LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆ ಆರಂಭಿಸುತ್ತೇವೆ: ಡಿ.ಕೆ ಶಿವಕುಮಾರ್‌

Advertisement

ಬೆಂಗಳೂರು: ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು  ಈ ವರ್ಷದಿಂದಲೇ ಆರಂಭಿಸುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ (D.K. Shivakumar) ಹೇಳಿದರು.

ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ, ಅಧಿಕಾರ ಹಸ್ತಾಂತರಿಸಿ ಅವರು ಮಾತಾಡಿದರು. ಈ ವೇಳೆ ವಿದ್ಯಾರ್ಥಿ ಚುನಾವಣೆ ಆರಂಭಿಸುವ ಬಗ್ಗೆ ಅವರು ಮಾಹಿತಿ ನೀಡಿದರು.

ಈ ವೇಳೆ ತಾವು ಅಧಿಕಾರ ವಹಿಸಿಕೊಂಡ ದಿನವನ್ನು ನೆನಪಿಸಿಕೊಂಡರು. ನನಗೆ 2020ರ ಮಾ.10 ರಂದು ಸೋನಿಯಾ ಗಾಂಧಿ ಪಕ್ಷದ ಅಧಿಕಾರ ನೀಡಿದ್ದರು. ಆಗ ಇಷ್ಟೊಂದು ದೊಡ್ಡದಾಗಿ ಕಾರ್ಯಕ್ರಮ ಮಾಡೋಕೆ ಆಗಿರಲಿಲ್ಲ. ಜೂಮ್ ಕಾಲ್‌ನಲ್ಲೇ ನಾನು ಅಧಿಕಾರ ಸ್ವೀಕರಿಸಿದೆ. ನಿಮ್ಮ ವಿಶ್ವಾಸ, ಸಹಕಾರದಿಂದ ಸೇವೆ ಮಾಡಿದ್ದೇನೆ. ನಾನು ಮನುಷ್ಯ, ನನ್ನ ಕೈಯಲ್ಲಿ ಅನೇಕ ತಪ್ಪು ಆಗಿರಬಹುದು ಎಂದರು. 

ಕೋವಿಡ್ ಕಾಲದಲ್ಲಿ ಸಿದ್ದರಾಮಯ್ಯ (Siddaramaiah) ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದರು. ಅಂದು ನಾನು, ಸಿದ್ದರಾಮಯ್ಯ ಅವರು ಸೇರಿ ಸಂಕಲ್ಪ ಮಾಡಿದ್ದೆವು. ಖರ್ಗೆ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ವೇಣುಗೋಪಾಲ್ ಅವರು ಪಕ್ಷದ ಕಾರ್ಯದರ್ಶಿಯಾಗಿ ಸಾಕ್ಷಿಯಾಗಿದ್ದರು.‌ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರು ನನಗೆ ಆಶೀರ್ವಾದ ಮಾಡಿದರು. ಶುಭ ಘಳಿಗೆಯಲ್ಲಿ ಅಂದು ನಾನು ಅಧಿಕಾರ ಸ್ವೀಕರಿಸಿದ್ದೆ.

ಕೋವಿಡ್ ಕಾಲದಲ್ಲಿ ಮನೆಯಿಂದ ಹೊರಗೆ ಹೋಗೋಕೆ ಆಗಿರಲಿಲ್ಲ. ಜೂಮ್‌ ಮೀಟಿಂಗ್ ಮೂಲಕವೇ ಅನೇಕ ಸಮಸ್ಯೆ ಪರಿಹರಿಸಿದ್ದೇವೆ.‌ ಕೋಟಿ ಕೋಟಿ ಹಣ ವೆಚ್ಚ ಮಾಡಿ ಫುಡ್ ಕಿಟ್ ಕೊಟ್ಟಿದ್ದೇವೆ. ಕೆಲವರು ಯಾದಗಿರಿ ವರೆಗೂ ಬಸ್‌ನಲ್ಲಿ ಹೋಗಬೇಕಿತ್ತು. ಆಗ ಕೆಪಿಸಿಸಿ ವತಿಯಿಂದ 1 ಕೋಟಿ ರೂ. ಚೆಕ್ ಕೊಟ್ಟೆ. ರೈಲು, ಬಸ್‌ನಲ್ಲಿ ಹೋಗೋಕೆ ವ್ಯವಸ್ಥೆ ಮಾಡಿದೆ. ಅಂದು ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಆಕ್ಸಿಜನ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರಿ ನೌಕರಿ ನೀಡಿದ್ದೇವೆ ಎಂದರು.

ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡಿದ್ದೆವು. ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಿದ್ದೆವು. ಆಗ ಇಬ್ಬರು ಮಂತ್ರಿಗಳು ರಾಜೀನಾಮೆ ಕೊಡಿಸಿದ್ದೆವು. ಆಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಕಿರುಕುಳ ನೀಡಿದರು. ಅದೆಲ್ಲಾ ಗಮನದಲ್ಲಿಟ್ಟುಕೊಂಡು ಹೋರಾಟ ಮಾಡಿದ್ವಿ. ಕೃಷ್ಣ ಕಾವೇರಿ ಹೋರಾಟ, ಮೇಕೆದಾಟು ಹೋರಾಟ ಮಾಡಿದ್ವಿ. ಅಂದು ಬಿಜೆಪಿವರು ಅವಕಾಶ ನೀಡಲಲ್ಲಿ. ಈಗ ಅದೆಲ್ಲಾ ಇತಿಹಾಸ ಎಂದರು.

ಸಿದ್ದರಾಮಯ್ಯ ಅವರು ಕೊಟ್ಟ ಆಡಳಿತ ಇಡೀ ದೇಶಕ್ಕೆ ಒಂದು ಮಾದರಿಯಾಗಿದೆ. ಈಗ ಬಿಕೆ ಹರಿಪ್ರಸಾದ್ (B.K Hariprasad) ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹರಿಪ್ರಸಾದ್ ಜೊತೆ ಇಡೀ ಸರ್ಕಾರ ಇರುತ್ತದೆ. 2028ರಲ್ಲಿ ಮತ್ತೊಮ್ಮೆ ನಾವು ಅಧಿಕಾರಕ್ಕೆ ಏರಬೇಕು ಎಂದರು.

ಪ್ರತಿ ಪಂಚಾಯತಿ, ಪ್ರತಿ ವಾರ್ಡ್‌ಗೆ ಹೆಚ್ಚುವರಿಯಾಗಿ 5 ಜನ ಕಾರ್ಯಕರ್ತರನ್ನು ಗ್ಯಾರಂಟಿ ಸಮಿತಿಗೆ ನೇಮಕ ಮಾಡಲು ತೀರ್ಮಾನಿಸಿದ್ದೇವೆ. ಗ್ಯಾರಂಟಿ ಪರಿಷ್ಕರಣೆಗೆ ಅವರನ್ನ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರಿ ನೌಕರರಿಗೆ ಇಲ್ವಾ ಗ್ಯಾರಂಟಿ?ಜೈಲಿನಲ್ಲಿ ಪ್ರಾಣಾಯಾಮ, ಶವಾಸನ ಮಾಡಿದ ದರ್ಶನ್‌ಮೈಸೂರು ರೈಲು ನಿಲ್ದಾಣದಲ್ಲಿ 40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರು ಪತ್ತೆ – ತೀವ್ರ ವಿಚಾರಣೆಅಡ್ಡ ಮತದಾನ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಚಂದ್ರು ಲಮಾಣಿ51 ವರ್ಷಗಳಿಂದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ದೇವಸ್ಥಾನ ಮತ್ತೆ ಗೋಚರ!ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟುಹೆಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಬಿಗ್ ಶಾಕ್: ಕ್ಲಿನಿಕಲ್ ಟ್ರಯಲ್ ನಡೆಸದಂತೆ ಕೇಂದ್ರ ಸರ್ಕಾರದಿಂದ 2 ವರ್ಷ ನಿಷೇಧಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ – BMTC 44%, KSRTC 33% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪಧೈರ್ಯವಿದ್ದರೆ ನನ್ನ ಜೊತೆ ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ – ಡಿಕೆಶಿಗೆ ಹೆಚ್‌ಡಿಕೆ ಸವಾಲು