ಬೆಂಗಳೂರು: ರಾಜ್ಯದಲ್ಲಿ ಮುಂಗಾರು ತಗ್ಗಿದ್ದು, ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಈ ಹಿನ್ನೆಲೆ ಮುಂದಿನ ಒಂದು ವಾರ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಲಾಖೆ ಮುನ್ಸೂಚನೆ ಪ್ರಕಾರ, ಮುಂಗಾರಿನ ಪ್ರಮಾಣ ಕಡಿಮೆಯಾಗಿದ್ದು, ಮಳೆ ಇಳಿಕೆಯಾಗಿದೆ. ಹೀಗಾಗಿ ರಾಜ್ಯದ ಹಲವೆಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಭಾಗದ ಅಲ್ಲಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣವಿರಲಿದ್ದು, ಕೆಲವೊಮ್ಮೆ ಮಾತ್ರ ಸಾಧಾರಣ ಮಳೆಯಾಗುವ ಸಂಭವವಿದೆ.

