LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತಕ್ಕಾಗಿ ಬಗೆಬಗೆಯ ನಾಟಕ – ರಾಯರೆಡ್ಡಿ ವಜಾಕ್ಕೆ ಭರತ್‌ ಶೆಟ್ಟಿ ಆಗ್ರಹ

Advertisement
Advertisement
Advertisement

ಮಂಗಳೂರು: ಇಸ್ಲಾಂ ಧರ್ಮ ಶ್ರೇಷ್ಠ ಮತ್ತು ಮಠ-ಮಂದಿರಗಳಿಗೆ ಹೋಗಬಾರದು ಎಂಬ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಹೊಟ್ಟೆಪಾಡಿಗಾಗಿ ಬಗೆಬಗೆಯ ವೇಷ ಎಂಬ ಮಾತು ಕಾಂಗ್ರೆಸ್ ನಾಯಕರಿಗೆ  ಸರಿಯಾಗಿ ಹೊಂದುತ್ತದೆ. ಕೇವಲ ಮತಕ್ಕಾಗಿ ಇವರು ಏನೆಲ್ಲಾ ನಾಟಕ ಮಾಡುತ್ತಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಶಿಕ್ಷಣದ ಸುಧಾರಣೆ ಬಗ್ಗೆ ಗಮನಹರಿಸಬೇಕಾದ ಸಚಿವರು, ವೋಟ್ ಬ್ಯಾಂಕ್‌ಗಾಗಿ ಸ್ವಧರ್ಮಕ್ಕಿಂತ ಪರಧರ್ಮವೇ ಶ್ರೇಷ್ಠ ಎಂದು ಹೇಳಿ ಎಲ್ಲ ಧರ್ಮಗಳಿಗೂ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.

ನಿಮಗೆ ಸಂಸ್ಕಾರ, ಸಂಸ್ಕೃತಿ ನೀಡಿದ್ದೇ ಹಿಂದೂ ಧರ್ಮ. ಇಷ್ಟೇ ಅಲ್ಲದೆ ಮತಾಂತರಗೊಳ್ಳುವ ಸ್ವಾತಂತ್ರ್ಯವನ್ನೂ ಹಿಂದೂ ಧರ್ಮವೇ ಕೊಟ್ಟಿದೆ. ಮತಾಂತರವಾದರೆ ಹಿಂದೂಗಳು ಕೊಲ್ಲಲು ಬರುವುದಿಲ್ಲ. ಹೀಗಿರುವಾಗ ಹಿಂದೂ ಧರ್ಮದಲ್ಲಿ ಹುಟ್ಟಿದ ನೀವು ಇಸ್ಲಾಂ ಧರ್ಮ ಶ್ರೇಷ್

ರಾಹುಲ್ ಗಾಂಧಿ, ಬಸವರಾಜ ರಾಯರೆಡ್ಡಿ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಭಗವದ್ಗೀತೆ, ವೇದಗಳು ಮತ್ತು ಹಿಂದೂ ಧರ್ಮದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವ ಧೈರ್ಯವಿದೆ. ಆದರೆ ಕುರಾನ್, ಬೈಬಲ್ ಅಥವಾ ಇತರ ಧರ್ಮಗಳ ಬಗ್ಗೆ ಹೀಗೆ ಮಾತನಾಡುವ ತಾಕತ್ತಿದೆಯೇ? ಚುನಾವಣೆ ಬಂದಾಗ ಶರ್ಟ್ ಮೇಲೆ ಜನಿವಾರ ಹಾಕುವ ರಾಹುಲ್ ಗಾಂಧಿ ಹಿಂಬಾಲಕರು ನೀವು. ಚುನಾವಣೆ ಸಮಯದಲ್ಲಿ ಮಠಗಳಿಗೆ ತೆರಳಿ ಸ್ವಾಮೀಜಿಗಳ ಕಾಲಿಗೆ ಅಡ್ಡಬಿದ್ದು ಸಾಷ್ಟಾಂಗ ನಮಸ್ಕಾರ ಹಾಕುತ್ತೀರಿ, ಚುನಾವಣೆ ಮುಗಿದ ಮೇಲೆ ಮಠ-ಮಂದಿರಗಳಿಗೆ ಹೋಗಲ್ಲ ಎನ್ನುತ್ತೀರಿ ಎಂದು ದೂರಿದರು.

ಸಮಾಜದಲ್ಲಿ ಇಂತಹ ವಿಷಬೀಜ ಬಿತ್ತುವ ವ್ಯಕ್ತಿ ಸಚಿವನಾಗಿ ಮುಂದುವರಿಯುವುದು ಸಮಾಜಕ್ಕೆ ಒಳ್ಳೆಯದಲ್ಲ. ಮುಖ್ಯಮಂತ್ರಿಗಳು ತಕ್ಷಣವೇ ರಾಯರೆಡ್ಡಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಅಥವಾ ಅವರೇ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಬೇಕು ಎಂದು ಭರತ್ ಶೆಟ್ಟಿ ಆಗ್ರಹಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 11 ಕಾರ್ಮಿಕರು ಸಾವು, ಹಲವರು ಗಂಭೀರಮಹಿಳೆಯರು ಮನೆಯಲ್ಲೇ ಇರಬೇಕು, ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು: ಧರ್ಮಗುರು ಕಾಂತಪುರಂ ವಿವಾದಾತ್ಮಕ ಹೇಳಿಕೆಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ – ಡ್ರೈವರ್, ಕಂಡಕ್ಟರ್ ಬಂಧನಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತಬಳ್ಳಾರಿ ಚಲೋ’ಗೆ ಇಂದು ಚಾಲನೆ; ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಾದಯಾತ್ರೆಗ್ಯಾರಂಟಿ ಹೊರೆ ಇಳಿಸಿದ ಜನ: 3 ಲಕ್ಷಕ್ಕೂ ಅಧಿಕ ಮಂದಿಯಿಂದ ‘ಗೃಹಜ್ಯೋತಿ’ ತ್ಯಾಗ!ಒಂದೇ ದಿನ 830 ಕೋಳಿಗಳ ನಿಗೂಢ ಸಾವು – ದುಷ್ಕರ್ಮಿಗಳ ಕೈವಾಡದ ಶಂಕೆಕಾಫಿ ಎಸ್ಟೇಟ್‌ನಲ್ಲಿ ಗುಂಡೇಟಿನಿಂದ ರೈತ ಸಾವು – ಮಿಸ್‌ಫೈರ್‌ ಶಂಕೆಮತಕ್ಕಾಗಿ ಬಗೆಬಗೆಯ ನಾಟಕ – ರಾಯರೆಡ್ಡಿ ವಜಾಕ್ಕೆ ಭರತ್‌ ಶೆಟ್ಟಿ ಆಗ್ರಹಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ