LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆ

Advertisement
Advertisement

ನವದೆಹಲಿ: ಮಹಿಳಾ ಕುಸ್ತಿಪಟುಗಳ  ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ, ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಹ-ಆರೋಪಿ ವಿನೋದ್ ತೋಮರ್ ಅವರನ್ನು ದೆಹಲಿ ಕೋರ್ಟ್‌ ಖುಲಾಸೆಗೊಳಿಸಿದೆ.

ಕೋರ್ಟ್‌ ತೀರ್ಪು ನೀಡುತ್ತಿದ್ದಂತೆ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಹಾರಹಾಕಿ ಸಂಭ್ರಮಿಸಿದ್ದಾರೆ. ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್, ನನ್ನ ವಿರುದ್ಧ ಆರೋಪ ಹೊರಿಸಲಾದ ದಿನ, ಆರೋಪ ಸಾಬೀತಾದರೆ, ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದೆ. ಇಂದು, ನ್ಯಾಯಾಲಯವು ನನ್ನನ್ನು ಖುಲಾಸೆಗೊಳಿಸಿದೆ. ʻಗೌರವಾನ್ವಿತವಾಗಿ ಖುಲಾಸೆಗೊಳಿಸಲಾಗಿದೆ’ ಎಂಬ ಪದವನ್ನು ಕೋರ್ಟ್ ಬಳಸಿದೆ‌ ಎಂದು ಹೇಳಿದ್ದಾರೆ. 

ಬ್ರಿಜ್ ಭೂಷಣ್ ವಿರುದ್ಧ 6 ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿ ದೂರು ನೀಡಿದ್ದರು. ಜು.2 ರಂದು ರೋಸ್ ಅವೆನ್ಯೂ ನ್ಯಾಯಾಲಯ ( Rouse Avenue Court) ಈ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ‌, ಆಗಸ್ಟ್ 3ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಅದರಂತೆ ಇಂದು ತೀರ್ಪು ಹೊರಬಿದ್ದಿದೆ.

ಸಿಂಗ್ ವಿರುದ್ಧ ಜಂತರ್ ಮಂತರ್‌ನಲ್ಲಿ ಮಹಿಳಾ ಕುಸ್ತಿಪಟುಗಳು ಭಾರೀ ಪ್ರತಿಭಟನೆ ನಡೆಸಿದ್ದರು. ನಂತರ ದೆಹಲಿ ಪೊಲೀಸರು ಸಿಂಗ್‌ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಿದ ನಂತರ, ಜೂನ್ 2023 ರಲ್ಲಿ 1500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಈ ಆರೋಪ ಕೇಳಿಬಂದ ಬೆನ್ನಲ್ಲೇ 2024 ರಲ್ಲಿ ಉತ್ತರ ಪ್ರದೇಶದ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರಕ್ಕೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿತ್ತು. ಬದಲಿಗೆ ಅವರ ಮಗ ಕರಣ್ ಭೂಷಣ್ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿತ್ತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರುತಂದೆ ಮೊಬೈಲ್ ಕೊಡಿಸದಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆನಾಳೆ ರಾಜೀನಾಮೆ ಕೊಡ್ತೀನಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಳೂರು ಗೋಪಾಲಕೃಷ್ಣ ಆಕ್ರೋಶನಾನು ರಾಜೀನಾಮೆ ಬೆದರಿಕೆ ಹಾಕಿಲ್ಲ: ಎಸ್‌ಎಸ್‌ ಮಲ್ಲಿಕಾರ್ಜುನ್‌ಡಿವೋರ್ಸ್‌ ಬಳಿಕ ಖಿನ್ನತೆ; 5ನೇ ಮಹಡಿಯಿಂದ ಹಾರಿ ಮನೋವೈದ್ಯೆ ಆತ್ಮಹತ್ಯೆಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ: ತನ್ವೀರ್ ಸೇಠ್ ಅಸಮಾಧಾನಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ: ರುದ್ರಪ್ಪ ಲಮಾಣಿಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶಬ್ರೇಕಪ್ ವದಂತಿಗೆ ಪ್ರತಿಕ್ರಿಯೆ ಕೊಟ್ಟ ಅನುಪಮಾ ಪರಮೇಶ್ವರನ್