LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

Advertisement

ಬೆಂಗಳೂರು: ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಬೀದಿ ಬದಿ ವ್ಯಾಪಾರಿಗಳು , ತೆರವು ಕಾರ್ಯ ನಿಲ್ಲಿಸುವಂತೆ ಒತ್ತಾಯಿಸಿ ಇಂದು ಬಂದ್‌ಗೆ ಕರೆ ಕೊಟ್ಟಿದ್ದಾರೆ. ವ್ಯಾಪಾರ ವಹಿವಾಟು ಸ್ತಬ್ಧಗೊಳಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

ಫುಟ್‌ಪಾತ್ ಒತ್ತುವರಿ ತೆರವಿನ ವಿರುದ್ಧ ಸಿಡಿದೆದ್ದಿರೋ ಬೀದಿಬದಿ ವ್ಯಾಪಾರಿಗಳು, ಕೂಡಲೇ ಸರ್ಕಾರ ಆದೇಶ ಹಿಂಪಡೆದು, ತೆರವು ಕಾರ್ಯ ನಿಲ್ಲಿಸುವಂತೆ ಒತ್ತಾಯಿಸಿ ಇಂದು ಬೃಹತ್ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ. ಹೀಗಾಗಿ ಇಂದು ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. 

ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಜಿಬಿಎ (GBA) ಕೈಗೊಂಡಿರುವ ಕ್ಲೀನ್ ಫುಟ್‌ಪಾತ್ ಕಾರ್ಯಾಚರಣೆ ಬೀದಿ ಬದಿ ವ್ಯಾಪಾರಿಗಳ ನಿದ್ದೆಗೆಡಿಸಿದೆ. ಜೀವನೋಪಾಯಕ್ಕೆ ಕಾರ್ಯಾಚರಣೆ ತೊಂದರೆ ಎಂಬ ಕಾರಣಕ್ಕೆ ಜಿಬಿಎ ವಿರುದ್ಧ ಸಿಡಿದೆದ್ದಿರುವ ವ್ಯಾಪಾರಿಗಳು ಇಂದು ಹೋರಾಟದ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ತಯಾರಿ ಮಾಡಿಕೊಂಡಿವೆ. ಇಂದು ತಮ್ಮ ವ್ಯಾಪಾರ ವಹಿವಾಟುಗಳನ್ನ ಬಂದ್ ಮಾಡಲು ನಿರ್ಧಾರ ಮಾಡಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಕ್ಕೆ ಮುಂದಾಗಿದ್ದಾರೆ. 

ನಗರದ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್ ಮಾರ್ಕೆಟ್, ಸಾರಕ್ಕಿ ಮಾರ್ಕೆಟ್, ಜಯನಗರ ಮಾರ್ಕೆಟ್, ಗಾಂಧಿ ಬಜಾರ್, ಬನಶಂಕರಿ, ಮಲ್ಲೇಶ್ವರ, ಮಹದೇವಪುರ, ಆರ್ ಆರ್ ನಗರ ಸೇರಿದಂತೆ ಹಲವು ಕಡೆ ಬೆಳಗ್ಗೆಯಿಂದಲೇ ವ್ಯಾಪಾರಿಗಳು ತಮ್ಮ ವ್ಯಾಪಾರ ನಿಲ್ಲಿಸಲು ನಿರ್ಧರಿಸಿದ್ದಾರೆ. 

6 ಸಂಘಟನೆಗಳು ಒಟ್ಟಾಗಿ ಕರೆಕೊಟ್ಟಿರುವ ಪ್ರತಿಭಟನೆ ಸಂಬಂಧ ಮಂಗಳವಾರದಿಂದಲೇ ಸಂಘಟನಾಕಾರರು ನಗರದ ಬೀದಿ ಬದಿ ವ್ಯಾಪಾರಿಗಳನ್ನ ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದು, ಇಂದು ಬೀದಿ ಬದಿಯಲ್ಲಿ ಸಿಗುವ ಅಗತ್ಯ ವಸ್ತುಗಳ ಖರೀದಿ ಮಾಡುವವರಿಗೆ ಕೊಂಚ ಸಮಸ್ಯೆಯಾಗುವ ಸಾಧ್ಯತೆ ಇದೆ. 

ಬೀದಿ ಬದಿ ವ್ಯಾಪಾರಿಗಳ ಬೇಡಿಕೆ ಏನು?
-ತೆರವು ಮಾಡಿಸಿದ ಸ್ಥಳದಲ್ಲಿ ವ್ಯಾಪಾರ ಮಾಡಲು ಬಿಡಬೇಕು
-ತಾತ್ಕಾಲಿಕವಾಗಿ ರಸ್ತೆಬದಿಯಲ್ಲಿ ವ್ಯಾಪಾರ ಮಾಡಲು ಬಿಡಬೇಕು
-ಅಂತಿಮ ತೀರ್ಮಾನ ಪಟ್ಟಣ ವ್ಯಾಪಾರ ಸಮಿತಿ ತೆಗೆದುಕೊಳ್ಳಬೇಕು
-ಜಪ್ತಿ ಮಾಡಿದ ಎಲ್ಲಾ ಸಾಮಗ್ರಿಗಳನ್ನು ಹಿಂತಿರುಗಿಸಬೇಕು
-ಬೀದಿ ವ್ಯಾಪಾರಿಗಳ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರಬೇಕು
-ಸಮಗ್ರ ಸಮೀಕ್ಷೆ ನಡೆಸಿ ಎಲ್ಲರಿಗೂ ಗುರುತಿನ ಚೀಟಿ ನೀಡಬೇಕು
-ಹೊಸ ನಗರ ಪಾಲಿಕೆಗಳಲ್ಲಿ ಟೌನ್ ವೆಂಡಿಂಗ್ ಸಮಿತಿ ರಚಿಸಬೇಕು
-ವ್ಯಾಪಾರಿಗಳ ನೈಜ ಪ್ರತಿನಿಧಿತ್ವವನ್ನು ಖಚಿತಪಡಿಸಬೇಕು
-ನಗರಾದ್ಯಂತ ಪಾದಚಾರಿ ಮಾರ್ಗಗಳನ್ನು ಅಗಲ ಮಾಡಬೇಕು
-ನಿಜವಾದ ಒತ್ತುವರಿದಾರರ ಮೇಲೆ ಕ್ರಮ ತೆಗೆದುಕೊಳ್ಳಿ
-ಅಕ್ರಮ ವಾಹನ ನಿಲುಗಡೆ, ಖಾಸಗಿ ತೋಟಗಳು, ಟ್ರಾನ್ಸ್‌ಫಾರ್ಮರ್‌ಗಳು, ಅಂಗಡಿ ಮಾಲೀಕರ ಪಾದಚಾರಿ ಮಾರ್ಗ ಅಕ್ರಮ ಬಳಕೆ ನಿಲ್ಲಿಸಬೇಕು.

ಇತ್ತ 6 ಸಂಘಟನೆಗಳು ಒಟ್ಟಾಗಿ ಜಿಬಿಎ ವಿರುದ್ಧ ಸಮರ ಸಾರಿದರೆ ಕೆಲ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲ ಕೊಟ್ಟಿಲ್ಲ. ಇಂದಿನ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ ಎಂದು ಬಹಿರಂಗ ಘೋಷಣೆ ಮಾಡಿರುವ ಸಂಘಟಕರು, ಎಂದಿನಂತೆ ತಮ್ಮ ವ್ಯಾಪಾರ ವಹಿವಾಟುಗಳನ್ನ ಮುಂದುವರೆಸುವುದಾಗಿ ತಿಳಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
E20 ಪೆಟ್ರೋಲ್‌ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ – ನಿತಿನ್ ಗಡ್ಕರಿ ಸವಾಲುವೈದ್ಯರ ಮೇಲೆ ಹಲ್ಲೆ – ಶಿವಸೇನೆ ಕಾರ್ಪೊರೇಟರ್ ಸೇರಿ ಆರು ಮಂದಿ ವಿರುದ್ಧ FIR, ಮೂವರ ಬಂಧನ11 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಬಂಗಾಳ ಪೊಲೀಸರ ಎನ್‌ಕೌಂಟರ್‌ಗೆ ಆರೋಪಿ ಬಲಿಸಿ.ಟಿ. ರವಿ ಮೊದಲು ವಾಯ್ಸ್ ಸ್ಯಾಂಪಲ್ ಕೊಟ್ಟು ಆಮೇಲೆ ಮಾತನಾಡಲಿ: ಪ್ರಿಯಾಂಕ್ ತಿರುಗೇಟುವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಪೋಷಕರಿಂದ ವಾರ್ಡನ್‌ಗೆ ಥಳಿತಮದ್ವೆಯಾದ ಐದೇ ತಿಂಗಳಿಗೆ ಹೆಲ್ಮೆಟ್‌ನಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಪರಿಶೀಲನೆ; ಕ್ರಮದ ಭರವಸೆ ನೀಡಿದ ಪ್ರಿಯಾಂಕ್ ಖರ್ಗೆಉಗ್ರ ಸಂಘಟನೆಗಳ ಜೊತೆ ನಂಟು – ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿನಡೆದುಕೊಂಡು ಹೋಗುತ್ತಿದ್ದಾಗ ಲಾರಿ ಡಿಕ್ಕಿ – ವಿದ್ಯಾರ್ಥಿನಿ ಗ್ರೇಟ್ ಎಸ್ಕೇಪ್ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ