LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಟೇನರ್‌ಗೆ ವೋಲ್ವೋ ಬಸ್ ಡಿಕ್ಕಿ – ಟೆಕ್ಕಿ ಸಾವು

Advertisement
Advertisement

ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಐಷಾರಾಮಿ ವೋಲ್ವೋ ಬಸ್  ಕಂಟೇನರ್‌ಗೆ  ಡಿಕ್ಕಿ ಹೊಡೆದು ಟೆಕ್ಕಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೈದರಾಬಾದ್‌ನಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಕಂಟೇನರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಪಕ್ಕದ ಬಸ್ ಮುಂಭಾಗದ ಬಾಗಿಲಿನ ಬಳಿ ಕೂತಿದ್ದ ಅನಂತಪುರ ಜಿಲ್ಲೆಯ ಚಿಲ್ಲಮತ್ತೂರು ಮೂಲದ ಸುಮಾರು 28 ವರ್ಷದ ಕೌಸರ್ ತಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಮೃತದೇಹ ಬಸ್‌ನ ಕಬ್ಬಿಣದ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದರಿಂದ, ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್‌ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆದರು. 

ಬಳಿಕ ಶವವನ್ನು ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿತು. ಮೃತ ಯುವತಿ ಕೊಡಿಕೊಂಡ ಚೆಕ್‌ಪೋಸ್ಟ್ ಬಳಿ ಬಸ್ ಹತ್ತಿದ್ದು, ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದು, ಉಳಿದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರವನ್ನು ಸುಗಮಗೊಳಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರುತಂದೆ ಮೊಬೈಲ್ ಕೊಡಿಸದಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆನಾಳೆ ರಾಜೀನಾಮೆ ಕೊಡ್ತೀನಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಳೂರು ಗೋಪಾಲಕೃಷ್ಣ ಆಕ್ರೋಶನಾನು ರಾಜೀನಾಮೆ ಬೆದರಿಕೆ ಹಾಕಿಲ್ಲ: ಎಸ್‌ಎಸ್‌ ಮಲ್ಲಿಕಾರ್ಜುನ್‌ಡಿವೋರ್ಸ್‌ ಬಳಿಕ ಖಿನ್ನತೆ; 5ನೇ ಮಹಡಿಯಿಂದ ಹಾರಿ ಮನೋವೈದ್ಯೆ ಆತ್ಮಹತ್ಯೆಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ: ತನ್ವೀರ್ ಸೇಠ್ ಅಸಮಾಧಾನಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ: ರುದ್ರಪ್ಪ ಲಮಾಣಿಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶಬ್ರೇಕಪ್ ವದಂತಿಗೆ ಪ್ರತಿಕ್ರಿಯೆ ಕೊಟ್ಟ ಅನುಪಮಾ ಪರಮೇಶ್ವರನ್