LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಂದೇ ಮಾತರಂ, ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ – ಪ್ರಾಂಶುಪಾಲರ ವಿರುದ್ಧ FIR

Advertisement
Advertisement
Advertisement

ಬೀದರ್: ವಂದೇ ಮಾತರಂ ಹಾಗೂ ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಕ್ಕೆ ಪ್ರಾಂಶುಪಾಲರ ವಿರುದ್ಧ FIR ದಾಖಲಾಗಿದೆ.

ಬೀದರ್‌ ಜಿಲ್ಲೆಯ ಚಿಟಗುಪ್ಪ ಪಟ್ಟಣದಲ್ಲಿರುವ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ಆ.15ರಂದು ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಘಟನೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಹಕೀಮ್ ಎಂಬುವವರ ವಿರುದ್ಧ ವಿದ್ಯಾರ್ಥಿಯ ತಂದೆ ಹಿರೋಬಾ ಗೌಳಿ ದೂರು ನೀಡಿದ್ದಾರೆ. ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. 

ಸ್ವಾತಂತ್ರ್ಯೋತ್ಸವ ದಿನದಂದು ಧ್ವಜಾರೋಹಣ ಬಳಿಕ ಪಿಯುಸಿ ವಿದ್ಯಾರ್ಥಿ ಸಾಗರ್ ಗೌಳಿ ಎಂಬಾತನಿಂದ ವಂದೇ ಮಾತರಂ, ಭಾರತ್‌ ಮಾತಾಕಿ ಜೈ’ ಘೋಷಣೆ‌ ಕೂಗಿದ್ದ. ಈ ವೇಳೆ ಪ್ರಾಂಶುಪಾಲರು ಒಂದು ಧಾರ್ಮಿಕ ಸಮುದಾಯಕ್ಕೆ ಸೇರಿದ ಘೋಷಣೆ ಆಗಿದ್ದರಿಂದ ಇನ್ನೊಮ್ಮೆ ಕೂಗಬೇಡಿ, ಈ ತರಹ ನಮ್ಮ‌ ಕಾಲೇಜಿನಲ್ಲಿ ನಡೆಯುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಕಾಲೇಜಿನಲ್ಲಿ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು ಒಟ್ಟೊಟ್ಟಿಗೆ ವಿದ್ಯಾಭ್ಯಾಸ ಮಾಡುತ್ತಿದ್ದು, ಪ್ರಾಂಶುಪಾಲರು ಹಿಂದೂ-ಮುಸ್ಲಿಂ ಅಂತ ತಾರತಮ್ಯ ಮಾಡುತ್ತಿದ್ದಾರೆ. ಈ ಮೂಲಕ ವಿವಿಧ ಸಮುದಾಯಗಳ ವಿದ್ಯಾರ್ಥಿಗಳಲ್ಲಿ ವೈಮನಸ್ಸು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಖಂಡಿಸಿ ಕಾಲೇಜು ಮುಂದೆ ಪ್ರತಿಭಟನೆ ನಡೆಸಿ ಪ್ರಾಂಶುಪಾಲರಿಗೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ತರಾಟೆ ತೆಗೆದುಕೊಂಡಿದ್ದಾರೆ

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿಂಡಲಗಾ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು: ಹಣಕ್ಕಾಗಿ ಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯ ಬೆತ್ತಲೆ ವಿಡಿಯೋ ಕಾಲ್ಹೊಲದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರುಹೊಲದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರುಸಿಖ್ ವಿರೋಧಿ ದಂಗೆ ಕೇಸ್‌ ಅಪರಾಧಿ, ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್‌ ಸಂಸದ ಸಜ್ಜನ್ ಕುಮಾರ್ ನಿಧನಸಿಖ್ ವಿರೋಧಿ ದಂಗೆ ಕೇಸ್‌ ಅಪರಾಧಿ, ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್‌ ಸಂಸದ ಸಜ್ಜನ್ ಕುಮಾರ್ ನಿಧನವಂದೇ ಮಾತರಂನ ಎರಡು ಚರಣ ಹಾಡುವ ನಿರ್ಧಾರ ದೇಶ ವಿರೋಧಿ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿಬ್ಯಾಂಕ್‌ ಎದುರೇ ಗುಂಡಿಕ್ಕಿ ಪತ್ನಿ ಕೊಂದ ಲಕ್ನೋ SBI ಉದ್ಯೋಗಿ – ಮನೆಯಲ್ಲಿ ಸಹೋದರಿ ಕೊಂದು ತಾನೂ ಆತ್ಮಹತ್ಯೆಅಡಿಕೆ ತೋಟಕ್ಕೆ ನುಗ್ಗಿದ ಬಸ್‌ – ಓರ್ವ ಸಾವು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್‌ – ತನಿಖೆಗೆ ಸುಪ್ರೀಂನಿಂದ ಉನ್ನತ ಮಟ್ಟದ ಸಮಿತಿ ರಚನೆವಂದೇ ಮಾತರಂ, ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ – ಪ್ರಾಂಶುಪಾಲರ ವಿರುದ್ಧ FIR