LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

CWMA ಸಭೆ ಬಳಿಕ ನಾಲೆಗಳಿಗೆ ನೀರು; ಈ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

Advertisement
Advertisement

ಮಂಡ್ಯ: ಮಂಡ್ಯ  ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡಬೇಕು ಎಂಬ ರೈತರ ಬೇಡಿಕೆ ನ್ಯಾಯಯುತವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ  ಹೇಳಿದರು.

ರೈತರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಆದರೆ ಜಲಾಶಯಗಳಲ್ಲಿ ನೀರಿನ ಕೊರತೆ ಇರುವ ಕಾರಣ ಕುಡಿಯುವ ನೀರಿಗೂ ಆದ್ಯತೆ ನೀಡಬೇಕಾದ ಪರಿಸ್ಥಿತಿ ಇದೆ ಎಂದರು.

ಜಿಲ್ಲೆಯ ಎಲ್ಲಾ ಶಾಸಕರು ಈಗಾಗಲೇ ಮುಖ್ಯಮಂತ್ರಿ ಜೊತೆ ಈ ಕುರಿತು ಚರ್ಚೆ ನಡೆಸಿದ್ದಾರೆ. ಸಿಎಂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ದೆಹಲಿಯಲ್ಲಿ ನಡೆಯಲಿರುವ CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಮತ್ತು CWRC (ಕಾವೇರಿ ನೀರು ನಿಯಂತ್ರಣ ಸಮಿತಿ) ಸಭೆಯ ಬಳಿಕ ನೀರು ಬಿಡುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಈ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಕುಡಿಯುವ ನೀರಿನ ಅಗತ್ಯ, ಬೆಳೆಗಳ ಸ್ಥಿತಿ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮಂಡಿಸಲಿದ್ದಾರೆ. ಸಭೆಯ ತೀರ್ಮಾನದ ಬಳಿಕ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರ ಜೊತೆ ಚರ್ಚಿಸಿ ನಾಲೆಗಳಿಗೆ ನೀರು ಬಿಡುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಆರ್‌ಎಸ್ ಜಲಾಶಯ ತುಂಬುವ ನಿರೀಕ್ಷೆಯೂ ಇದೆ. ರೈತರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು ಎಂದು ಚಲುವರಾಯಸ್ವಾಮಿ ಮನವಿ ಮಾಡಿದರು.

ಇದು ರೈತರ ಬದುಕಿನ ಪ್ರಶ್ನೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಜಿಲ್ಲೆಯ ರೈತರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸರ್ಕಾರದ ಜೊತೆ ಸಹಕರಿಸಬೇಕು. ಸರ್ಕಾರ ರೈತರ ಜೊತೆಗಿದೆ ಎಂದು ಅವರು ಹೇಳಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ರಾಜಕೀಯ ಬೇರೆ, ಕೆಲಸ ಬೇರೆ – ಕೃಷ್ಣ ಬೈರೇಗೌಡ ಕಾರ್ಯವೈಖರಿಗೆ ಹೆಚ್‌ಡಿಡಿ ಶ್ಲಾಘನೆಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆಬಿಡದಿ ಟೌನ್‌ಶಿಪ್ ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು: ನಿಖಿಲ್ ಆಗ್ರಹಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿಸುಪ್ರೀಂನಲ್ಲಿ ಲಾಲೂಗೆ ಬಿಗ್‌ ರಿಲೀಫ್‌ – ಸಿಬಿಐ ಅರ್ಜಿ ವಜಾ50 ಲಕ್ಷಕ್ಕಾಗಿ ಪತ್ನಿ, ಮಾವನ ಮೇಲೆ ಹಲ್ಲೆಗೆ ಯತ್ನ – PSIಗೆ ಪರಸ್ತ್ರೀ ವ್ಯಾಮೋಹ, ಕಾಮಪುರಾಣ ಬಯಲುಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆಯಂತೆ ಟೌನ್‌ಶಿಪ್‌ – ಡಿಕೆಶಿ ವಿರುದ್ಧ ಹೆಚ್‌ಡಿಡಿ ಸ್ಫೋಟಕ ಆರೋಪಕಲಾದಗಿಗೆ ಮೋಹನ್ ಭಾಗವತ್ ಭೇಟಿ- ಯುವ ಕಾರ್ಯಕರ್ತನ ಮನೆಯಲ್ಲಿ ಚಹಾ ಸೇವನೆCWMA ಸಭೆ ಬಳಿಕ ನಾಲೆಗಳಿಗೆ ನೀರು; ಈ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ