LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಗಂಗೆ ಟೆಕ್ಕಿ ಮಿಸ್ಸಿಂಗ್ ಕೇಸ್‌: ಪ್ಲ್ಯಾನ್ ಮಾಡಿಯೇ ಅದ್ವೈತ್ ನಾಪತ್ತೆ ?

Advertisement
Advertisement

ಬೆಂಗಳೂರು: ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿರುವ ಟೆಕ್ಕಿ  ಅದ್ವೈತ್ ಉಪಾಧ್ಯಾಯ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ಅದ್ವೈತ್ ಆತ್ಮಹತ್ಯೆ  ಮಾಡಿಕೊಂಡಿರುವಂತೆ ಬಿಂಬಿಸಿ ಉದ್ದೇಶಪೂರ್ವಕವಾಗಿ ನಾಪತ್ತೆಯಾಗಿದ್ದಾನಾ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ.

ಕಳೆದ ಮೂರು ದಿನಗಳಿಂದ ಪೊಲೀಸರ ಐದು ತಂಡಗಳು ಶಿವಗಂಗೆ ಬೆಟ್ಟವನ್ನು ಇಂಚಿಂಚಾಗಿ ಪರಿಶೀಲನೆ ನಡೆಸಿವೆ. ಬೆಟ್ಟದ ಹಲವು ಭಾಗಗಳಲ್ಲಿ ಶೋಧ ನಡೆಸಿದರೂ, ಇದುವರೆಗೂ ಅದ್ವೈತ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅಥವಾ ಆತನಿಗೆ ಏನಾದರೂ ಆಗಿರುವುದಕ್ಕೆ ಒಂದೇ ಒಂದು ಪ್ರಮುಖ ಸುಳಿವು ಕೂಡ ಸಿಕ್ಕಿಲ್ಲ.

ಅದ್ವೈತ್ ಕೊನೆಯದಾಗಿ ಮದುವೆಯಾಗಬೇಕಿದ್ದ ಯುವತಿಗೆ ಶಿವಗಂಗೆ ಬೆಟ್ಟದಿಂದ ಫೋಟೋ ಕಳುಹಿಸಿದ್ದಾನೆ. ಆ ಬಳಿಕ ಯಾವುದೇ ಫೋನ್ ಕಾಲ್ ಅಥವಾ ಮೆಸೇಜ್ ಮಾಡಿಲ್ಲ. ಹೀಗಾಗಿ ಆತ ಉದ್ದೇಶಪೂರ್ವಕವಾಗಿಯೇ ಮೊಬೈಲ್ ಅನ್ನು ಬೆಟ್ಟದಲ್ಲಿ ಬಿಟ್ಟು ಹೋಗಿದ್ದಾನಾ ಎಂಬ ಅನುಮಾನವೂ ಪೊಲೀಸರಿಗೆ ಬಂದಿದೆ. 

ಇದಕ್ಕೂ ಮುನ್ನ ಅದ್ವೈತ್ ಮನೆಯ ಲ್ಯಾಪ್‌ಟಾಪ್‌ನಲ್ಲಿ ಶಿವಗಂಗೆ ಬೆಟ್ಟ ಹಾಗೂ ಶಾಂತಲಾ ಡ್ರಾಪ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ಸರ್ಚ್ ಮಾಡಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಜೊತೆಗೆ, ChatGPTಯಲ್ಲಿ ಮಾಡಿದ್ದ ಕೆಲವು ಸರ್ಚ್ ಹಿಸ್ಟರಿಯನ್ನು ಹಾಗೆಯೇ ಬಿಟ್ಟಿರುವುದು ಕೂಡ ತನಿಖಾಧಿಕಾರಿಗಳಿಗೆ ಅನುಮಾನ ಮೂಡಿಸಿದೆ.

ಅದ್ವೈತ್ ಟೆಕ್ಕಿಯಾಗಿದ್ದು, ತಾಂತ್ರಿಕವಾಗಿ ಸಾಕಷ್ಟು ಪರಿಣತಿ ಹೊಂದಿದ್ದ ಎನ್ನಲಾಗಿದೆ. ಹೀಗಾಗಿ ತನ್ನ ಮೊಬೈಲ್ ಸೇರಿದಂತೆ ಇತರ ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ಬಿಟ್ಟು ಹೋಗುವ ರೀತಿಯಲ್ಲಿ ಯಾವುದಾದರೂ ಪ್ಲ್ಯಾನ್ ಮಾಡಿದ್ದಾನಾ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಅದ್ವೈತ್‌ನ ವೈಯಕ್ತಿಕ ಹಿನ್ನೆಲೆಯನ್ನೂ ಪೊಲೀಸರು ಪರಿಶೀಲಿಸಿದ್ದು, ಹಲವು ಯುವತಿಯರೊಂದಿಗೆ ಆತ ಸಲುಗೆಯಿಂದ ಇದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. 

ಒಂದು ವೇಳೆ ಅದ್ವೈತ್ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮೂರು ದಿನಗಳ ಕಾಲ ಬೆಟ್ಟದಲ್ಲಿ ಶೋಧ ನಡೆಸಿದರೂ ಮೃತದೇಹದ ಯಾವುದೇ ಸುಳಿವು ಸಿಗದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹೀಗಾಗಿ ಆತ ಮೊದಲೇ ಪ್ಲ್ಯಾನ್ ಮಾಡಿಕೊಂಡು ನಾಪತ್ತೆಯಾಗಿದ್ದಾನಾ ಎಂಬ ಅನುಮಾನ ಮತ್ತಷ್ಟು ಬಲವಾಗಿದೆ.

ಸದ್ಯ ಪೊಲೀಸರು ಅದ್ವೈತ್ ನಾಪತ್ತೆಯಾಗಿರುವ ಹಿಂದಿನ ನಿಜವಾದ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮಹತ್ವದ ಸಾಕ್ಷ್ಯಗಳು ಸಿಕ್ಕರೆ ಮುಂದಿನ ಒಂದೆರಡು ದಿನಗಳಲ್ಲಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳ ತನಿಖೆಯಿಂದ ತಿಳಿದುಬಂದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ – ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ಶಿವಗಂಗೆ ಟೆಕ್ಕಿ ಮಿಸ್ಸಿಂಗ್ ಕೇಸ್‌: ಪ್ಲ್ಯಾನ್ ಮಾಡಿಯೇ ಅದ್ವೈತ್ ನಾಪತ್ತೆ ?ತಮಿಳುನಾಡಿಗೆ ನೀರು ಬಿಟ್ರೆ ನಾನೇ ಹೋರಾಟ ಮಾಡ್ತೀನಿ: ಗಣಿಗ ರವಿಕುಮಾರ್ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್‌ ನೀಡಿದ ದೂರಿನಲ್ಲೇನಿದೆ?ಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿಡಿಕೆಶಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆಯತೀಂದ್ರಗೆ ಆರೋಗ್ಯ ಇಲಾಖೆ? – ವಕ್ಫ್ ಖಾತೆಗೆ ಖಾದರ್‌ ಬೇಡಿಕೆವಾಟಾಳ್ ಕರೆ ನೀಡಿದ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ