LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪಸಭಾಪತಿ ಪ್ರಾಣೇಶ್ ಪರಿಷತ್‌ ಸದಸ್ಯತ್ವ ರದ್ದು

Advertisement
Advertisement

ನವದೆಹಲಿ: ಉಪಸಭಾಪತಿ ಪ್ರಾಣೇಶ್  ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂ ಕೋರ್ಟ್‌  ಆದೇಶ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. 

ಆದರೆ, ಪ್ರಾಣೇಶ್‌ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಗಾಯತ್ರಿ ಶಾಂತೇಗೌಡ ಮೇಲುಗೈ ಸಾಧಿಸಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದಿಂದ ಪರಿಷತ್‌ ಸ್ಥಾನಕ್ಕೆ 2021ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧು ಆಗಿದ್ದವು. ಪ್ರಾಣೇಶ್‌ 1,188 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಗಳಿಸಿದ್ದರು. ಪ್ರಾಣೇಶ್‌ ಆರು ಮತಗಳ ಅಂತರದಿಂದ ಗೆದ್ದಿದ್ದರು.

ಆದರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ, ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡುವ ಅವಕಾಶ ಇಲ್ಲ ಎಂದು ಗಾಯತ್ರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಏನುಮೇರೇಷನ್ ಫಾರಂ ಸಲ್ಲಿಸಿದ ಡಾ. ವೀರಣ್ಣ ಚರಂತಿಮಠಬಿ.ವಿ.ವಿ.ಎಸ್. ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ "ವೈವಿಧ್ಯದಲ್ಲಿ ಏಕತೆ" ಉಡುಪು ಪ್ರದರ್ಶನಇನ್ಮುಂದೆ ಪಿಯುಸಿ ಉಪನ್ಯಾಸಕರು 9, 10ನೇ ತರಗತಿಗೆ ಪಾಠ ಮಾಡೋದು ಕಡ್ಡಾಯಸಚಿವ ಸಂಪುಟ ವಿಸ್ತರಣೆಗೆ ಸೋಮವಾರ ಶುಭ ಮುಹೂರ್ತ? – ಹೈಕಮಾಂಡ್ ಮುಂದೆ 2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿಹೊತ್ತಿ ಉರಿದ ಕೊಟ್ಟಿಗೆ – 12 ಜಾನುವಾರುಗಳು ಸಜೀವ ದಹನಆಫ್ರಿಕಾದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಗಳ ಮಾರಾಟ – ಚಿಕ್ಕಮಗಳೂರು ಹಕ್ಕಿಪಿಕ್ಕಿ ದಂಪತಿಯಿಂದ ನೀಚ ಕೃತ್ಯಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಕಾನೂನು ವಿದ್ಯಾರ್ಥಿನಿಯ ಹತ್ಯೆ – ವಿಚ್ಛೇದಿತ ಪ್ರಿಯಕರ ಸೇರಿ ಇಬ್ಬರು ಅಂದರ್‌ಅಶ್ಲೀಲ ಕಮೆಂಟ್ ಮಾಡೋ ಶೂರರಿಗೆ ಶಾಕ್ – 6 ತಿಂಗಳಿಂದ 1 ವರ್ಷ ಜಾಮೀನು ರಹಿತ ಜೈಲು ಶಿಕ್ಷೆಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವುಉಪಸಭಾಪತಿ ಪ್ರಾಣೇಶ್ ಪರಿಷತ್‌ ಸದಸ್ಯತ್ವ ರದ್ದು