ಪಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಯತ್ತ ತೆರಳಿದ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಪುತ್ರ ಸಂಪುಟ ಸೇರ್ಪಡೆಗೆ ಒಪ್ಪಿದ್ದಾರೆಂದು ತಿಳಿದುಬಂದಿದೆ.
ಮೊದಲು ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದಾಗ ರಾಜ್ಯಸಭೆ, ಪುತ್ರನಿಗೆ ಸಚಿವ ಸ್ಥಾನ ಎರಡೂ ಬೇಡ ಎಂದು ಸಿದ್ದರಾಮಯ್ಯ ತಿರಸ್ಕರಿಸಿದರು. ಬಳಿಕ ಸಚಿವ ಕೆ.ಜೆ ಜಾರ್ಜ್ ಸಿದ್ದರಾಮಯ್ಯ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ರನ ಸಂಪುಟ ಸೇರ್ಪಡೆಗೆ ಒಪ್ಪಿರುವ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣವನ್ನ ನಿರಾಕರಿಸಿದ್ದಾರೆ.



