LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟೈರ್ ಬ್ಲಾಸ್ಟ್, ಕಾರಿನ ಮೇಲೆ ಟ್ರಕ್‌ ಪಲ್ಟಿ – ತಪ್ಪಿದ ಭಾರೀ ಅನಾಹುತ

Advertisement
Advertisement
Advertisement

ಬಾಗಲಕೋಟೆ: ಚಲಿಸುತ್ತಿದ್ದಾಗ ಟೈರ್ ದಿಢೀರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್‌ ಸರ್ವಿಸ್ ರಸ್ತೆಗೆ ನುಗ್ಗಿ ಕಾರಿನ ಮೇಲೆ ಪಲ್ಟಿಯಾದ ಘಟನೆ ಇಳಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯ ನವಗ್ರಹ ಡಾಬಾ ಬಳಿ ನಡೆದಿದೆ.

ಆಗಸ್ಟ್ 29ರ ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಕೊಪ್ಪಳದ ಕುಷ್ಟಗಿ ಮಾರ್ಗವಾಗಿ ಹೊರಟಿದ್ದ ಗುಜರಾತ್ ಮೂಲದ ಲಾರಿಯ ಟೈರ್ ಬ್ಲಾಸ್ಟ್ ಆಗಿದೆ.

ಪರಿಣಾಮ ನಿಯಂತ್ರಣ ಕಳೆದುಕೊಂಡ ಟ್ರಕ್‌ ಸರ್ವಿಸ್ ರಸ್ತೆಯಲ್ಲಿದ್ದ ಹನಮಸಾಗರ ಪಟ್ಟಣದ ಕಾರಿನ ಮೇಲೆ ಉರುಳಿಬಿದ್ದಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟ್ರಕ್‌ ಪಲ್ಟಿಯಾದ ರಭಸಕ್ಕೆ ಕಾರು ಹಾಗೂ ಲಾರಿ ಎರಡರ ಡೀಸೆಲ್ ಟ್ಯಾಂಕ್ ಒಡೆದು ತೈಲ ಸೋರಿಕೆಯಾಗತೊಡಗಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಸ್ತೆಯ ಮೇಲೆ ನೀರು ಸಿಂಪಡಿಸಿ ಯಾವುದೇ ಬೆಂಕಿ ದುರಂತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡರು.

ಬಳಿಕ ಮುಂಜಾನೆ ಕ್ರೇನ್ ಸಹಾಯದಿಂದ ಕಾರಿನ ಮೇಲೆ ಬಿದ್ದಿದ್ದ ಟ್ರಕ್‌ ತೆರವುಗೊಳಿಸಲಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೈರ್ ಬ್ಲಾಸ್ಟ್, ಕಾರಿನ ಮೇಲೆ ಟ್ರಕ್‌ ಪಲ್ಟಿ – ತಪ್ಪಿದ ಭಾರೀ ಅನಾಹುತಈಗ ಚುನಾವಣೆ ಎದುರಿಸಲು ಟನ್‌ಗಟ್ಟಲೆ ಹಣ ಬೇಕು: ಸಿದ್ದರಾಮಯ್ಯಕ್ರಿಕೆಟ್ ಅಕಾಡೆಮಿಯಲ್ಲಿ ಪಿಚ್ ರೋಲರ್ ಹರಿದು 8 ವರ್ಷದ ಬಾಲಕ ದುರ್ಮರಣಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನKPSC ಬಗ್ಗೆ ಸಾರ್ವಜನಿಕರಿಗೆ ಅಸಹ್ಯಕರ ಭಾವನೆ ಮೂಡಿದೆ: ಹೆಚ್‌ಡಿಕೆಪ್ರಮೋಷನ್ ನೀಡುವುದಾಗಿ 50 ಸಾವಿರ ರೂ. ಲಂಚ – ಸೆಲ್ಫಿ ವೀಡಿಯೋ ಮಾಡಿಟ್ಟು ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆಜೈಲಿನೊಳಗೆ ಕೈದಿಗಳ ನಡುವೆ ಮಾರಾಮಾರಿ; ಜಗಳ ಬಿಡಿಸಲು ಹೋದ ಸಿಬ್ಬಂದಿ ಮೇಲೆಯೇ ಹಲ್ಲೆಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‌ನನ್ನು ಕೆಪಿಎಸ್‌ಸಿಗೆ ನೇಮಕ ಮಾಡಿದ್ದು ಬಿಜೆಪಿ: ಬಿಕೆ ಹರಿಪ್ರಸಾದ್ಸರ್ವರ್ ಡೌನ್ – ಪಡಿತರ ಸಿಗದೆ ಬೆಳಗಾವಿ ಜಿಲ್ಲೆಯಾದ್ಯಂತ ಕಾರ್ಡುದಾರರ ಪರದಾಟಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು, ಯುವಕನ ಸ್ಥಿತಿ ಗಂಭೀರ