LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ತವ್ಯ ಲೋಪದ ಹಿನ್ನೆಲೆ ಅಮಾನತು – ಜೈಲರ್ ಆತ್ಮಹತ್ಯೆ

ಧಾರವಾಡ: ಇಲ್ಲಿನ ಕೇಂದ್ರ ಕಾರಾಗೃಹದ ಜೈಲರ್‌  ಸಿದ್ದರಾಮಪ್ಪ ವಡ್ಡರ (37) ಅವರು ತಮ್ಮ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಅವರನ್ನು ಅಮಾನತ್ತು ಮಾಡಿ, ಆಡಳಿತಾತ್ಮಕ ಕಾರಣದಿಂದ ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಮಾಡಿದರೂ ಅವರು ಮಾತ್ರ ಮೈಸೂರು ಕಾರಾಗೃಹಕ್ಕೆ ಹೋಗಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಮಾನಸಿಕವಾಗಿ ಜರ್ಜರಿತರಾಗಿದ್ದ ಸಿದ್ದರಾಮಪ್ಪ ಅವರು ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿಯ ವಸತಿಗೃಹದಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮನೆಯವರು ಕರೆ ಮಾಡಿದಾಗ ಸಿದ್ದರಾಮಪ್ಪ ಫೋನ್ ರಿಸಿವ್ ಮಾಡಿಲ್ಲ. ಪಕ್ಕದ ಮನೆಯವರು ಬಂದು ನೋಡಿದಾಗ ನೇಣು ಹಾಕಿಕೊಂಡಿದ್ದು ಗೊತ್ತಾಗಿದೆ. ತಕ್ಷಣ ಅವರ ಕುಟುಂಬಸ್ಥರಿಗೆ ಮಾಹಿತಿ ಮುಟ್ಟಿಸಿದ್ದರು.

ಜೈಲಿಗೆ ಹಾಕುತ್ತಾರೆ ಎಂದು ಡಿಜಿಪಿ ಅವರು ಸಿದ್ದರಾಮಪ್ಪ ಅವರಿಗೆ ಹೆದರಿಸಿದ್ದರಂತೆ. ಇದರಿಂದ ಮಾನಸಿಕವಾಗಿ ನೊಂದ ಸಿದ್ದರಾಮಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸ್ಥಳಕ್ಕೆ ಸುಕೊ ಟೀಂ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಅಲ್ಲದೇ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್‌ ಭೇಟಿ ನೀಡಿ, ಮನೆಯವರು ಯಾವ ರೀತಿ ದೂರು ನೀಡುತ್ತಾರೋ ಅದರ ಆಧಾರದ ಮೇಲೆ ತನಿಖೆ ನಡೆಸುತ್ತೇವೆ ಎಂದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದೋಕುಳಿ – ಗ್ಯಾಂಗ್‌ವಾರ್‌ಗೆ ರೌಡಿಶೀಟರ್ ಬರ್ಬರ ಹತ್ಯೆಇಂದಿನಿಂದ ಧರ್ಮಸ್ಥಳಕ್ಕೆ ಹೊಸ ಪ್ಯಾಕೇಜ್ ಪರಿಚಯಿಸಿದ KSTDCರೈತರ ವಿರೋಧದ ನಡುವೆಯೂ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ: ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ಹೆಚ್‌ಡಿಕೆ ಆಕ್ರೋಶಮಗನ ನೆನೆದು ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಜಿಟಿ ದೇವೇಗೌಡಶಿಕ್ಷಕನ ಋಣ ತೀರಿಸಿದ ಶಿಷ್ಯ: ಶುಲ್ಕ ಕಟ್ಟಿದ ಗುರುವಿಗೆ ನಿವೃತ್ತಿ ದಿನವೇ ಕಾರು ಉಡುಗೊರೆಪರಪ್ಪನ ಅಗ್ರಹಾರ ಜೈಲಿನಿಂದ ಆಸ್ಪತ್ರೆಗೆ ಸಾಗಿಸುವಾಗ ಶಂಕಿತ ಉಗ್ರ ಸಾವುಭಾರತದ ಹಡಗು ಮೇಲೆ ದಾಳಿ ನಡೆಸಿದ್ದು ಯಾರು? – ಇರಾನ್‌ ವಿರುದ್ಧ ಟ್ರಂಪ್‌ ಕೆಂಡಾಮಂಡಲಕರ್ತವ್ಯ ಲೋಪದ ಹಿನ್ನೆಲೆ ಅಮಾನತು – ಜೈಲರ್ ಆತ್ಮಹತ್ಯೆ